AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!
ವೈಜಯಂತಿ ಅಡಿಗ-ಪ್ರಿಯಾಂಕಾ ತಿಮ್ಮೇಶ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 10:43 PM

Share

ಬಿಗ್​ ಬಾಸ್​ ಏಪ್ರಿಲ್​ 8ರ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್​ ಸಿಕ್ಕಿದೆ. ಮನೆಗೆ ಒಂದೇ ದಿನ ಎರಡೆರಡು ವೈಲ್ಡ್​ ಕಾರ್ಡ್​ ಎಂಟ್ರಿ ಸಿಕ್ಕಿದೆ. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆಗೆ ಹೊಸ ಸ್ಪರ್ಧಿಯಾಗಿ ಬಂದಿದ್ದಾರೆ. ಈ ಮೂಲಕ ಮನೆಯ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ವಾರ ನೂತನ ಸ್ಪರ್ಧಿಯಾಗಿ ಮೊದಲು ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಕನ್​ಫೆಷನ್​ ರೂಂನಿಂದ ಅವರು ನೇರವಾಗಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಾಸುದೇವ ಅಡಿಗ ಅವರ ಮಗಳು ವೈಜಯಂತಿ ಅಡಿಗ. ಹೋಟೆಲ್​ ಉದ್ಯಮ ಇವರ ಮುಖ್ಯ ವೃತ್ತಿ. ಅಮ್ಮಚ್ಚಿಯೆಂಬ ನೆನಪು ಸಿನಿಮಾದಲ್ಲೂ ವೈಜಯಂತಿ ಬಣ್ಣ ಹಚ್ಚಿದ್ದಾರೆ. ಇವರನ್ನು ನೋಡಿ ಮಂಜು ತುಂಬಾನೇ ಖುಷಿ ಆಗಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ. 2015ರಲ್ಲಿ ಗಣಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪ್ರಿಯಾಂಕಾ ತಿಮ್ಮೇಶ್ ಕೆಲ ಅನ್ಯ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಮತ್ತು ಪ್ರಿಯಾಂಕಾ ಬಿಗ್​ಬಾಸ್ ಮೂಲಕ ಹೇಗೆ ಮನರಂಜಿಸಲಿದ್ದಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಎಲ್ಲಕ್ಕಿಂತ ಮಿಗಿಲಾಗಿ ಮನೆಗೆ ಯಾರಾದರೂ ಹೊಸ ಹುಡುಗಿ ಬರಲಿ ಎಂದು ಕಾಯುತ್ತಿದ್ದ ಮಂಜುಗೆ ಇದು ಖುಷಿ ಕೊಟ್ಟಿರುತ್ತದೆ ಎಂದು ಕೆಲವರು ಕಾಲೆಳೆದಿದ್ದಾರೆ.

ಅಂದಹಾಗೆ, ಕಾಣೆಯಾಗಿದ್ದ ಮಂಜು ಕನ್​ಫೆಷನ್​​ರೂಂನಲ್ಲೇ ಕುಳಿತಿದ್ದರು. ಅವರು ಹೊರ ಬಂದ ನಂತರ ಮನೆಯವರೆಲ್ಲರಿಗೂ ಪರಿಚಯಿಸಿದರು. ನಂತರ ಪ್ರಿಯಾಂಕಾ ಚಿಕನ್​ ಹಿಡಿದುಕೊಂಡೇ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

BBK 8 Wild Card Entry: ಬಿಗ್​ಬಾಸ್​ಗೆ ಮತ್ತೊಂದು ವೈಲ್ಡ್​ ಕಾರ್ಡ್​ ಎಂಟ್ರಿ: ಆದ್ರೆ ಈ ನಟಿ ಮನೆಗೆ ಕಾಲಿಡುತ್ತಿದ್ದಂತೆ ಮಂಜು ನಾಪತ್ತೆ!

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ