AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ

‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡಲು ಶಂಕರ್ ರೆಡಿ ಆಗಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಸಿಟ್ಟಾಗಿದ್ದಾರೆ. WakeUpShankar ಹ್ಯಾಶ್​​ಟ್ಯಾಗ್ ವೈರಲ್ ಆಗಿದೆ.

‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ
ಕಿಯಾರಾ-ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 31, 2024 | 1:17 PM

Share

ನಿರ್ದೇಶಕ ಶಂಕರ್ (Shankar) ಅವರ ಕಸುಬುದಾರಿಕೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ನಿರ್ದೇಶನದ ಸಿನಿಮಾಗಳು ಭಿನ್ನವಾಗಿರುತ್ತವೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರ ವಿಷನ್ ಅನೇಕರಿಗೆ ಇಷ್ಟ ಆಗುತ್ತದೆ. ರಜನಿಕಾಂತ್, ಕಮಲ್ ಹಾಸನ್ ಅವರು ಶಂಕರ್​ಗಾಗಿ ಬೇರೆ ಸಿನಿಮಾ ಕೈಬಿಟ್ಟ ಉದಾಹರಣೆ ಇದೆ. ಇಂಥ ನಿರ್ದೇಶಕರು ತಮ್ಮ ನೆಚ್ಚಿನ ನಟನ ಜೊತೆ ಕೈ ಜೋಡಿಸಿದ್ದರಿಂದ ರಾಮ್ ಚರಣ್ ಫ್ಯಾನ್ಸ್ ಸಹಜವಾಗಿಯೇ ಖುಷಿ ಆಗಿದ್ದರು. ಆದರೆ, ಈಗ ಶಂಕರ್ ಅವರನ್ನು ಸ್ವತಃ ರಾಮ್ ಚರಣ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ರಾಮ್ ಚರಣ್ ಸಿನಿಮಾ ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್​ ನೀಡದ ಅವರನ್ನು ಟೀಕಿಸಲಾಗುತ್ತಿದೆ.

ಶಂಕರ್ ಅವರು ತಮಿಳು ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಅಂದರೆ ಈ ಚಿತ್ರ ಆರಂಭ ಆಗಿ ಮೂರು ವರ್ಷ ಕಳೆಯುತ್ತಾ ಬಂದಿದೆ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಅಸಮಾಧಾನಗೊಂಡಿದ್ದಾರೆ.

ಫೆಬ್ರವರಿಯಲ್ಲಿ ‘ಗೇಮ್ ಚೇಂಜರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ಚಿತ್ರಕ್ಕಾಗಿ ಇಷ್ಟೊಂದು ವರ್ಷ ಮುಡಿಪಿಟ್ಟರೆ ಹೇಗೆ ಎಂಬುದು ರಾಮ್ ಚರಣ್ ಅಭಿಮಾನಿಗಳ ಪ್ರಶ್ನೆ. ಸಿನಿಮಾ ಕೆಲಸ ವಿಳಂಬ ಮಾಡಿದ ಶಂಕರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಈ ವಿಚಾರದಲ್ಲಿ ಶಂಕರ್ ಅವರು ತಪ್ಪೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಸಿನಿಮಾದಿಂದ ಒಂದು ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ದೀಪಾವಳಿ ಸಂದರ್ಭದಲ್ಲಿ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ, ಅದನ್ನು ತಂಡ ಮಾಡಿಲ್ಲ. ಮುಂದಿನ ದಿನಗಳಲ್ಲಿ ಸಾಂಗ್ ರಿಲೀಸ್ ಆಗಬಹುದು ಎಂದು ಫ್ಯಾನ್ಸ್ ಭಾವಿಸಿದ್ದರೂ ಅದೂ ಆಗಲಿಲ್ಲ. ಇದು ರಾಮ್ ಚರಣ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

ಸದ್ಯ ಟ್ವಿಟರ್​ನಲ್ಲಿ ‘WakeUpShankar’ ಹ್ಯಾಶ್​ಟ್ಯಾಗ್ ವೈರಲ್ ಮಾಡಲಾಗುತ್ತಿದೆ. ಶಂಕರ್ ಅವರ ಕುರಿತು ಟೀಕೆ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ರಾಮ್ ಚರಣ್ ನಟನೆಯ ಈ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಪಾತ್ರ ಮಾಡುತ್ತಿದ್ದಾರೆ. ‘ಗೇಮ್ ಚೇಂಜರ್’ ಜೊತೆ ಜೊತೆಗೆ ತಮಿಳಿನಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಇದ್ದಾರೆ. ಈ ಚಿತ್ರ ಕೂಡ ಸೆಟ್ಟೇರಿ ನಾಲ್ಕು ವರ್ಷಗಳ ಮೇಲಾಗಿದೆ. ಹೀಗಾಗಿ ಕಮಲ್ ಹಾಸನ್ ಅಭಿಮಾನಿಗಳು ಕೂಡ ಶಂಕರ್​ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:16 pm, Wed, 31 January 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು