AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇವ್ಸ್ ಸಮಿಟ್​ನಲ್ಲಿ ಚಿತ್ರರಂಗದ ದಿಗ್ಗಜರ ಅಂಚೆ ಚೀಟಿ ಬಿಡುಗಡೆ; ಮೋದಿಗೆ ನಾಗಾರ್ಜುನ ಧನ್ಯವಾದ

ಭಾರತೀಯ ಚಿತ್ರರಂಗದ ದಿಗ್ಗಜರಾದ ಗುರುದತ್, ರಿತ್ವಿಕ್ ಘಟಕ್, ಸಲೀಲ್ ಚೌಧರಿ, ರಾಜ್ ಖೋಸ್ಲಾ ಅವರ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಈ ರೀತಿ ಗೌರವ ಸಲ್ಲಿಸಿದ್ದಕ್ಕಾಗಿ ನಟ ನಾಗಾರ್ಜುನ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದರು. ಮುಂಬೈನಲ್ಲಿ 4 ದಿನಗಳ ಕಾಲ ವೇವ್ಸ್ ಸಮಿಟ್​ ನಡೆಯುತ್ತಿದೆ.

ವೇವ್ಸ್ ಸಮಿಟ್​ನಲ್ಲಿ ಚಿತ್ರರಂಗದ ದಿಗ್ಗಜರ ಅಂಚೆ ಚೀಟಿ ಬಿಡುಗಡೆ; ಮೋದಿಗೆ ನಾಗಾರ್ಜುನ ಧನ್ಯವಾದ
Narendra Modi, Nagarjuna
ಮದನ್​ ಕುಮಾರ್​
|

Updated on: May 01, 2025 | 5:49 PM

Share

ವರ್ಲ್ಡ್ ಆಡಿಯೋ ವಿಶ್ಯುವಲ್ ಎಂಟರ್​ಟೇನ್ಮೆಂಟ್ ಸಮಿಟ್ (WAVES 2025) ಇಂದು (ಮೇ 1) ಪ್ರಾರಂಭವಾಯಿತು. ಈ ವೇಳೆ ಭಾರತೀಯ ಚಿತ್ರರಂಗದ ದಿಗ್ಗಜರಿಗೆ ಗೌರವ ಸಲ್ಲಿಸಲಾಯಿತು. ಹೈದರಾಬಾದ್‌ನಿಂದ ಮುಂಬೈಗೆ ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಟಾಲಿವುಡ್ ನಟ ನಾಗಾರ್ಜುನ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ವೇದಿಕೆಗೆ ಸ್ವಾಗತಿಸಿದರು. ಚಲನಚಿತ್ರ ನಿರ್ಮಾಪಕರಾದ ಗುರುದತ್, ಋತ್ವಿಕ್ ಘಟಕ್, ರಾಜ್ ಖೋಸ್ಲಾ, ಸಂಗೀತ ಸಂಯೋಜಕ, ಸಾಹಿತಿ ಸಲೀಲ್ ಚೌಧರಿ ಹಾಗೂ ನಟಿ ಪಿ. ಭಾನುಮತಿ ಅವರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಭಾರತ ಸರ್ಕಾರದ ಅಂಚೆ ಇಲಾಖೆ ಬಿಡುಗಡೆ ಮಾಡಲಿದೆ ಎಂದು ನಾಗಾರ್ಜುನ (Nagarjuna) ತಿಳಿಸಿದರು. ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ವ್ಯಕ್ತಿಗಳನ್ನು ಗೌರವಿಸುವ ಸಲುವಾಗಿ ಅಂಚೆ ಚೀಟಿ ಬಿಡುಗಡೆಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ನಾಲ್ಕು ದಿನಗಳ ಈ ಶೃಂಗಸಭೆಯು, ಭಾರತದ ಸೃಜನಶೀಲ ರಂಗವನ್ನು ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವ ಗುರಿಯನ್ನು ಹೊಂದಿದೆ. ನಾಗಾರ್ಜುನ ಅವರು ವೇದಿಕೆಯಲ್ಲಿ ಮಾತನಾಡಿ, ‘ಈ ಶೃಂಗಸಭೆಯು ಭಾರತದ ಶಕ್ತಿಯನ್ನು ಸೆಲೆಬ್ರೇಟ್ ಮಾಡುತ್ತದೆ. ನಮ್ಮ ದೇಶದ ಕಥೆಗಳು ಕೇವಲ ಸಿನಿಮಾವನ್ನು ರೂಪಿಸಿಲ್ಲ. ಬದಲಿಗೆ, ಹಲವು ತಲೆಮಾರುಗಳನ್ನು ರೂಪಿಸಿದೆ’ ಎಂದು ಹೇಳಿದರು.

‘55ನೇ ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಚಿತ್ರರಂಗದ ದಿಗ್ಗಜರಾದ ರಾಜ್​ ಕಪೂರ್, ಮೊಹಮ್ಮದ್ ರಫಿ, ತಾಪನ್ ಸಿನ್ಹಾ, ಅಕ್ಕಿನೇನಿ ನಾಗೇಶ್ವರ ರಾವ್ ಅವರನ್ನು ಗೌರವಿಸುವ ಸಲುವಾಗಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿತ್ತು. ಈಗ ಈ ಜಾಗತಿಕ ವೇದಿಕೆಯಲ್ಲಿ ಇನ್ನೊಂದು ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿ ಆಗುತ್ತಿದ್ದೇವೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ನಾಗಾರ್ಜುನ ಹೇಳಿದರು.

ಇದನ್ನೂ ಓದಿ
Image
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
Image
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
Image
WAVES: ಕ್ರಿಯೇಟರ್ ಎಕನಾಮಿಗೆ ಒತ್ತು ಕೊಟ್ಟ ಪ್ರಧಾನಿ ಮೋದಿ
Image
ಉಗ್ರರನ್ನು ಸದೆಬಡಿಯಲು ಸಶಸ್ತ್ರ ಪಡೆಗಳಿಗೆ ಪೂರ್ತಿ ಸ್ವಾತಂತ್ರ್ಯ; ಮೋದಿ

ಇದನ್ನೂ ಓದಿ: ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ಪ್ರಧಾನಿ ನರೇಂದ್ರ ಮೋದಿ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಡಾ. ಎಲ್​. ಮುರುಗನ್ ಅವರು ವೇದಿಕೆಯಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಭಾರತೀಯ ಸಿನಿಮಾ, ಸಂಗೀತ ಮುಂತಾದ ಮನರಂಜನಾ ಕ್ಷೇತ್ರದ ಅನೇಕರು ಈ ಸಮಿಟ್​​ನಲ್ಲಿ ಭಾಗಿ ಆಗಿದ್ದಾರೆ. ರಜನಿಕಾಂತ್, ಮೋಹನ್​ಲಾಲ್, ಶಾರುಖ್​ ಖಾನ್, ಅಮಿರ್ ಖಾನ್, ರಣಬೀರ್ ಕಪೂರ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಸಾರಾ ಅಲಿ ಖಾನ್, ವಿಕ್ಕಿ ಕೌಶಲ್, ಶೋಭಿತಾ ಧುಲಿಪಾಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?