AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾದ್ದೇ ಮೇಲುಗೈ; ಇದು ರಜನಿಕಾಂತ್ ಹವಾ

ಒಂದೆಡೆ ಲೋಕೇಶ್ ಕನಗರಾಜ್ ನಿರ್ದೇಶನದ ‘ಕೂಲಿ’, ಇನ್ನೊಂದೆಡೆ ಅಯಾನ್ ಮುಖರ್ಜಿ ನಿರ್ದೇಶನದ ‘ವಾರ್ 2’. ಆಗಸ್ಟ್ 14ರಂದು ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಹಾಗಾಗಿ ಪೈಪೋಟಿ ಸಖತ್ ಹೆಚ್ಚಾಗಿದೆ. ಅಮೆರಿಕದಲ್ಲಿ ‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾದ್ದೇ ಮೇಲುಗೈ; ಇದು ರಜನಿಕಾಂತ್ ಹವಾ
War 2, Coolie
ಮದನ್​ ಕುಮಾರ್​
|

Updated on: Aug 05, 2025 | 10:44 PM

Share

ಈ ವರ್ಷ ಸ್ವಾತಂತ್ರ್ಯ ದಿನಾಚರಣೆಗೆ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡಲಿದೆ. ಒಂದೇ ದಿನ ಎರಡು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬಾಲಿವುಡ್​ನಲ್ಲಿ ‘ವಾರ್ 2’ ಸಿನಿಮಾ (War 2 Movie) ಬಿಡುಗಡೆಯಾದರೆ, ದಕ್ಷಿಣದಲ್ಲಿ ‘ಕೂಲಿ’ ಸಿನಿಮಾ ತೆರೆ ಕಾಣಲಿದೆ. ಈ ಎರಡೂ ಸಿನಿಮಾಗಳು ಆಗಸ್ಟ್ 14ರಂದು ಬಿಡುಗಡೆ ಆಗುತ್ತಿವೆ ಎಂಬುದು ವಿಶೇಷ. ಎರಡೂ ಸಿನಿಮಾದಲ್ಲಿ ದೊಡ್ಡ ತಾರಾಗಣ ಇವೆ. ‘ಕೂಲಿ’ ಮತ್ತು ‘ವಾರ್ 2’ ಸಿನಿಮಾಗಳ ಪೈಕಿ ಯಾವ ಸಿನಿಮಾಗೆ ಹೆಚ್ಚು ಕಲೆಕ್ಷನ್ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಮೆರಿಕದಲ್ಲಿ ಈಗಾಗಲೇ ‘ಕೂಲಿ’ (Coolie Movie) ಹೈಪ್ ಜೋರಾಗಿದೆ.

ಹೌದು, ಅಮೆರಿಕದಲ್ಲಿ ‘ವಾರ್ 2’ ಮತ್ತು ‘ಕೂಲಿ’ ಸಿನಿಮಾಗಳ ಬುಕಿಂಗ್ ಶುರುವಾಗಿದೆ. ‘ವಾರ್ 2’ ಚಿತ್ರಕ್ಕೆ ಹೋಲಿಸಿದರೆ ‘ಕೂಲಿ’ ಸಿನಿಮಾದ ಬುಕಿಂಗ್ ಉತ್ತಮವಾಗಿದೆ. ಬಿಡುಗಡೆಗೆ 9 ದಿನಗಳು ಬಾಕಿ ಇರುವಾಗ ‘ವಾರ್ 2’ ಚಿತ್ರಕ್ಕಿಂತಲೂ 6 ಪಟ್ಟು ಅಧಿಕ ಬುಕಿಂಗ್ ‘ಕೂಲಿ’ ಸಿನಿಮಾಗೆ ಆಗಿದೆ. ಆ ಮೂಲಕ ಬಾಕ್ಸ್ ಆಫೀಸ್ ಭವಿಷ್ಯ ಏನಾಗಲಿದೆ ಎಂಬುದರ ಸೂಚನೆ ಸಿಗುತ್ತಿದೆ.

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರ ಜೊತೆ ಘಟಾನುಘಟಿ ಸ್ಟಾರ್ ಕಲಾವಿದರು ನಟಿಸಿದ್ದಾರೆ. ಆಮಿರ್ ಖಾನ್, ನಾಗಾರ್ಜುನ, ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್ ಮುಂತಾದವರು ನಟಿಸಿದ್ದಾರೆ. ಪೂಜಾ ಹೆಗ್ಡೆ ಡ್ಯಾನ್ಸ್ ಮಾಡಿರುವ ‘ಮೋನಿಕಾ’ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದೆ.

ಇದನ್ನೂ ಓದಿ
Image
ರಜನಿಕಾಂತ್ ತಾಯಿ, ಸಹೋದರಿ ಮತ್ತು ಗೆಳತಿಯಾಗಿ ನಟಿಸಿದ ಏಕೈಕ ನಾಯಕಿ ಇವರು
Image
ಕೇರಳಕ್ಕೆ ಬಂದ ರಜನಿಕಾಂತ್: ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್

ಅದೇ ರೀತಿ, ‘ವಾರ್ 2’ ಸಿನಿಮಾ ಕೂಡ ಪಾತ್ರವರ್ಗದ ಕಾರಣದಿಂದ ಹೈಪ್ ಸೃಷ್ಟಿ ಮಾಡಿದೆ. ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್, ಕಿಯಾರಾ ಅಡ್ವಾಣಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದು ಜೂನಿಯರ್ ಎನ್​ಟಿಆರ್ ನಟನೆಯ ಮೊದಲ ಹಿಂದಿ ಸಿನಿಮಾ. ಆ ಕಾರಣದಿಂದಲೂ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ.

ಇದನ್ನೂ ಓದಿ: ನನ್ನ ಕೂದಲು ಉದುರಿದೆ, ಆದರೆ ನಾಗಾರ್ಜುನ ಇನ್ನೂ ಯಂಗ್ ಆಗಿದ್ದಾರೆ: ರಜನಿಕಾಂತ್

‘ವಾರ್ 2’ ಮತ್ತು ‘ಕೂಲಿ’ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾಗಳಲ್ಲಿ ನಟಿಸಿರುವ ಎಲ್ಲ ಕಲಾವಿದರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಆದ್ದರಿಂದ ಪೈಪೋಟಿ ಜೋರಾಗಿ ಇರಲಿದೆ. ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯು ‘ವಾರ್ 2’ ಚಿತ್ರಕ್ಕೆ ಬಂಡವಾಳ ಹೂಡಿದೆ. ‘ಕೂಲಿ’ ಸಿನಿಮಾವನ್ನು ‘ಸನ್ ಪಿಕ್ಚರ್ಸ್’ ಸಂಸ್ಥೆ ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು