Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?

‘ಆರ್​ಆರ್​ಆರ್​’ ಚಿತ್ರದಲ್ಲಿ ಇಬ್ಬರು ಸ್ನೇಹಿತರ ನಡುವಿನ ಕಥೆ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ.

‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?
ಜ್ಯೂ. ಎನ್​ಟಿಆರ್​, ರಾಮ್​ ಚರಣ್​
Follow us
TV9 Web
| Updated By: ಮದನ್​ ಕುಮಾರ್​

Updated on:May 28, 2022 | 9:19 AM

ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಧೂಳೆಬ್ಬಿಸಿದ ಸಿನಿಮಾಗಳ ಪೈಕಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಪ್ರಮುಖವಾದದ್ದು. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಮುಖ್ಯಭೂಮಿಕೆ ನಿಭಾಯಿಸಿದ್ದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೂಪರ್​ ಹಿಟ್​ ಆಯಿತು. ಈಗ ಒಟಿಟಿಗೂ ಕಾಲಿಟ್ಟು ಜನಮೆಚ್ಚುಗೆ ಗಳಿಸುತ್ತಿದೆ. ಎಸ್​.ಎಸ್​. ರಾಜಮೌಳಿ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ನೀಡಿದ್ದಾರೆ. ಈ ನಡುವೆ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಒಂದು ಅಪವಾದ ಕೇಳಿಬಂದಿದೆ. ಈ ಚಿತ್ರದಲ್ಲಿ ಇರುವುದು ಸಲಿಂಗಕಾಮದ ಕಥೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಇಡೀ ಸಿನಿಮಾದ ಪ್ರತಿ ದೃಶ್ಯಗಳನ್ನೂ ಕಣ್ಣರಳಿಸಿ ನೋಡಿದ ಭಾರತೀಯ ಪ್ರೇಕ್ಷಕರಿಗೆ ಸಲಿಂಗಕಾಮದ ವಿಷಯ ಕಾಣಿಸಿಲ್ಲ. ಆದರೆ ವಿದೇಶದ ಕೆಲವು ಮಂದಿ ಮಾತ್ರ ಈ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​ ಹಾಗೂ ರಾಮ್​ ಚರಣ್​ (Ram Charan) ಮಾಡಿದ ಪಾತ್ರಗಳನ್ನು ಪಾಶ್ಚಿಮಾತ್ಯ ಪ್ರೇಕ್ಷಕರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಾಜಮೌಳಿ ಅವರ ಕಡೆಯಿಂದಾಗಲಿ ಅಥವಾ ಚಿತ್ರತಂಡ ಇತರ ಸದಸ್ಯರಿಂದಾಗಲಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್​ ಆಗುತ್ತಿದೆ. ಹಿಂದಿ ವರ್ಷನ್​ ಅನ್ನು ನೆಟ್​ಫ್ಲಿಕ್ಸ್​ ಪ್ರಸಾರ ಮಾಡುತ್ತಿದೆ. ಇನ್ನುಳಿದ ಭಾಷೆಗಳಲ್ಲಿ ಜೀ5 ಪ್ರಸಾರ ಮಾಡುತ್ತಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಈ ಸಿನಿಮಾವನ್ನು ನೋಡಿದವರು ಇದನ್ನು ಸಲಿಂಗಕಾಮದ ಕಥೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ಇದನ್ನೂ ಓದಿ: ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ

‘ಆರ್​ಆರ್​ಆರ್​’ ಚಿತ್ರದಲ್ಲಿ ಕೊಮರಮ್​ ಭೀಮ್​ ಎಂಬ ಪಾತ್ರವನ್ನು ಜ್ಯೂ. ಎನ್​ಟಿಆರ್​ ನಿಭಾಯಿಸಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಎಂಬ ಪಾತ್ರವನ್ನು ರಾಮ್​ ಚರಣ್​ ಮಾಡಿದ್ದಾರೆ. ಇಬ್ಬರ ನಡುವಿನ ಸ್ನೇಹ ಈ ಕಥೆಯಲ್ಲಿ ಹೈಲೈಟ್​ ಆಗಿದೆ. ಒಬ್ಬರಿಗೊಬ್ಬರು ಪ್ರಾಣ ಬೇಕಾದರೂ ನೀಡುವಷ್ಟು ಆತ್ಮೀಯತೆ ಆ ಪಾತ್ರಗಳ ನಡುವೆ ಇದೆ. ಆದರೆ ಅದನ್ನು ಸಲಿಂಗಕಾಮ ಎಂದು ತಪ್ಪಾಗಿ ಅರ್ಥೈಸಿಕೊಂಡು ಕೆಲವು ಪಾಶ್ಚಿಮಾತ್ಯ ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ.

ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡುವಲ್ಲಿ ಯಶಸ್ವಿ ಆಗಿದೆ. ರಾಜಮೌಳಿ ಅವರು ಸೋಲಿಲ್ಲದ ಸರದಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ನಟಿ ಆಲಿಯಾ ಭಟ್​ ಅವರು ದಕ್ಷಿಣ ಭಾರತಕ್ಕೆ ಕಾಲಿಟ್ಟರು. ಅಜಯ್​ ದೇವಗನ್​ ಕೂಡ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದರು. ಇದರಿಂದ ಉತ್ತರ ಭಾರತದ ಪ್ರೇಕ್ಷಕರೂ ಈ ಸಿನಿಮಾವನ್ನು ಕೌತುಕದಿಂದ ನೋಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:19 am, Sat, 28 May 22

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ