AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ?

Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಫೆಬ್ರವರಿ 26 ರಂದು ಮದುವೆ ಆಗುತ್ತಿದ್ದಾರೆ. ಅದಾದ ಬಳಿಕ ಅವರು ಅದ್ಧೂರಿ ರಿಸೆಪ್ಷನ್ ಅನ್ನು ಸಹ ಆಯೋಜನೆ ಮಾಡಿದ್ದಾರೆ. ಇದೀಗ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಅದ್ಧೂರಿ ಆಮಂತ್ರಣ ಪತ್ರಿಕೆಯ ಒಳಗೆ ಏನೆಲ್ಲ ಇದೆ? ಇಲ್ಲಿದೆ ಮಾಹಿತಿ...

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ?
Rashmika Vijay
ಮಂಜುನಾಥ ಸಿ.
|

Updated on:Feb 18, 2026 | 7:15 PM

Share

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ತೆಲುಗಿನ ನಟ ವಿಜಯ್ ದೇವರಕೊಂಡ ತಮ್ಮ ಬಹುವರ್ಷಗಳ ಪ್ರೀತಿಯನ್ನು ದಾಂಪತ್ಯಕ್ಕೆ ಬಡ್ತಿ ನೀಡುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಅದ್ಧೂರಿಯಾಗಿ ವಿವಾಹ ಆಗಲಿದ್ದು, ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಈ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ವಿವಾಹ ಆಗಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ ಸಹ ಬಲು ಅದ್ಧೂರಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಆಮಂತ್ರಣ ಪತ್ರಿಕೆ ಬಾಕ್ಸ್ ಮಾದರಿಯಲ್ಲಿದ್ದು, ಬಾಕ್ಸ್​​ನಲ್ಲಿ ಆಮಂತ್ರಣ ಪತ್ರಿಕೆಯ ಜೊತೆಗೆ ಹಲವು ವಸ್ತುಗಳನ್ನು ಇಡಲಾಗಿದೆ. ರಶ್ಮಿಕಾ ತಮ್ಮ ನ್ಯಾಷನಲ್ ಕ್ರಶ್ ಹೆಸರಿನ ಸುಗಂಧ ದ್ರವ್ಯ ಬ್ರ್ಯಾಂಡ್ ಹೊಂದಿದ್ದು, ಅದನ್ನು ಆಮಂತ್ರಣ ಪತ್ರಿಕೆಯ ಜೊತೆಗೆ ಇರಿಸಿದ್ದಾ. ಜೊತೆಗೆ ಹ್ಯಾಂಡ್ ಲೋಷನ್ ಮತ್ತು ಫುಟ್ ಕ್ರೀಮ್​​ಗಳು ಸಹ ಆಮಂತ್ರಣ ಪತ್ರಿಕೆಯ ಬಾಕ್ಸ್​​ನಲ್ಲಿವೆ. ಇನ್ನು ವಿಜಯ್ ದೇವರಕೊಂಡ ‘ರೌಡಿ’ ಹೆಸರಿನ ಪ್ಯಾಷನ್ ಬ್​ರ್ಯಾಂಡ್ ಹೊಂದಿರುವುದು ಗೊತ್ತೇ ಇದೆ. ಅವರು ತಮ್ಮ ಬ್ರ್ಯಾಂಡಿನ ಟಿ-ಶರ್ಟ್ ಬಾಕ್ಸ್​​ನಲ್ಲಿ ಇರಿಸಿದ್ದಾರೆ.

ಆಮಂತ್ರಣ ಪತ್ರಿಕೆ ಬಾಕ್ಸ್​​ನಲ್ಲಿ ಪ್ರೀಮಿಯಮ್ ಬ್ರ್ಯಾಂಡಿನ ಒಣ ಹಣ್ಣುಗಳ ಪಾಕೆಟ್ ಅನ್ನು ಸಹ ಇರಿಸಲಾಗಿದೆ. ಇವೆಲ್ಲವನ್ನೂ ಸುಂದರವಾಗಿ ಪ್ರೆಸೆಂಟೆಬಲ್ ರೀತಿಯಲ್ಲಿ ಪ್ಯಾಕ್ ಮಾಡಲಾಗಿದೆ. ಇವುಗಳ ಜೊತೆಗೆ ಹಾಳೆಯೊಂದರಲ್ಲಿ ಸರಳದ ಆಮಂತ್ರಣ ಪತ್ರಿಕೆ ಇದ್ದು, ಅದರಲ್ಲಿ ಮದುವೆಯ ದಿನಾಂಕ, ಬಳಿಕ ರಿಸೆಪ್ಷನ್ ದಿನಾಂಕವನ್ನು ನಮೂದಿಸಲಾಗಿದೆ. ಮದುವೆ ಫೆಬ್ರವರಿ 26 ಕ್ಕೆ ನಡೆಯಲಿದ್ದು, ಮದುವೆ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು ಮತ್ತು ಅತ್ಯಾಪ್ತ ಸ್ನೇಹಿತರಷ್ಟೆ ಭಾಗಿ ಆಗಲಿದ್ದಾರೆ. ಬಳಿಕ ಮಾರ್ಚ್ 04 ರಂದು ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ಅದ್ಧೂರಿ ರಿಸೆಪ್ಷನ್ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಟಾಲಿವುಡ್ ಮತ್ತು ಬಾಲಿವುಡ್​ನ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ:‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ

ಅದಾದ ಕೆಲವು ದಿನಗಳ ಬಳಿಕ ಹೈದರಾಬಾದ್​ ಮತ್ತು ಮುಂಬೈಗಳಲ್ಲಿ ಮಾಧ್ಯಮದವರು ಫೋಟೊಗ್ರಾಫರ್​​ಗಳಿಗಾಗಿ ವಿಶೇಷ ಔತಣಕೂಟವನ್ನು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಆಯೋಜಿಸಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಕಳೆದ ಕೆಲವಾರು ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಇಬ್ಬರೂ ಒಟ್ಟಿಗೆ ‘ಗೀತ ಗೋವಿಂದಂ’ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾ 2018 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಆಗ ಇಬ್ಬರು ಗೆಳೆಯರಾಗಿದ್ದರು, ಆದರೆ ಬಳಿಕ ಆ ಗೆಳೆತನ ಪ್ರೀತಿಗೆ ತಿರುಗಿತು. ಕಳೆದ ಕೆಲ ವರ್ಷಗಳಿಂದ ಇಬ್ಬರೂ ಲಿವಿನ್ ರಿಲೇಷನ್​​ನಲ್ಲಿದ್ದರು ಎನ್ನಲಾಗಿತ್ತು. ಇದೀಗ ಕೊನೆಗೂ ಇಬ್ಬರೂ ಮದುವೆ ಆಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Wed, 18 February 26

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು