AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ‘ಹಿಂಸೆಯ ವೈಭವೀಕರಣವೂ ಟ್ಯಾಲೆಂಟ್​ ಆಗಿಬಿಟ್ಟಿದೆ’: ‘ಸಲಾರ್​’ ಟೀಸರ್​ ಬಿಡುಗಡೆ ಬೆನ್ನಲ್ಲೇ ವಿವೇಕ್​ ಅಗ್ನಿಹೋತ್ರಿ ಟ್ವೀಟ್​

Salaar Movie Teaser: ‘ಅರ್ಥಹೀನ ಸಿನಿಮಾವನ್ನು ಪ್ರಚಾರ ಮಾಡುವುದು ಮತ್ತು ನಟನಲ್ಲದ ವ್ಯಕ್ತಿಯನ್ನು ದೊಡ್ಡ ಸ್ಟಾರ್​ ರೀತಿ ಬಿಂಬಿಸುವುದು ದೊಡ್ಡ ಪ್ರತಿಭೆ ಎಂಬಂತಾಗಿದೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟೀಕಿಸಿದ್ದಾರೆ.

Vivek Agnihotri: ‘ಹಿಂಸೆಯ ವೈಭವೀಕರಣವೂ ಟ್ಯಾಲೆಂಟ್​ ಆಗಿಬಿಟ್ಟಿದೆ’: ‘ಸಲಾರ್​’ ಟೀಸರ್​ ಬಿಡುಗಡೆ ಬೆನ್ನಲ್ಲೇ ವಿವೇಕ್​ ಅಗ್ನಿಹೋತ್ರಿ ಟ್ವೀಟ್​
ಪ್ರಭಾಸ್​, ವಿವೇಕ್ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Jul 06, 2023 | 12:49 PM

Share

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಅನೇಕ ವಿಚಾರಗಳ ಬಗ್ಗೆ ಟ್ವೀಟ್​ ಮಾಡುತ್ತಾರೆ. ಸಿನಿಮಾ, ರಾಜಕೀಯ ಸೇರಿದಂತೆ ಹಲವು ಸಂಗತಿಗಳ ಕುರಿತು ಅವರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇಂದು (ಜುಲೈ 6) ಬೆಳಗ್ಗೆಯೇ ಅವರು ಒಂದು ಮುಖ್ಯವಾದ ವಿಷಯದ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಹಿಂಸೆಯನ್ನು ಆಕರ್ಷಕವಾಗಿ ತೋರಿಸುವ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬುದನ್ನು ವಿವೇಕ್​ ಅಗ್ನಿಹೋತ್ರಿ ತಿಳಿಸಿದ್ದಾರೆ. ಇಂದು ‘ಸಲಾರ್​’ (Salaar Movie) ಸಿನಿಮಾದ ಟೀಸರ್​ ಬಿಡುಗಡೆ ಆಗಿದೆ. ಅದರಲ್ಲೂ ಹಿಂಸೆಯ ದೃಶ್ಯಗಳು ಇವೆ. ‘ಸಲಾರ್​’ ಟೀಸರ್​ (Salaar Teaser) ರಿಲೀಸ್​ ಆದ ಸ್ವಲ್ಪ ಹೊತ್ತಿನ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರು ‘ಸಿನಿಮಾದಲ್ಲಿ ಹಿಂಸೆಯ ವೈಭವೀಕರಣ’ ಎಂಬ ಟಾಪಿಕ್​ ಬಗ್ಗೆ ಟ್ವೀಟ್​ ಮಾಡಿರುವುದು ಅಚ್ಚರಿಗೆ ಕಾರಣ ಆಗಿದೆ.

ವಿವೇಕ್​ ಅಗ್ನಿಹೋತ್ರಿ ಅವರು ತಮ್ಮ ಟ್ವೀಟ್​ನಲ್ಲಿ ಒಮ್ಮೆ ಕೂಡ ‘ಸಲಾರ್​’ ಸಿನಿಮಾದ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೂ ಕೂಡ ಅವರು ‘ಸಲಾರ್​’ ಟೀಸರ್​ ಬಿಡುಗಡೆ ಆದ ಬೆನ್ನಲ್ಲೇ ಈ ರೀತಿ ಟ್ವೀಟ್​ ಮಾಡಿರುವುದರಿಂದ ಈ ಅನುಮಾನ ಮೂಡಿದೆ. ಈ ಟೀಸರ್​ನಲ್ಲಿ ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳಿವೆ. ಪ್ರಭಾಸ್​ ಅವರು ಹೊಡಿಬಡಿ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ. ಗನ್​, ಮಚ್ಚು, ಬಾಂಬ್​ ಮುಂತಾದ ಮಾರಕಾಸ್ತ್ರಗಳು ಇದರಲ್ಲಿ ರಾರಾಜಿಸಿವೆ. ರಕ್ತ ಮೆತ್ತಿಕೊಂಡ ಪ್ರಭಾಸ್​ ಅವರ ಕೈ ಕೂಡ ಹೈಲೈಟ್​ ಆಗಿದೆ.

ವಿವೇಕ್​ ಅಗ್ನಿಹೋತ್ರಿ ಟ್ವೀಟ್​ನಲ್ಲಿ ಏನಿದೆ?

‘ಜನರು ಕ್ರೌರ್ಯ ತುಂಬಿಕೊಂಡು ಹುಟ್ಟುವುದಿಲ್ಲ. ನಿಮ್ಮ ಮನಸ್ಸಿನಲ್ಲಿ ಶಾಂತಿ ತುಂಬಬೇಕಿದ್ದ ನಾಯಕರು ಜನಪ್ರಿಯ ಸಿನಿಮಾ, ಸಾಹಿತ್ಯ ಮತ್ತು ರಾಜಕೀಯದಲ್ಲಿ ಹಿಂಸೆಯನ್ನು ಆಕರ್ಷಕವಾಗಿಸುವ ಮೂಲಕ ನಿಮ್ಮ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಇಂಥ ಕ್ರೂರ ಜಗತ್ತಿನಲ್ಲಿ ಸೃಜನಾತ್ಮಕ ಜಾಗೃತಿ ಮಾತ್ರವೇ ಪರಿಹಾರ’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ.

‘ಸಿನಿಮಾದಲ್ಲಿ ಅತಿಯಾದ ಹಿಂಸೆಯನ್ನು ವೈಭವೀಕರಿಸುವುದು ಕೂಡ ಈಗ ಟ್ಯಾಲೆಂಟ್​ ಎಂಬಂತೆ ಆಗಿದೆ. ಇಂಥ ಅರ್ಥಹೀನ ಸಿನಿಮಾವನ್ನು ಪ್ರಚಾರ ಮಾಡುವುದು ಮತ್ತು ನಟನಲ್ಲದ ವ್ಯಕ್ತಿಯನ್ನು ದೊಡ್ಡ ಸ್ಟಾರ್​ ರೀತಿ ಬಿಂಬಿಸುವುದು ದೊಡ್ಡ ಪ್ರತಿಭೆ ಎಂಬಂತಾಗಿದೆ. ಇನ್ನು, ಜನರನ್ನು ಅತೀ ದಡ್ಡರು ಎಂದು ಕರೆಯುವುದು ಕೂಡ ಎಲ್ಲಕ್ಕಿಂತ ದೊಡ್ಡ ಟ್ಯಾಲೆಂಟ್​ ಆಗಿದೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?

2022ರಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತೆರೆಕಂಡಿತು. ಆ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡತಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!