AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇವ್ಸ್ ಸಮಿಟ್​ನಲ್ಲಿ ಚಿತ್ರರಂಗದ ದಿಗ್ಗಜರ ಅಂಚೆ ಚೀಟಿ ಬಿಡುಗಡೆ; ಮೋದಿಗೆ ನಾಗಾರ್ಜುನ ಧನ್ಯವಾದ

ಭಾರತೀಯ ಚಿತ್ರರಂಗದ ದಿಗ್ಗಜರಾದ ಗುರುದತ್, ರಿತ್ವಿಕ್ ಘಟಕ್, ಸಲೀಲ್ ಚೌಧರಿ, ರಾಜ್ ಖೋಸ್ಲಾ ಅವರ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಈ ರೀತಿ ಗೌರವ ಸಲ್ಲಿಸಿದ್ದಕ್ಕಾಗಿ ನಟ ನಾಗಾರ್ಜುನ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದರು. ಮುಂಬೈನಲ್ಲಿ 4 ದಿನಗಳ ಕಾಲ ವೇವ್ಸ್ ಸಮಿಟ್​ ನಡೆಯುತ್ತಿದೆ.

ವೇವ್ಸ್ ಸಮಿಟ್​ನಲ್ಲಿ ಚಿತ್ರರಂಗದ ದಿಗ್ಗಜರ ಅಂಚೆ ಚೀಟಿ ಬಿಡುಗಡೆ; ಮೋದಿಗೆ ನಾಗಾರ್ಜುನ ಧನ್ಯವಾದ
Narendra Modi, Nagarjuna
ಮದನ್​ ಕುಮಾರ್​
|

Updated on: May 01, 2025 | 5:49 PM

Share

ವರ್ಲ್ಡ್ ಆಡಿಯೋ ವಿಶ್ಯುವಲ್ ಎಂಟರ್​ಟೇನ್ಮೆಂಟ್ ಸಮಿಟ್ (WAVES 2025) ಇಂದು (ಮೇ 1) ಪ್ರಾರಂಭವಾಯಿತು. ಈ ವೇಳೆ ಭಾರತೀಯ ಚಿತ್ರರಂಗದ ದಿಗ್ಗಜರಿಗೆ ಗೌರವ ಸಲ್ಲಿಸಲಾಯಿತು. ಹೈದರಾಬಾದ್‌ನಿಂದ ಮುಂಬೈಗೆ ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಟಾಲಿವುಡ್ ನಟ ನಾಗಾರ್ಜುನ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ವೇದಿಕೆಗೆ ಸ್ವಾಗತಿಸಿದರು. ಚಲನಚಿತ್ರ ನಿರ್ಮಾಪಕರಾದ ಗುರುದತ್, ಋತ್ವಿಕ್ ಘಟಕ್, ರಾಜ್ ಖೋಸ್ಲಾ, ಸಂಗೀತ ಸಂಯೋಜಕ, ಸಾಹಿತಿ ಸಲೀಲ್ ಚೌಧರಿ ಹಾಗೂ ನಟಿ ಪಿ. ಭಾನುಮತಿ ಅವರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಭಾರತ ಸರ್ಕಾರದ ಅಂಚೆ ಇಲಾಖೆ ಬಿಡುಗಡೆ ಮಾಡಲಿದೆ ಎಂದು ನಾಗಾರ್ಜುನ (Nagarjuna) ತಿಳಿಸಿದರು. ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ವ್ಯಕ್ತಿಗಳನ್ನು ಗೌರವಿಸುವ ಸಲುವಾಗಿ ಅಂಚೆ ಚೀಟಿ ಬಿಡುಗಡೆಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ನಾಲ್ಕು ದಿನಗಳ ಈ ಶೃಂಗಸಭೆಯು, ಭಾರತದ ಸೃಜನಶೀಲ ರಂಗವನ್ನು ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವ ಗುರಿಯನ್ನು ಹೊಂದಿದೆ. ನಾಗಾರ್ಜುನ ಅವರು ವೇದಿಕೆಯಲ್ಲಿ ಮಾತನಾಡಿ, ‘ಈ ಶೃಂಗಸಭೆಯು ಭಾರತದ ಶಕ್ತಿಯನ್ನು ಸೆಲೆಬ್ರೇಟ್ ಮಾಡುತ್ತದೆ. ನಮ್ಮ ದೇಶದ ಕಥೆಗಳು ಕೇವಲ ಸಿನಿಮಾವನ್ನು ರೂಪಿಸಿಲ್ಲ. ಬದಲಿಗೆ, ಹಲವು ತಲೆಮಾರುಗಳನ್ನು ರೂಪಿಸಿದೆ’ ಎಂದು ಹೇಳಿದರು.

‘55ನೇ ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಚಿತ್ರರಂಗದ ದಿಗ್ಗಜರಾದ ರಾಜ್​ ಕಪೂರ್, ಮೊಹಮ್ಮದ್ ರಫಿ, ತಾಪನ್ ಸಿನ್ಹಾ, ಅಕ್ಕಿನೇನಿ ನಾಗೇಶ್ವರ ರಾವ್ ಅವರನ್ನು ಗೌರವಿಸುವ ಸಲುವಾಗಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿತ್ತು. ಈಗ ಈ ಜಾಗತಿಕ ವೇದಿಕೆಯಲ್ಲಿ ಇನ್ನೊಂದು ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿ ಆಗುತ್ತಿದ್ದೇವೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ನಾಗಾರ್ಜುನ ಹೇಳಿದರು.

ಇದನ್ನೂ ಓದಿ
Image
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
Image
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
Image
WAVES: ಕ್ರಿಯೇಟರ್ ಎಕನಾಮಿಗೆ ಒತ್ತು ಕೊಟ್ಟ ಪ್ರಧಾನಿ ಮೋದಿ
Image
ಉಗ್ರರನ್ನು ಸದೆಬಡಿಯಲು ಸಶಸ್ತ್ರ ಪಡೆಗಳಿಗೆ ಪೂರ್ತಿ ಸ್ವಾತಂತ್ರ್ಯ; ಮೋದಿ

ಇದನ್ನೂ ಓದಿ: ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ಪ್ರಧಾನಿ ನರೇಂದ್ರ ಮೋದಿ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಡಾ. ಎಲ್​. ಮುರುಗನ್ ಅವರು ವೇದಿಕೆಯಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಭಾರತೀಯ ಸಿನಿಮಾ, ಸಂಗೀತ ಮುಂತಾದ ಮನರಂಜನಾ ಕ್ಷೇತ್ರದ ಅನೇಕರು ಈ ಸಮಿಟ್​​ನಲ್ಲಿ ಭಾಗಿ ಆಗಿದ್ದಾರೆ. ರಜನಿಕಾಂತ್, ಮೋಹನ್​ಲಾಲ್, ಶಾರುಖ್​ ಖಾನ್, ಅಮಿರ್ ಖಾನ್, ರಣಬೀರ್ ಕಪೂರ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಸಾರಾ ಅಲಿ ಖಾನ್, ವಿಕ್ಕಿ ಕೌಶಲ್, ಶೋಭಿತಾ ಧುಲಿಪಾಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!