AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!
ವೈಜಯಂತಿ ಅಡಿಗ-ಪ್ರಿಯಾಂಕಾ ತಿಮ್ಮೇಶ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 10:43 PM

Share

ಬಿಗ್​ ಬಾಸ್​ ಏಪ್ರಿಲ್​ 8ರ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್​ ಸಿಕ್ಕಿದೆ. ಮನೆಗೆ ಒಂದೇ ದಿನ ಎರಡೆರಡು ವೈಲ್ಡ್​ ಕಾರ್ಡ್​ ಎಂಟ್ರಿ ಸಿಕ್ಕಿದೆ. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆಗೆ ಹೊಸ ಸ್ಪರ್ಧಿಯಾಗಿ ಬಂದಿದ್ದಾರೆ. ಈ ಮೂಲಕ ಮನೆಯ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ವಾರ ನೂತನ ಸ್ಪರ್ಧಿಯಾಗಿ ಮೊದಲು ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಕನ್​ಫೆಷನ್​ ರೂಂನಿಂದ ಅವರು ನೇರವಾಗಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಾಸುದೇವ ಅಡಿಗ ಅವರ ಮಗಳು ವೈಜಯಂತಿ ಅಡಿಗ. ಹೋಟೆಲ್​ ಉದ್ಯಮ ಇವರ ಮುಖ್ಯ ವೃತ್ತಿ. ಅಮ್ಮಚ್ಚಿಯೆಂಬ ನೆನಪು ಸಿನಿಮಾದಲ್ಲೂ ವೈಜಯಂತಿ ಬಣ್ಣ ಹಚ್ಚಿದ್ದಾರೆ. ಇವರನ್ನು ನೋಡಿ ಮಂಜು ತುಂಬಾನೇ ಖುಷಿ ಆಗಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ. 2015ರಲ್ಲಿ ಗಣಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪ್ರಿಯಾಂಕಾ ತಿಮ್ಮೇಶ್ ಕೆಲ ಅನ್ಯ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಮತ್ತು ಪ್ರಿಯಾಂಕಾ ಬಿಗ್​ಬಾಸ್ ಮೂಲಕ ಹೇಗೆ ಮನರಂಜಿಸಲಿದ್ದಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಎಲ್ಲಕ್ಕಿಂತ ಮಿಗಿಲಾಗಿ ಮನೆಗೆ ಯಾರಾದರೂ ಹೊಸ ಹುಡುಗಿ ಬರಲಿ ಎಂದು ಕಾಯುತ್ತಿದ್ದ ಮಂಜುಗೆ ಇದು ಖುಷಿ ಕೊಟ್ಟಿರುತ್ತದೆ ಎಂದು ಕೆಲವರು ಕಾಲೆಳೆದಿದ್ದಾರೆ.

ಅಂದಹಾಗೆ, ಕಾಣೆಯಾಗಿದ್ದ ಮಂಜು ಕನ್​ಫೆಷನ್​​ರೂಂನಲ್ಲೇ ಕುಳಿತಿದ್ದರು. ಅವರು ಹೊರ ಬಂದ ನಂತರ ಮನೆಯವರೆಲ್ಲರಿಗೂ ಪರಿಚಯಿಸಿದರು. ನಂತರ ಪ್ರಿಯಾಂಕಾ ಚಿಕನ್​ ಹಿಡಿದುಕೊಂಡೇ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

BBK 8 Wild Card Entry: ಬಿಗ್​ಬಾಸ್​ಗೆ ಮತ್ತೊಂದು ವೈಲ್ಡ್​ ಕಾರ್ಡ್​ ಎಂಟ್ರಿ: ಆದ್ರೆ ಈ ನಟಿ ಮನೆಗೆ ಕಾಲಿಡುತ್ತಿದ್ದಂತೆ ಮಂಜು ನಾಪತ್ತೆ!

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ