AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ

‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡಲು ಶಂಕರ್ ರೆಡಿ ಆಗಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಸಿಟ್ಟಾಗಿದ್ದಾರೆ. WakeUpShankar ಹ್ಯಾಶ್​​ಟ್ಯಾಗ್ ವೈರಲ್ ಆಗಿದೆ.

‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ
ಕಿಯಾರಾ-ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 31, 2024 | 1:17 PM

Share

ನಿರ್ದೇಶಕ ಶಂಕರ್ (Shankar) ಅವರ ಕಸುಬುದಾರಿಕೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ನಿರ್ದೇಶನದ ಸಿನಿಮಾಗಳು ಭಿನ್ನವಾಗಿರುತ್ತವೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರ ವಿಷನ್ ಅನೇಕರಿಗೆ ಇಷ್ಟ ಆಗುತ್ತದೆ. ರಜನಿಕಾಂತ್, ಕಮಲ್ ಹಾಸನ್ ಅವರು ಶಂಕರ್​ಗಾಗಿ ಬೇರೆ ಸಿನಿಮಾ ಕೈಬಿಟ್ಟ ಉದಾಹರಣೆ ಇದೆ. ಇಂಥ ನಿರ್ದೇಶಕರು ತಮ್ಮ ನೆಚ್ಚಿನ ನಟನ ಜೊತೆ ಕೈ ಜೋಡಿಸಿದ್ದರಿಂದ ರಾಮ್ ಚರಣ್ ಫ್ಯಾನ್ಸ್ ಸಹಜವಾಗಿಯೇ ಖುಷಿ ಆಗಿದ್ದರು. ಆದರೆ, ಈಗ ಶಂಕರ್ ಅವರನ್ನು ಸ್ವತಃ ರಾಮ್ ಚರಣ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ರಾಮ್ ಚರಣ್ ಸಿನಿಮಾ ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್​ ನೀಡದ ಅವರನ್ನು ಟೀಕಿಸಲಾಗುತ್ತಿದೆ.

ಶಂಕರ್ ಅವರು ತಮಿಳು ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಅಂದರೆ ಈ ಚಿತ್ರ ಆರಂಭ ಆಗಿ ಮೂರು ವರ್ಷ ಕಳೆಯುತ್ತಾ ಬಂದಿದೆ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಅಸಮಾಧಾನಗೊಂಡಿದ್ದಾರೆ.

ಫೆಬ್ರವರಿಯಲ್ಲಿ ‘ಗೇಮ್ ಚೇಂಜರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ಚಿತ್ರಕ್ಕಾಗಿ ಇಷ್ಟೊಂದು ವರ್ಷ ಮುಡಿಪಿಟ್ಟರೆ ಹೇಗೆ ಎಂಬುದು ರಾಮ್ ಚರಣ್ ಅಭಿಮಾನಿಗಳ ಪ್ರಶ್ನೆ. ಸಿನಿಮಾ ಕೆಲಸ ವಿಳಂಬ ಮಾಡಿದ ಶಂಕರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಈ ವಿಚಾರದಲ್ಲಿ ಶಂಕರ್ ಅವರು ತಪ್ಪೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಸಿನಿಮಾದಿಂದ ಒಂದು ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ದೀಪಾವಳಿ ಸಂದರ್ಭದಲ್ಲಿ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ, ಅದನ್ನು ತಂಡ ಮಾಡಿಲ್ಲ. ಮುಂದಿನ ದಿನಗಳಲ್ಲಿ ಸಾಂಗ್ ರಿಲೀಸ್ ಆಗಬಹುದು ಎಂದು ಫ್ಯಾನ್ಸ್ ಭಾವಿಸಿದ್ದರೂ ಅದೂ ಆಗಲಿಲ್ಲ. ಇದು ರಾಮ್ ಚರಣ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

ಸದ್ಯ ಟ್ವಿಟರ್​ನಲ್ಲಿ ‘WakeUpShankar’ ಹ್ಯಾಶ್​ಟ್ಯಾಗ್ ವೈರಲ್ ಮಾಡಲಾಗುತ್ತಿದೆ. ಶಂಕರ್ ಅವರ ಕುರಿತು ಟೀಕೆ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ರಾಮ್ ಚರಣ್ ನಟನೆಯ ಈ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಪಾತ್ರ ಮಾಡುತ್ತಿದ್ದಾರೆ. ‘ಗೇಮ್ ಚೇಂಜರ್’ ಜೊತೆ ಜೊತೆಗೆ ತಮಿಳಿನಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಇದ್ದಾರೆ. ಈ ಚಿತ್ರ ಕೂಡ ಸೆಟ್ಟೇರಿ ನಾಲ್ಕು ವರ್ಷಗಳ ಮೇಲಾಗಿದೆ. ಹೀಗಾಗಿ ಕಮಲ್ ಹಾಸನ್ ಅಭಿಮಾನಿಗಳು ಕೂಡ ಶಂಕರ್​ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:16 pm, Wed, 31 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ