AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?

‘ಆರ್​ಆರ್​ಆರ್​’ ಚಿತ್ರದಲ್ಲಿ ಇಬ್ಬರು ಸ್ನೇಹಿತರ ನಡುವಿನ ಕಥೆ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?
ಜ್ಯೂ. ಎನ್​ಟಿಆರ್​, ರಾಮ್​ ಚರಣ್​
TV9 Web
| Edited By: |

Updated on:May 28, 2022 | 9:19 AM

Share

ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಧೂಳೆಬ್ಬಿಸಿದ ಸಿನಿಮಾಗಳ ಪೈಕಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಪ್ರಮುಖವಾದದ್ದು. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಮುಖ್ಯಭೂಮಿಕೆ ನಿಭಾಯಿಸಿದ್ದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೂಪರ್​ ಹಿಟ್​ ಆಯಿತು. ಈಗ ಒಟಿಟಿಗೂ ಕಾಲಿಟ್ಟು ಜನಮೆಚ್ಚುಗೆ ಗಳಿಸುತ್ತಿದೆ. ಎಸ್​.ಎಸ್​. ರಾಜಮೌಳಿ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ನೀಡಿದ್ದಾರೆ. ಈ ನಡುವೆ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಒಂದು ಅಪವಾದ ಕೇಳಿಬಂದಿದೆ. ಈ ಚಿತ್ರದಲ್ಲಿ ಇರುವುದು ಸಲಿಂಗಕಾಮದ ಕಥೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಇಡೀ ಸಿನಿಮಾದ ಪ್ರತಿ ದೃಶ್ಯಗಳನ್ನೂ ಕಣ್ಣರಳಿಸಿ ನೋಡಿದ ಭಾರತೀಯ ಪ್ರೇಕ್ಷಕರಿಗೆ ಸಲಿಂಗಕಾಮದ ವಿಷಯ ಕಾಣಿಸಿಲ್ಲ. ಆದರೆ ವಿದೇಶದ ಕೆಲವು ಮಂದಿ ಮಾತ್ರ ಈ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​ ಹಾಗೂ ರಾಮ್​ ಚರಣ್​ (Ram Charan) ಮಾಡಿದ ಪಾತ್ರಗಳನ್ನು ಪಾಶ್ಚಿಮಾತ್ಯ ಪ್ರೇಕ್ಷಕರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಾಜಮೌಳಿ ಅವರ ಕಡೆಯಿಂದಾಗಲಿ ಅಥವಾ ಚಿತ್ರತಂಡ ಇತರ ಸದಸ್ಯರಿಂದಾಗಲಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್​ ಆಗುತ್ತಿದೆ. ಹಿಂದಿ ವರ್ಷನ್​ ಅನ್ನು ನೆಟ್​ಫ್ಲಿಕ್ಸ್​ ಪ್ರಸಾರ ಮಾಡುತ್ತಿದೆ. ಇನ್ನುಳಿದ ಭಾಷೆಗಳಲ್ಲಿ ಜೀ5 ಪ್ರಸಾರ ಮಾಡುತ್ತಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಈ ಸಿನಿಮಾವನ್ನು ನೋಡಿದವರು ಇದನ್ನು ಸಲಿಂಗಕಾಮದ ಕಥೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ಇದನ್ನೂ ಓದಿ: ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ

‘ಆರ್​ಆರ್​ಆರ್​’ ಚಿತ್ರದಲ್ಲಿ ಕೊಮರಮ್​ ಭೀಮ್​ ಎಂಬ ಪಾತ್ರವನ್ನು ಜ್ಯೂ. ಎನ್​ಟಿಆರ್​ ನಿಭಾಯಿಸಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಎಂಬ ಪಾತ್ರವನ್ನು ರಾಮ್​ ಚರಣ್​ ಮಾಡಿದ್ದಾರೆ. ಇಬ್ಬರ ನಡುವಿನ ಸ್ನೇಹ ಈ ಕಥೆಯಲ್ಲಿ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ. ಆದರೆ ಅದನ್ನು ಸಲಿಂಗಕಾಮ ಎಂದು ತಪ್ಪಾಗಿ ಅರ್ಥೈಸಿಕೊಂಡು ಕೆಲವು ಪಾಶ್ಚಿಮಾತ್ಯ ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ.

ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡುವಲ್ಲಿ ಯಶಸ್ವಿ ಆಗಿದೆ. ರಾಜಮೌಳಿ ಅವರು ಸೋಲಿಲ್ಲದ ಸರದಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ನಟಿ ಆಲಿಯಾ ಭಟ್​ ಅವರು ದಕ್ಷಿಣ ಭಾರತಕ್ಕೆ ಕಾಲಿಟ್ಟರು. ಅಜಯ್​ ದೇವಗನ್​ ಕೂಡ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದರು. ಇದರಿಂದ ಉತ್ತರ ಭಾರತದ ಪ್ರೇಕ್ಷಕರೂ ಈ ಸಿನಿಮಾವನ್ನು ಕೌತುಕದಿಂದ ನೋಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:19 am, Sat, 28 May 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ