AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ಮಲ್ಯ ಜೀವನಾಧಾರಿತ ಬಯೋಪಿಕ್​ ಚಿತ್ರೀಕರಣ ಶೀಘ್ರದಲ್ಲೇ ಆರಂಭ

ದಿ ವಿಜಯ್​ ಮಲ್ಯ ಲೈಫ್​ ಸ್ಟೋರಿ ಎನ್ನುವ ಪುಸ್ತಕದ ಆಧಾರದ ಮೇಲೆ ಅದರಲ್ಲಿರುವ ಅಂಶಗಳನ್ನು ಇಟ್ಟುಕೊಂಡು ವೆಬ್​ ಸೀರೀಸ್​ ಮಾಡಲಾಗುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ

ಮದ್ಯದ ದೊರೆ ವಿಜಯ್​ಮಲ್ಯ ಜೀವನಾಧಾರಿತ ಬಯೋಪಿಕ್​ ಚಿತ್ರೀಕರಣ ಶೀಘ್ರದಲ್ಲೇ ಆರಂಭ
ವಿಜಯ್​ ಮಲ್ಯ
TV9 Web
| Edited By: |

Updated on: Dec 18, 2021 | 2:05 PM

Share

ಮದ್ಯಲೋಕದ ದೊರೆ ವಿಜಯ್​ ಮಲ್ಯ ಜೀವನದ ಕಥೆ ವೆಬ್​ ಸೀರೀಸ್​ ಆಗುತ್ತಿದೆ. ಸಾವಿರಾರು ಕೋಟಿ ವಂಚಿಸಿ ಇಂಗ್ಲೆಂಡ್​ಗೆ ಪರಾರಿಯಾದ ಮಲ್ಯ ಜೀವನಾಧಾರಿತ ಬಯೋಪಿಕ್​ ತಯಾರಾಗುತ್ತಿದೆ. ದಿ ವಿಜಯ್​ ಮಲ್ಯ ಲೈಫ್​ ಸ್ಟೋರಿ ಎನ್ನುವ ಪುಸ್ತಕದ ಆಧಾರದ ಮೇಲೆ ಅದರಲ್ಲಿರುವ ಅಂಶಗಳನ್ನು ಇಟ್ಟುಕೊಂಡು ವೆಬ್​ ಸೀರೀಸ್​ ಮಾಡಲಾಗುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ ಎಂದು ಹೇಳಲಾಗಿದೆ. ಆಲ್​ಮೈಟಿ ಮೋಷನ್​ ಪಿಕ್ಚರ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಬ್ಲಿನ್​ ಕೌರ್​ ಅವರು pz ಪಿಕ್ಚರ್​ ಸಂಸ್ಥೆಯು ಜಂಟಿಯಾಗಿ ವೆಬ್​ ಸೀರೀಸ್​ ನಿರ್ಮಾಣ ಮಾಡುತ್ತಿದ್ದಾರೆ.  ಖ್ಯಾತ ಪತ್ರಕರ್ತ, ಬರಹಗಾರ ಕೆ ಗಿರೀಶ್ ಅವರು ವಿಜಯ್​ ಮಲ್ಯ ಜೀವನದ ಸೋಲು, ಗೆಲುವಿನ ಕುರಿತು ದಿ ವಿಜಯ್​ ಮಲ್ಯ ಲೈಫ್​ ಸ್ಟೋರಿ ಪುಸ್ತಕದಲ್ಲಿ ಬರೆದಿದ್ದಾರೆ. ಇದರ ಪ್ರಮುಖ ಅಂಶಗಳನ್ನು ಇಟ್ಟುಕೊಂಡು ವೆಬ್​ ಸೀರೀಸ್​ನಲ್ಲಿ ವಿಜಯ್​ ಮಲ್ಯ ಅವರ ಬಾಲ್ಯ, ಅವರ ಯಶಸ್ಸು, ಸೋಲಿನ ಕತೆಗಳನ್ನು ತರಲಾಗುತ್ತಿದೆ ಎಂದು ಹೇಳಲಾಗಿದೆ.

ಎಮ್​ ಎಕ್ಸ್​ ಪ್ಲೇಯರ್​ ಚಿತ್ರದ ಹಕ್ಕುಗಳನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ. ವಿಜಯ್​ ಮಲ್ಯ ಪಾತ್ರದಲ್ಲಿ ಬಾಲಿವುಡ್​ ನಟರೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವಿಚಾರ ಹರಿದಾಡುತ್ತಿದ್ದು, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಎಮ್​ ಎಕ್ಸ್​ ಪ್ಲೇಯರ್​ ಒಟಿಟಿ ಮೂಲಕ ವೆಬ್​ ಸೀರೀಸ್​ ಅನ್ನು ಬಿಡುಗಡೆಗೊಳಿಸಲಿದೆ. ಈಗಾಗಲೇ ಎಮ್​ ಎಕ್ಸ್​ ಪ್ಲೇಯರ್​ಆಶ್ರಮ್​, ಕ್ವೀನ್​ನಂತಹ ವೆಬ್​ ಸೀರೀಸ್​ಗಳನ್ನು ಸ್ಟ್ರೀಮಿಂಗ್​ ಮಾಡಿದೆ. ಹೀಗಾಗಿ ವಿಜಯ್​ ಮಲ್ಯ ಅವರ ಜೀವನದ ಸಂಪೂರ್ಣ ಚಿತ್ರಣವನ್ನು ಪಡೆಯಲು ವೀಕ್ಷಕರೂ ಕೂಡ ಕಾತುರದಿಂದ ಕಾಯುತ್ತಿದ್ದಾರೆ.

ಉನೈಟೆಡ್​ ಸ್ಪಿರಿಟ್ಸ್​ , ಕಿಂಗ್​ಪಿಷರ್​ನಂತಹ ಮದ್ಯದ ಕಂಪನಿಗಳನ್ನು ಹೊಂದಿದ್ದ ವಿಜಯ್​ ಮಲ್ಯ ಭಾರತ ಮಾತ್ರವಲ್ಲದೆ ವಿದೇಶಿ ಬ್ಯಾಂಕ್​ಗಳಲ್ಲೂ ಕೋಟಿಗಟ್ಟಲೇ ವೆಚ್ಚದಲ್ಲಿ ಸಾಲ ಮಾಡಿಕೊಂಡಿದ್ದರು ಈ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆ ಇಂಗ್ಲೆಂಡಿಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!