AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ತೆಗೆದುಕೊಳ್ಳುತ್ತಿರುವ ಹೀರೋಗಳು ಶೀಘ್ರವೇ ಅರೆಸ್ಟ್; ಪೊಲೀಸರ ಎಚ್ಚರಿಕೆ

‘ಪೊಲೀಸರು ಸೆಲೆಬ್ರಿಟಿಗಳನ್ನು ಹಿಂಬಾಲಿಸುತ್ತಿದ್ದಾರೆ. ಶೀಘ್ರದಲ್ಲೇ ಡ್ರಗ್ಸ್ ಸೇವಿಸುವ ಸೆಲೆಬ್ರಿಟಿಗಳನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ, ಯಾರೆಲ್ಲ ಅರೆಸ್ಟ್ ಆಗಬಹುದು ಎನ್ನುವ ಕುತೂಹಲ ಮೂಡಿದೆ.

ಡ್ರಗ್ಸ್ ತೆಗೆದುಕೊಳ್ಳುತ್ತಿರುವ ಹೀರೋಗಳು ಶೀಘ್ರವೇ ಅರೆಸ್ಟ್; ಪೊಲೀಸರ ಎಚ್ಚರಿಕೆ
ಸೇತು ರಮಣ್
ರಾಜೇಶ್ ದುಗ್ಗುಮನೆ
|

Updated on:May 17, 2023 | 9:41 AM

Share

ಚಿತ್ರರಂಗದಲ್ಲಿ ಆಗಾಗ ಡ್ರಗ್ (Drugs) ವಿಚಾರ ಸದ್ದು ಮಾಡುತ್ತಿರುತ್ತದೆ. ಮಾದಕ ದ್ರವ್ಯ ಕೇಸ್​ನಲ್ಲಿ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಅರೆಸ್ಟ್ ಆಗಿದ್ದಾರೆ. ಈಗ ಮಲಯಾಳಂ (Mollywood) ಚಿತ್ರರಂಗದಲ್ಲಿ ಮತ್ತೆ ಡ್ರಗ್ ವಿಚಾರ ಸದ್ದು ಮಾಡುತ್ತಿದೆ. ಯುವ ಹೀರೋಗಳು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎನ್ನುವ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಹೀಗಾಗಿ ಪೊಲೀಸರು ಶೂಟಿಂಗ್ ಸೆಟ್ ಮೇಲೆ ಕಣ್ಣು ಇಟ್ಟಿದ್ದಾರೆ. ಹಿಗಿರುವಾಗಲೇ ಈ ರೀತಿ ಡ್ರಗ್ಸ್ ತೆಗೆದುಕೊಳ್ಳುವ ನಟರನ್ನು ಅರೆಸ್ಟ್ ಮಾಡುವುದಾಗಿ ಕೊಚ್ಚಿ ಸಿಟಿ ಪೊಲೀಸ್ ಆಯುಕ್ತ ಎಚ್ಚರಿಕೆ ನೀಡಿದ್ದಾರೆ.

‘ಮಾದಕ ದ್ರವ್ಯಗಳನ್ನು ಹೊಂದಿದ್ದರೆ ಅಥವಾ ಅದನ್ನು ಬಳಸುತ್ತಿದ್ದಾಗ ಮಾತ್ರ ಅವರನ್ನು ಬಂಧಿಸಬಹುದು ಎಂಬ ನಿಯಮ ಇದೆ. ಹೆಚ್ಚಿನ ಸಂದರ್ಭಗಳಲ್ಲಿ ಅವರ ಸಹಾಯಕರು ಡ್ರಗ್ಸ್ ತಲುಪಿಸುತ್ತಾರೆ. ಪೊಲೀಸರು ಈ ಸೆಲೆಬ್ರಿಟಿಗಳನ್ನು ಹಿಂಬಾಲಿಸುತ್ತಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು’ ಎಂದು ಕೊಚ್ಚಿ ಸಿಟಿ ಪೊಲೀಸ್ ಆಯುಕ್ತ ಸೇತು ರಮಣ್ ಮಾಹಿತಿ ನೀಡಿದ್ದಾರೆ.

‘ಡ್ರಗ್ಸ ಸೇವನೆ ಕಾನೂನು ಬಾಹಿರ. ಹೀಗಾಗಿ ಸಿನಿಮಾ ಸೆಟ್‌ಗಳಲ್ಲಿ ತಪಾಸಣೆ ನಡೆಸಲು ಯಾವುದೇ ಅಡೆತಡೆ ಇಲ್ಲ. ಹೆಸರಾಂತ ಕಲಾವಿದರು ಡ್ರಗ್ಸ್ ಬಳಸಿ ಯಶಸ್ಸನ್ನು ಸಾಧಿಸಿಲ್ಲ. ಕೊಚ್ಚಿಯ ಸಿನಿಮಾ ಸೆಟ್‌ಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರಿಣಾಮವಾಗಿ ಮಾದಕ ದ್ರವ್ಯ ಸೇವನೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Drug Abuse: ಇಬ್ಬರು ಯುವ ಹೀರೋಗಳ ಮೇಲೆ ಡ್ರಗ್ಸ್​ ಸೇವನೆ ಆರೋಪ; ಶೂಟಿಂಗ್​ ಸ್ಥಳದ ಮೇಲೆ ಪೊಲೀಸರ ಕಣ್ಣು

ಅತ್ಯುತ್ತಮ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ನೀಡುವಲ್ಲಿ ಮಲಯಾಳಂ ಸಿನಿಮಾರಂಗ ಮುಂಚೂಣಿಯಲ್ಲಿದೆ​ ಎಂಬುದರಲ್ಲಿ ಎರಡು ಮಾತಿಲ್ಲ. ಮಾಲಿವುಡ್​ ಸಿನಿಮಾಗಳ ಬಗ್ಗೆ ಇಡೀ ದೇಶವೇ ಮಾತನಾಡುತ್ತದೆ. ಆದರೆ ಕೆಲವೇ ಕೆಲವರು ಮಾಡುವ ಕಾನೂನು ಬಾಹಿರ ಕೆಲಸಗಳಿಂದಾಗಿ ಇಡೀ ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಅಂಟಿಕೊಳ್ಳುತ್ತದೆ. ಇತ್ತೀಚೆಗೆ ‘ಕೇರಳ ಸಿನಿಮಾ ನಿರ್ಮಾಪಕರ ಸಂಘ’ ಒಂದು ಆರೋಪ ಮಾಡಿದೆ. ಇಬ್ಬರು ಯುವ ನಟರು ಡ್ರಗ್ಸ್​ ಸೇವನೆ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇನ್ನುಳಿದ ಕಲಾವಿದರು ಕೂಡ ಇದರಲ್ಲಿ ಭಾಗಿ ಆಗಿರಬರಹುದು ಎಂದು ಸಂಘ ಹೇಳಿತ್ತು. ಈ ಬೆನ್ನಲ್ಲೇ ಕಾರ್ಯಾಚರಣೆ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:27 am, Wed, 17 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ