AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Haasan: ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಪಪ್ರಚಾರ; ಮಾನಸಿಕ ಕಾಯಿಲೆ ಎಂದವರಿಗೆ ನಟಿ ತಿರುಗೇಟು

Shruti Haasan Mental Health: ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಹರಡಿರುವ ವದಂತಿಗಳನ್ನು ನೋಡಿ ಶ್ರುತಿ ಹಾಸನ್​ ಅವರಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಖಡಕ್​ ತಿರುಗೇಟು ನೀಡಿದ್ದಾರೆ.

Shruti Haasan: ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಪಪ್ರಚಾರ; ಮಾನಸಿಕ ಕಾಯಿಲೆ ಎಂದವರಿಗೆ ನಟಿ ತಿರುಗೇಟು
ಶ್ರುತಿ ಹಾಸನ್
TV9 Web
| Edited By: |

Updated on: Jan 13, 2023 | 8:00 AM

Share

ದಕ್ಷಿಣ ಭಾರತದ ಖ್ಯಾತ ನಟಿ ಶ್ರುತಿ ಹಾಸನ್​ (Shruti Haasan) ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಗಾಸಿಪ್​ ಹಬ್ಬಿಸಲಾಗಿದೆ. ಅವರ ಮಾನಸಿಕ ಆರೋಗ್ಯ (Mental Health) ಸರಿ ಇಲ್ಲ ಎಂಬ ಗಾಳಿ ಸುದ್ದಿ ಹರಡಿದೆ. ಇದು ಶ್ರುತಿ ಹಾಸನ್​ ಅವರ ಗಮನಕ್ಕೂ ಬಂದಿದೆ. ಅದಕ್ಕೆ ಅವರು ಗರಂ ಆಗಿದ್ದಾರೆ. ಈ ರೀತಿ ಸುದ್ದಿ ಹಬ್ಬಿಸಿದವರಿಗೆ ತಿರುಗೇಟು ನೀಡಿದ್ದಾರೆ. ಅಷ್ಟಕ್ಕೂ ತಮಗೆ ಇರುವ ಆರೋಗ್ಯದ ಸಮಸ್ಯೆ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಕುರಿತು ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ‘ವಾಲ್ತೇರು ವೀರಯ್ಯ’ (Waltair Veerayya), ‘ವೀರ ಸಿಂಹ ರೆಡ್ಡಿ’ ಸೇರಿದಂತೆ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಶ್ರುತಿ ಹಾಸನ್​ ನಟಿಸಿದ್ದಾರೆ.

ಈ ವಾರ ಶ್ರುತಿ ಹಾಸನ್​ ಪಾಲಿಗೆ ನಿಜಕ್ಕೂ ಸ್ಪೆಷಲ್​. ಯಾಕೆಂದರೆ ತೆಲುಗಿನಲ್ಲಿ ಅವರ ಎರಡು ಸಿನಿಮಾ ರಿಲೀಸ್​ ಆಗಿವೆ. ಗುರುವಾರ (ಜ.12) ‘ವೀರ ಸಿಂಹ ರೆಡ್ಡಿ’ ತೆರೆಕಂಡರೆ, ಇಂದು (ಜ.13) ‘ವಾಲ್ತೇರು ವೀರಯ್ಯ’ ಚಿತ್ರ ಬಿಡುಗಡೆ ಆಗಿದೆ. ಕೆಲವೇ ದಿನಗಳ ಹಿಂದೆ ‘ವಾಲ್ತೇರು ವೀರಯ್ಯ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಅದ್ದೂರಿಯಾಗಿ ನಡೆಯಿತು. ಆ ಕಾರ್ಯಕ್ರಮಕ್ಕೆ ಹಾಜರಾಗಲು ಶ್ರುತಿ ಹಾಸನ್​ ಅವರಿಗೆ ಸಾಧ್ಯವಾಗಿಲ್ಲ. ಅದನ್ನೇ ನೆಪವಾಗಿ ಇಟ್ಟುಕೊಂಡು ಗಾಸಿಪ್​ ಹಬ್ಬಿಸಲಾಗಿದೆ.

ಇದನ್ನೂ ಓದಿ
Image
Men’s Health: ಪುರುಷರು ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಯಾರಲ್ಲಿಯೂ ಮಾತನಾಡುವುದಿಲ್ಲ ಏಕೆ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ
Image
Social Media Addiction: ಅತಿಯಾದ ಮೊಬೈಲ್ ಪೋನ್ ಬಳಕೆ ನಿಮ್ಮ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಚ್ಚರ
Image
Mental Health: ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ
Image
Mental Health: ಈ ಅಭ್ಯಾಸ ಬದಲಾಯಿಸಿಕೊಳ್ಳದಿದ್ದರೆ ನಿಮ್ಮ ಮಾನಸಿಕ ಆರೋಗ್ಯ ಹಾಳಾಗಬಹುದು

ಇದನ್ನೂ ಓದಿ: Shruti Haasan: ‘ಸಲಾರ್​’ ನಟಿ ಶ್ರುತಿ ಹಾಸನ್​ ಮೂಗಿಗೆ ಪ್ಲಾಸ್ಟಿಕ್​ ಸರ್ಜರಿ ಆಗಿದ್ದು ನಿಜವೇ? ಮತ್ತೆ ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

‘ಶ್ರುತಿ ಹಾಸನ್​ ಅವರಿಗೆ ಮಾನಸಿಕ ಆರೋಗ್ಯ ಸರಿ ಇಲ್ಲ. ಅದರ ಪರಿಣಾಮವಾಗಿ ಅವರು ವಾಲ್ತೇರು ವೀರಯ್ಯ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲ’ ಎಂದು ಕೆಲವೆಡೆ ಸುದ್ದಿ ಪ್ರಕಟ ಆಗಿದೆ. ಅದನ್ನು ನೋಡಿ ಶ್ರುತಿ ಹಾಸನ್​ ಅವರಿಗೆ ಬೇಸರ ಆಗಿದೆ. ತಾವು ‘ವಾಲ್ತೇರು ವೀರಯ್ಯ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಹಾಜರಾಗದೇ ಇರಲು ಜ್ವರ ಕಾರಣ ಎಂದು ಶ್ರುತಿ ಹಾಸನ್​ ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ

ತಮ್ಮ ಬಗ್ಗೆ ಹರಡಿರುವ ಸುಳ್ಳು ಸುದ್ದಿಯ ಸ್ಕ್ರೀನ್​ ಶಾಟ್​ಗಳನ್ನು ಟ್ವೀಟರ್​ನಲ್ಲಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ. ‘ಒಳ್ಳೆಯ ಪ್ರಯತ್ನ. ಮೊದಲು ನೀವು ಸರಿಯಾಗಿ. ಮೊದಲು ಡಾಕ್ಟರ್​ ಅನ್ನು ಭೇಟಿ ಮಾಡಿ’ ಎಂದು ಶ್ರುತಿ ಹಾಸನ್​ ಅವರು ವ್ಯಂಗ್ಯವಾಡಿದ್ದಾರೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದಾರೆ. ಗುರುವಾರ ಅದ್ದೂರಿಯಾಗಿ (ಜ.12) ಬಿಡುಗಡೆಯಾದ ಈ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಶ್ರುತಿ ಹಾಸನ್​ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಅದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು