AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

ನಯನತಾರಾ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕಮಲ್​ ಹಾಸನ್​ ಸೇರಿದಂತೆ ಸಾಕಷ್ಟು ನಾಯಕರು ಸಿಟ್ಟಾಗಿದ್ದಾರೆ. ಚುನಾವಣೆಯಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಈ ರೀತಿ ಕಮೆಂಟ್​ಗಳನ್ನು ಮಾಡೋದು ಸರಿಯಲ್ಲ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ
ರಾಧಾ ರವಿ- ನಯನತಾರಾ
ರಾಜೇಶ್ ದುಗ್ಗುಮನೆ
|

Updated on:Apr 02, 2021 | 4:02 PM

Share

ತಮಿಳುನಾಡಿನಲ್ಲಿ ಚುನಾವಣಾ ಕಾವು ಜೋರಾಗಿದೆ. ಡಿಎಂಕೆ-ಎಐಡಿಎಂಕೆ ಪಕ್ಷಗಳು ಪರಸ್ಪರ ರಾಜಕೀಯ ಕೆಸರೆರೆಚಾಟದಲ್ಲಿ ತೊಡಗಿಕೊಂಡಿವೆ. ಬಿಜೆಪಿ-ಎಐಎಡಿಎಂಕೆ ಪರ ಪ್ರಚಾರ ಮಾಡುವಾಗ ಹಿರಿಯ ನಟ ಹಾಗೂ ರಾಜಕೀಯ ನಾಯಕ ರಾಧಾ ರವಿ ಅವರು ನಯನತಾರಾ ಬಗ್ಗೆ ಅಶ್ಲೀಲವಾಗಿ ಕಮೆಂಟ್​ ಮಾಡಿದ್ದಾರೆ. ಈ ವಿಚಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ನಯನತಾರ ಡಿಎಂಕೆಗೆ ಏನು ಸಂಬಂಧ ಇತ್ತು? ಅವರೇನು ಪಕ್ಷದ ಪಿಆರ್​ಒ ಆಗಿದ್ದರಾ? ಒಂದೆರಡು ವರ್ಷಗಳ ಹಿಂದೆ ನಯನತಾರ ವಿರುದ್ಧ ಟೀಕೆ ಮಾಡಿದ್ದಕ್ಕಾಗಿ ಡಿಎಂಕೆಯ ಕೆಲವು ದೊಡ್ಡತಲೆಗಳು ನನ್ನನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸಿದ್ದವು. ಉದಯನಿಧಿ ಸ್ಟಾಲಿನ್ ಅವರೊಂದಿಗೆ ನಯನತಾರಾ ಲಿವ್​-ಇನ್​ನಲ್ಲಿ ಇದ್ದರೆ ನಾನು ಏನು ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಅವರು ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಉದಯನಿಧಿ ಸ್ಟಾಲಿನ್​ ಡಿಎಂಕೆ ನಾಯಕ ಸ್ಟಾಲಿನ್​ ಅವರ ಮಗ. ಅವರು ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ನಯನತಾರಾ ಜತೆಗೆ ಸಿನಿಮಾ ಕೂಡ ಮಾಡಿದ್ದಾರೆ. ಈ ಕಾರಣಕ್ಕೆ ರಾಧ ರವಿ ಈ ರೀತಿ ಕಮೆಂಟ್​ ಮಾಡಿದ್ದಾರೆ.

ನಯನತಾರಾ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕಮಲ್​ ಹಾಸನ್​ ಸೇರಿದಂತೆ ಸಾಕಷ್ಟು ನಾಯಕರು ಸಿಟ್ಟಾಗಿದ್ದಾರೆ. ಚುನಾವಣೆಯಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಈ ರೀತಿ ಕಮೆಂಟ್​ಗಳನ್ನು ಮಾಡೋದು ಸರಿಯಲ್ಲ ಎನ್ನುವ ಎಚ್ಚರಿಕೆ ನೀಡಿದ್ದಾರೆ.

ಡಿಎಂಕೆ ಅಭ್ಯರ್ಥಿ ದಿಂಡಿಗಲ್ ಲಿಯೋನಿ ಕೊಟ್ಟ ಹೇಳಿಕೆ ಕೂಡ ಟೀಕೆಗೆ ಒಳಗಾಗಿದೆ. ಮಹಿಳೆಯರನ್ನು ಹಸುಗಳಿಗೆ ಹೋಲಿಸಿದ್ದಲ್ಲದೆ, ವಿದೇಶಿ ಹಸುಗಳ ಹಾಲು ಕುಡಿದು ತಮ್ಮ ಆಕಾರವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದರು. ಪ್ರಚಾರಕ್ಕೆ ತೆರಳಿದ್ದ ವೇಳೆ, ಅಸಭ್ಯವಾಗಿ ಕೈಸನ್ನೆ ಮಾಡುತ್ತ, ಇತ್ತೀಚೆಗೆ ಮಹಿಳೆಯರು ವಿದೇಶಿ ಹಸುಗಳ ಹಾಲುಗಳನ್ನು ಕುಡಿಯುತ್ತಿರುವ ಕಾರಣ ಅವರ ತೂಕ ಹೆಚ್ಚಾಗುತ್ತಿದೆ. ಇದೇ ಕಾರಣದಿಂದ, ತೆಳ್ಳಗೆ ಇರಬೇಕಿದ್ದ ಅವರ ಸೊಂಟ ದಪ್ಪವಾಗುತ್ತಿದೆ. ಮೊದಲೆಲ್ಲ ಮಹಿಳೆಯರ ಆಕಾರ ಎಂಟರ ಆಕೃತಿಯಲ್ಲಿ ಇರುತ್ತಿತ್ತು. ಅಂದರೆ ಸೊಂಟ ತೆಳುವಾಗಿ ಇರುತ್ತಿತ್ತು. ಮಕ್ಕಳನ್ನು ಎತ್ತಿಕೊಂಡರೆ ಆ ಮಗು ತಾಯಿಯ ಸೊಂಟದ ಮೇಲೆ ಸರಿಯಾಗಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿತ್ತು. ಆದರೆ ಈಗೀಗ ಮಹಿಳೆಯ ಸೊಂಟ ಪೀಪಾಯಿಯಂತೆ ದೊಡ್ಡದಾಗಿ ಇರುತ್ತದೆ. ಹಾಗಾಗಿ ಮಕ್ಕಳನ್ನು ಸೊಂಟದ ಮೇಲೆ ಎತ್ತಿಕೊಳ್ಳಲೂ ಅವರಿಗೆ ಆಗುವುದಿಲ್ಲ ಎಂದು ಟೀಕೆ ಮಾಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ‘

ಇದನ್ನೂ ಓದಿ: ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಸಾವಿಗೆ ನರೇಂದ್ರ ಮೋದಿಯವರ ಕಿರುಕುಳವೇ ಕಾರಣ: ಸ್ಟಾಲಿನ್ ಪುತ್ರ ಉದಯನಿಧಿ

 ‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

Published On - 3:59 pm, Fri, 2 April 21

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ