AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!
ವೈಜಯಂತಿ ಅಡಿಗ-ಪ್ರಿಯಾಂಕಾ ತಿಮ್ಮೇಶ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 10:43 PM

Share

ಬಿಗ್​ ಬಾಸ್​ ಏಪ್ರಿಲ್​ 8ರ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್​ ಸಿಕ್ಕಿದೆ. ಮನೆಗೆ ಒಂದೇ ದಿನ ಎರಡೆರಡು ವೈಲ್ಡ್​ ಕಾರ್ಡ್​ ಎಂಟ್ರಿ ಸಿಕ್ಕಿದೆ. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆಗೆ ಹೊಸ ಸ್ಪರ್ಧಿಯಾಗಿ ಬಂದಿದ್ದಾರೆ. ಈ ಮೂಲಕ ಮನೆಯ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ವಾರ ನೂತನ ಸ್ಪರ್ಧಿಯಾಗಿ ಮೊದಲು ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಕನ್​ಫೆಷನ್​ ರೂಂನಿಂದ ಅವರು ನೇರವಾಗಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಾಸುದೇವ ಅಡಿಗ ಅವರ ಮಗಳು ವೈಜಯಂತಿ ಅಡಿಗ. ಹೋಟೆಲ್​ ಉದ್ಯಮ ಇವರ ಮುಖ್ಯ ವೃತ್ತಿ. ಅಮ್ಮಚ್ಚಿಯೆಂಬ ನೆನಪು ಸಿನಿಮಾದಲ್ಲೂ ವೈಜಯಂತಿ ಬಣ್ಣ ಹಚ್ಚಿದ್ದಾರೆ. ಇವರನ್ನು ನೋಡಿ ಮಂಜು ತುಂಬಾನೇ ಖುಷಿ ಆಗಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ. 2015ರಲ್ಲಿ ಗಣಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪ್ರಿಯಾಂಕಾ ತಿಮ್ಮೇಶ್ ಕೆಲ ಅನ್ಯ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಮತ್ತು ಪ್ರಿಯಾಂಕಾ ಬಿಗ್​ಬಾಸ್ ಮೂಲಕ ಹೇಗೆ ಮನರಂಜಿಸಲಿದ್ದಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಎಲ್ಲಕ್ಕಿಂತ ಮಿಗಿಲಾಗಿ ಮನೆಗೆ ಯಾರಾದರೂ ಹೊಸ ಹುಡುಗಿ ಬರಲಿ ಎಂದು ಕಾಯುತ್ತಿದ್ದ ಮಂಜುಗೆ ಇದು ಖುಷಿ ಕೊಟ್ಟಿರುತ್ತದೆ ಎಂದು ಕೆಲವರು ಕಾಲೆಳೆದಿದ್ದಾರೆ.

ಅಂದಹಾಗೆ, ಕಾಣೆಯಾಗಿದ್ದ ಮಂಜು ಕನ್​ಫೆಷನ್​​ರೂಂನಲ್ಲೇ ಕುಳಿತಿದ್ದರು. ಅವರು ಹೊರ ಬಂದ ನಂತರ ಮನೆಯವರೆಲ್ಲರಿಗೂ ಪರಿಚಯಿಸಿದರು. ನಂತರ ಪ್ರಿಯಾಂಕಾ ಚಿಕನ್​ ಹಿಡಿದುಕೊಂಡೇ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

BBK 8 Wild Card Entry: ಬಿಗ್​ಬಾಸ್​ಗೆ ಮತ್ತೊಂದು ವೈಲ್ಡ್​ ಕಾರ್ಡ್​ ಎಂಟ್ರಿ: ಆದ್ರೆ ಈ ನಟಿ ಮನೆಗೆ ಕಾಲಿಡುತ್ತಿದ್ದಂತೆ ಮಂಜು ನಾಪತ್ತೆ!

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!