AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!
ವೈಜಯಂತಿ ಅಡಿಗ-ಪ್ರಿಯಾಂಕಾ ತಿಮ್ಮೇಶ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 10:43 PM

Share

ಬಿಗ್​ ಬಾಸ್​ ಏಪ್ರಿಲ್​ 8ರ ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್​ ಸಿಕ್ಕಿದೆ. ಮನೆಗೆ ಒಂದೇ ದಿನ ಎರಡೆರಡು ವೈಲ್ಡ್​ ಕಾರ್ಡ್​ ಎಂಟ್ರಿ ಸಿಕ್ಕಿದೆ. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆಗೆ ಹೊಸ ಸ್ಪರ್ಧಿಯಾಗಿ ಬಂದಿದ್ದಾರೆ. ಈ ಮೂಲಕ ಮನೆಯ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ವಾರ ನೂತನ ಸ್ಪರ್ಧಿಯಾಗಿ ಮೊದಲು ವೈಜಯಂತಿ ಅಡಿಗ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಕನ್​ಫೆಷನ್​ ರೂಂನಿಂದ ಅವರು ನೇರವಾಗಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಾಸುದೇವ ಅಡಿಗ ಅವರ ಮಗಳು ವೈಜಯಂತಿ ಅಡಿಗ. ಹೋಟೆಲ್​ ಉದ್ಯಮ ಇವರ ಮುಖ್ಯ ವೃತ್ತಿ. ಅಮ್ಮಚ್ಚಿಯೆಂಬ ನೆನಪು ಸಿನಿಮಾದಲ್ಲೂ ವೈಜಯಂತಿ ಬಣ್ಣ ಹಚ್ಚಿದ್ದಾರೆ. ಇವರನ್ನು ನೋಡಿ ಮಂಜು ತುಂಬಾನೇ ಖುಷಿ ಆಗಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಕೂಡ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಇದೀಗ ಬಿಗ್​ಬಾಸ್​ ಮನೆಗೆ ಕಾಲಿಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ. 2015ರಲ್ಲಿ ಗಣಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪ್ರಿಯಾಂಕಾ ತಿಮ್ಮೇಶ್ ಕೆಲ ಅನ್ಯ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಮತ್ತು ಪ್ರಿಯಾಂಕಾ ಬಿಗ್​ಬಾಸ್ ಮೂಲಕ ಹೇಗೆ ಮನರಂಜಿಸಲಿದ್ದಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಎಲ್ಲಕ್ಕಿಂತ ಮಿಗಿಲಾಗಿ ಮನೆಗೆ ಯಾರಾದರೂ ಹೊಸ ಹುಡುಗಿ ಬರಲಿ ಎಂದು ಕಾಯುತ್ತಿದ್ದ ಮಂಜುಗೆ ಇದು ಖುಷಿ ಕೊಟ್ಟಿರುತ್ತದೆ ಎಂದು ಕೆಲವರು ಕಾಲೆಳೆದಿದ್ದಾರೆ.

ಅಂದಹಾಗೆ, ಕಾಣೆಯಾಗಿದ್ದ ಮಂಜು ಕನ್​ಫೆಷನ್​​ರೂಂನಲ್ಲೇ ಕುಳಿತಿದ್ದರು. ಅವರು ಹೊರ ಬಂದ ನಂತರ ಮನೆಯವರೆಲ್ಲರಿಗೂ ಪರಿಚಯಿಸಿದರು. ನಂತರ ಪ್ರಿಯಾಂಕಾ ಚಿಕನ್​ ಹಿಡಿದುಕೊಂಡೇ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

BBK 8 Wild Card Entry: ಬಿಗ್​ಬಾಸ್​ಗೆ ಮತ್ತೊಂದು ವೈಲ್ಡ್​ ಕಾರ್ಡ್​ ಎಂಟ್ರಿ: ಆದ್ರೆ ಈ ನಟಿ ಮನೆಗೆ ಕಾಲಿಡುತ್ತಿದ್ದಂತೆ ಮಂಜು ನಾಪತ್ತೆ!

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?