AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದವರ ಟ್ರೋಲ್​ಗೆ ಎಚ್ಚೆತ್ತುಕೊಂಡ ‘ವಾರ್ 2’ ಸಿನಿಮಾ; ಡ್ಯಾಮೇಜ್ ಕಂಟ್ರೋಲ್​ಗೆ ಹೊಸ ತಂತ್ರ

‘ವಾರ್ 2’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್ಎಕ್ಸ್ ಗುಣಮಟ್ಟ ಮತ್ತು ಜೂನಿಯರ್ ಎನ್ಟಿಆರ್ ಅವರ ಪಾತ್ರದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಯಶ್ ರಾಜ್ ಫಿಲ್ಮ್ಸ್ ಈ ಟೀಕೆಗಳನ್ನು ಗಮನಿಸಿ, ಸಿನಿಮಾ ಬಿಡುಗಡೆಗೂ ಮುನ್ನ ಸುಧಾರಣೆಗಳನ್ನು ಮಾಡುವ ಯೋಚನೆಯಲ್ಲಿದೆ.

ದಕ್ಷಿಣದವರ ಟ್ರೋಲ್​ಗೆ ಎಚ್ಚೆತ್ತುಕೊಂಡ ‘ವಾರ್ 2’ ಸಿನಿಮಾ; ಡ್ಯಾಮೇಜ್ ಕಂಟ್ರೋಲ್​ಗೆ ಹೊಸ ತಂತ್ರ
ವಾರ್ 2
ರಾಜೇಶ್ ದುಗ್ಗುಮನೆ
|

Updated on:May 24, 2025 | 8:10 AM

Share

‘ವಾರ್ 2’ ಸಿನಿಮಾದ (War 2 Movie) ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಅಭಿಮಾನಿಗಳ ರಿಯಾಕ್ಷನ್ ಒಂದೇ ರೀತಿ ಇರಲಿಲ್ಲ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಯ ಟೀಸರ್ ಎಲ್ಲರಿಂದ ಟೀಕೆಗೆ ಒಳಗಾಗಲು ಆರಂಭಿಸಿತು. ಸಾಮಾನ್ಯವಾಗಿ ಸಿನಿಮಾದ ಗ್ರಾಫಿಕ್ಸ್ ಕೆಟ್ಟದಾಗಿದ್ದರೆ, ಗುಣಮಟ್ಟ ಕಡಿಮೆ ಇದ್ದರೆ ಟ್ರೋಲ್ ಮಾಡುವುದು ಸಹಜ. ‘ಪಠಾಣ್’ ಸಿನಿಮಾ ಸಂದರ್ಭದಲ್ಲಿ ಹೀಗೆಯೇ ಆಗಿತ್ತು. ಇದೇ ರೀತಿಯ ಟ್ರೋಲ್ ‘ವಾರ್ 2’ ಚಿತ್ರಕ್ಕೂ ಆಗಿದೆ. ಅಲ್ಲದೆ, ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಕೂಡ ಟ್ರೇಲರ್ ನೋಡಿ ಅಪ್ಸೆಟ್ ಆಗಿದ್ದಾರೆ.

‘ವಾರ್ 2’ ಚಿತ್ರದ ಟ್ರೇಲರ್ ಎಲ್ಲರ ಟೀಕೆಗೆ ಗುರಿಯಾಗಿದೆ. ಟ್ರೇಲರ್​ನಲ್ಲಿ ವಿಎಫ್​ಎಕ್ಸ್ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಜೂನಿಯರ್ ಎನ್​ಟಿಆರ್ ಕಡಿಮೆ ಹೈಲೈಟ್ ಆಗಿದ್ದು, ಬಾಲಿವುಡ್ ನಟ ಹೃತಿಕ್ ಹೆಚ್ಚು ಗಮನ ಸೆಳೆಯುವಂತೆ ಮಾಡಲಾಗಿದೆ ಎಂದು ದೂರಿದ್ದಾರೆ. ನಿಜ ಹೇಳಬೇಕು ಎಂದರೆ ಅಂದು ಇದ್ದಿದ್ದು ಜೂ. ಎನ್​ಟಿಆರ್ ಬರ್ತ್​ಡೇ. ಹೀಗಾಗಿ, ಅವರನ್ನು ಹೆಚ್ಚು ಹೈಲೈಟ್ ಮಾಡಬೇಕಿತ್ತು ಎಂದು ದಕ್ಷಿಣದ ಅನೇಕರು ಅಭಿಪ್ರಾಯಪಟ್ಟಿದ್ದರು.

ಈಗ ಯಶ್ ರಾಜ್ ಫಿಲ್ಮ್ಸ್ ಎಲ್ಲಾ ಕಾಮೆಂಟ್​ಗಳನ್ನು ಓದುತ್ತಿದೆ. ಈ ಫೀಡ್​​ಬ್ಯಾಕ್​ನ ಇಟ್ಟುಕೊಂಡು ಮುಂದಿನ ಪ್ಲ್ಯಾನ್ ರೂಪಿಸಲಿದೆ. ಸಿನಿಮಾ ರಿಲೀಸ್​ಗೆ ಇನ್ನೂ ಕೆಲವು ತಿಂಗಳು ಇದೆ. ಅದರೊಳಗೆ ಎಲ್ಲವನ್ನೂ ಸರಿ ಮಾಡಿಕೊಳ್ಳುವ ಆಲೋಚನೆ ತಂಡದ್ದು. ಮುಂದಿನ ದಿನಗಳಲ್ಲಿ ಪವರ್​ಫುಲ್ ಟ್ರೇಲರ್ ರಿಲೀಸ್ ಮಾಡುವ ಆಲೋಚನೆ ಇವರಿಗೆ ಇದೆ. ಸಿನಿಮಾದಲ್ಲಿ ಜೂ.ಎನ್​ಟಿಆರ್​​ನ ಹೆಚ್ಚು ಹೈಲೈಟ್ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಅಡಚಣೆ; ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
Image
ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

ದಕ್ಷಿಣದ ಸೂಪರ್​ಸ್ಟಾರ್ ‘ಕೂಲಿ’ ಸಿನಿಮಾ ಹಾಗೂ ಕನ್ನಡದ 45 ಸಿನಿಮಾ ಅದೇ ಸಂದರ್ಭದಲ್ಲಿ ರಿಲೀಸ್ ಆಗುತ್ತಿದೆ. ಹೀಗಾಗಿ, ದಕ್ಷಿಣ ಭಾರತದಲ್ಲಿ ಈ ಚಿತ್ರಕ್ಕೆ ಸ್ಪರ್ಧೆ ಜೋರಿರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ‘ವಾರ್ 2’ ಯುದ್ಧಕ್ಕೆ ರೆಡಿ ಆಗುತ್ತಿದೆ.

ಇದನ್ನೂ ಓದಿ: ಹೃತಿಕ್ ರೋಷನ್ ಎದುರು ಮಂಕಾದ ಜೂ. ಎನ್​ಟಿಆರ್​; ‘ವಾರ್ 2’ ಟೀಸರ್ ನೋಡಿ ಫ್ಯಾನ್ಸ್​ಗೆ ಬೇಸರ

‘ವಾರ್ 2’ ಚಿತ್ರವನ್ನು ಅಯಾನ್ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಜೂ. ಎನ್​ಟಿಆರ್ ಅವರು ಎದುರು ಬದುರಾಗುತ್ತಿದ್ದಾರೆ. ಈ ಚಿತ್ರಕ್ಕೆ ಕಿಯಾರಾ ನಾಯಕಿ. ಅವರು ಟ್ರೇಲರ್​ನಲ್ಲಿ ಭರ್ಜರಿ ಗಮನ ಸೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Sat, 24 May 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?