AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೀಸ್​ ಬೇರೆಯವರ ಅವಕಾಶ ಕಿತ್ತುಕೊಳ್ಳಬೇಡಿ; ಎಲಿಮಿನೇಟ್​ ಆದ ವೈಜಯಂತಿಗೆ ಸುದೀಪ್​ ಕಿವಿಮಾತು

ಭಾನುವಾರ (ಏಪ್ರಿಲ್​ 11) ಪ್ರಶಾಂತ್​, ದಿವ್ಯಾ ಸುರೇಶ್​, ಶುಭಾ ಪೂಂಜಾ, ರಾಜೀವ್​ ಸೇಫ್​ ಆದರು. ಕೊನೆಯಲ್ಲಿ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ನಿಂದ ಹೊರಬಂದಿದ್ದಾರೆ.

ಪ್ಲೀಸ್​ ಬೇರೆಯವರ ಅವಕಾಶ ಕಿತ್ತುಕೊಳ್ಳಬೇಡಿ; ಎಲಿಮಿನೇಟ್​ ಆದ ವೈಜಯಂತಿಗೆ ಸುದೀಪ್​ ಕಿವಿಮಾತು
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 11, 2021 | 10:31 PM

Share

ಬಿಗ್​ ಬಾಸ್​ ಮನೆಯ ಆರನೇ ವಾರದ ಎಲಿಮಿನೇಷನ್​ಗೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಬಿಗ್​ ಬಾಸ್​ ಮನೆಯಿಂದ ವೈಜಯಂತಿ ಅಡಿಗ ಔಟ್​ ಆಗಿದ್ದಾರೆ. ನಾಲ್ಕೇ ದಿನಕ್ಕೆ ಅವರು ಮನೆಯಿಂದ ಹೊರ ಹೋಗಿದ್ದಾರೆ. ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಮೇಲೆ ಎಲಿಮಿನೇಷನ್​ ಆಗಿದ್ದರು. ಆದರೆ, ಕೊನೆಯಲ್ಲಿ ಇದಕ್ಕೆ ಟ್ವಿಸ್ಟ್​ ಸಿಕ್ಕಿದೆ.

ಶನಿವಾರ (ಏಪ್ರಿಲ್​ 10) ನಿಧಿ ಹಾಗೂ ಅರವಿಂದ್​ ಸೇಫ್​ ಆಗಿದ್ದರು. ಭಾನುವಾರ (ಏಪ್ರಿಲ್​ 11) ಪ್ರಶಾಂತ್​, ದಿವ್ಯಾ ಸುರೇಶ್​, ಶುಭಾ ಪೂಂಜಾ, ರಾಜೀವ್​ ಕೂಡ ಸೇಫ್​ ಆದರು. ಕಡಿಮೆ ಮತ ಸಿಕ್ಕು ಶಮಂತ್ ಎಲಿಮಿನೇಟ್​ ಎಂದು ಸುದೀಪ್​ ಘೋಷಣೆ ಮಾಡಿದರು. ಆದರೆ, ಸುದೀಪ್​ ಒಂದು ಆಯ್ಕೆ ಕೂಡ ನೀಡಿದರು.

ಕೇವಲ ನಾಲ್ಕು ದಿನದ ಹಿಂದೆ ವೈಜಯಂತಿ ಅಡಿಗ ಅವರು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದರು. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಅವರಿಗೆ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು. ಅವರ ಆಗಮನದಿಂದ ಮನೆಯಲ್ಲಿ ಹೆಚ್ಚೇನೂ ಬದಲಾವಣೆ ಆಗಿರಲಿಲ್ಲ. ಎಲ್ಲರೊಂದಿಗೂ ನಗುನಗುತ್ತಲೇ ಮಾತನಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರು ನನಗೆ ಮನೆಯಿಂದ ಹೊರ ಹೋಗಬೇಕು ಎಂದು ಪದೇ ಪದೇ ಹೇಳುತ್ತಿದ್ದರು.  ಹೀಗಾಗಿ, ಸುದೀಪ್​ ನೀವು ಮನೆಯಿಂದ ಹೊರ ಹೋಗುತ್ತೀರಿ ಎಂದಾದರೆ ನಾವು ಅವಕಾಶ ನೀಡುತ್ತೇವೆ ಎಂದರು.

ಈ ಅವಕಾಶವನ್ನು ವೈಜಯಂತಿ ಒಪ್ಪಿ ಮನೆಯಿಂದ ಹೊರ ನಡೆಯುತ್ತೇನೆ ಎಂದರು. ಇದಕ್ಕೆ ಸುದೀಪ್​ ಪ್ರತಿಕ್ರಿಯಿಸಿದರು. ನೀವು ಇಷ್ಟೊಂದು ಶ್ರಮ ಹಾಕಿ ಬಂದಿದ್ದೀರಿ. ವೈಜಯಂತಿ ಅವರೇ ನಿಮ್ಮ ಜಾಗದಲ್ಲಿ ಮತ್ತೊಬ್ಬರು ಬರಬಹುದಿತ್ತು. ನೀವು ಮತ್ತೊಬ್ಬರ ಅವಕಾಶ ಕಿತ್ತುಕೊಂಡಂತೆ. ಹೀಗೆ ಮಾಡಬೇಡಿ ಎಂದು ಸುದೀಪ್​ ಹೇಳಿದರು. ನಾನು ಮನೆಯಿಂದ ಹೊರ ಬರುತ್ತಿರುವುದಕ್ಕೆ ನನ್ನದೇ ಆದ ಕಾರಣವಿದೆ. ದಯವಿಟ್ಟು ಬೇರೆ ರೀತಿಯಲ್ಲಿ ತೆಗೆದುಕೊಳ್ಳಬೇಡಿ ಎಂದು ವೈಜಯಂತಿ ಹೇಳಿದರು. ಸೇಫ್​ ಆದ ಶಮಂತ್​ ಮುಂದಿನ ವಾರದ ನಾಮಿನೇಷನ್​ಗೆ ನೇರವಾಗಿ ನಾಮಿನೇಟ್​ ಆದರು. ಈ ಬೆಳವಣಿಗೆಯಿಂದ ಸಹಜವಾಗಿಯೇ ಮನೆಯೊಳಗಿನ ಇತರೆ ಸದಸ್ಯರಿಗೆ ಅಚ್ಚರಿ ಆಗಿದೆ.

ವೈಜಯಂತಿ ಮಾತ್ರವಲ್ಲದೆ ನಟಿ ಪ್ರಿಯಾಂಕಾ ತಿಮ್ಮೇಶ್​ ಹಾಗೂ ಪತ್ರಕರ್ತ ಚಕ್ರವತ್ರಿ ಚಂದ್ರಚೂಡ್​ ಅವರು ಅವರು ಸಹ ವೈಲ್ಡ್​ ಕಾರ್ಡ್​ ಮೂಲಕ ಮನೆಯೊಳಗೆ ಬಂದಿದ್ದರು. ಸದ್ಯ ಅವರು ಆಟ ಮುಂದುವರಿಸಿದ್ದಾರೆ.

ಇದನ್ನೂ ಒದಿ: Bigg Boss Elimination: ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ..

Published On - 10:28 pm, Sun, 11 April 21

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್