AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?

‘ಆರ್​ಆರ್​ಆರ್​’ ಚಿತ್ರದಲ್ಲಿ ಇಬ್ಬರು ಸ್ನೇಹಿತರ ನಡುವಿನ ಕಥೆ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?
ಜ್ಯೂ. ಎನ್​ಟಿಆರ್​, ರಾಮ್​ ಚರಣ್​
TV9 Web
| Updated By: ಮದನ್​ ಕುಮಾರ್​|

Updated on:May 28, 2022 | 9:19 AM

Share

ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಧೂಳೆಬ್ಬಿಸಿದ ಸಿನಿಮಾಗಳ ಪೈಕಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಪ್ರಮುಖವಾದದ್ದು. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಮುಖ್ಯಭೂಮಿಕೆ ನಿಭಾಯಿಸಿದ್ದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೂಪರ್​ ಹಿಟ್​ ಆಯಿತು. ಈಗ ಒಟಿಟಿಗೂ ಕಾಲಿಟ್ಟು ಜನಮೆಚ್ಚುಗೆ ಗಳಿಸುತ್ತಿದೆ. ಎಸ್​.ಎಸ್​. ರಾಜಮೌಳಿ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ನೀಡಿದ್ದಾರೆ. ಈ ನಡುವೆ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಒಂದು ಅಪವಾದ ಕೇಳಿಬಂದಿದೆ. ಈ ಚಿತ್ರದಲ್ಲಿ ಇರುವುದು ಸಲಿಂಗಕಾಮದ ಕಥೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಇಡೀ ಸಿನಿಮಾದ ಪ್ರತಿ ದೃಶ್ಯಗಳನ್ನೂ ಕಣ್ಣರಳಿಸಿ ನೋಡಿದ ಭಾರತೀಯ ಪ್ರೇಕ್ಷಕರಿಗೆ ಸಲಿಂಗಕಾಮದ ವಿಷಯ ಕಾಣಿಸಿಲ್ಲ. ಆದರೆ ವಿದೇಶದ ಕೆಲವು ಮಂದಿ ಮಾತ್ರ ಈ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​ ಹಾಗೂ ರಾಮ್​ ಚರಣ್​ (Ram Charan) ಮಾಡಿದ ಪಾತ್ರಗಳನ್ನು ಪಾಶ್ಚಿಮಾತ್ಯ ಪ್ರೇಕ್ಷಕರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಾಜಮೌಳಿ ಅವರ ಕಡೆಯಿಂದಾಗಲಿ ಅಥವಾ ಚಿತ್ರತಂಡ ಇತರ ಸದಸ್ಯರಿಂದಾಗಲಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್​ ಆಗುತ್ತಿದೆ. ಹಿಂದಿ ವರ್ಷನ್​ ಅನ್ನು ನೆಟ್​ಫ್ಲಿಕ್ಸ್​ ಪ್ರಸಾರ ಮಾಡುತ್ತಿದೆ. ಇನ್ನುಳಿದ ಭಾಷೆಗಳಲ್ಲಿ ಜೀ5 ಪ್ರಸಾರ ಮಾಡುತ್ತಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಈ ಸಿನಿಮಾವನ್ನು ನೋಡಿದವರು ಇದನ್ನು ಸಲಿಂಗಕಾಮದ ಕಥೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ಇದನ್ನೂ ಓದಿ: ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ

‘ಆರ್​ಆರ್​ಆರ್​’ ಚಿತ್ರದಲ್ಲಿ ಕೊಮರಮ್​ ಭೀಮ್​ ಎಂಬ ಪಾತ್ರವನ್ನು ಜ್ಯೂ. ಎನ್​ಟಿಆರ್​ ನಿಭಾಯಿಸಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಎಂಬ ಪಾತ್ರವನ್ನು ರಾಮ್​ ಚರಣ್​ ಮಾಡಿದ್ದಾರೆ. ಇಬ್ಬರ ನಡುವಿನ ಸ್ನೇಹ ಈ ಕಥೆಯಲ್ಲಿ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ. ಆದರೆ ಅದನ್ನು ಸಲಿಂಗಕಾಮ ಎಂದು ತಪ್ಪಾಗಿ ಅರ್ಥೈಸಿಕೊಂಡು ಕೆಲವು ಪಾಶ್ಚಿಮಾತ್ಯ ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ.

ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡುವಲ್ಲಿ ಯಶಸ್ವಿ ಆಗಿದೆ. ರಾಜಮೌಳಿ ಅವರು ಸೋಲಿಲ್ಲದ ಸರದಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ನಟಿ ಆಲಿಯಾ ಭಟ್​ ಅವರು ದಕ್ಷಿಣ ಭಾರತಕ್ಕೆ ಕಾಲಿಟ್ಟರು. ಅಜಯ್​ ದೇವಗನ್​ ಕೂಡ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದರು. ಇದರಿಂದ ಉತ್ತರ ಭಾರತದ ಪ್ರೇಕ್ಷಕರೂ ಈ ಸಿನಿಮಾವನ್ನು ಕೌತುಕದಿಂದ ನೋಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:19 am, Sat, 28 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ