AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​. ಅಶ್ವಿನ್ ಬಯೋಪಿಕ್ ಮಾಡಲು ನಡೆದಿತ್ತು ತಯಾರಿ? ಆ ಸಿನಿಮಾ ಸೆಟ್ಟೇರಲಿಲ್ಲವೇಕೆ?

Ravichandran Ashwin Retirement: ರವಿಚಂದ್ರನ್ ಅಶ್ವಿನ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯು ಸುದ್ದಿಯಾಗಿದೆ. 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದ ನಂತರ ನಿವೃತ್ತಿ ಘೋಷಿಸಿದ್ದಾರೆ. ಅವರ ಬಯೋಪಿಕ್ ಬಗ್ಗೆ 2021ರಲ್ಲಿ ವದಂತಿಗಳು ಹಬ್ಬಿದ್ದವು, ಅಶೋಕ್ ಸೆಲ್ವನ್ ನಟಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿತ್ತು.

ಆರ್​. ಅಶ್ವಿನ್ ಬಯೋಪಿಕ್ ಮಾಡಲು ನಡೆದಿತ್ತು ತಯಾರಿ? ಆ ಸಿನಿಮಾ ಸೆಟ್ಟೇರಲಿಲ್ಲವೇಕೆ?
ಅಶೋಕ್ ಸೆಲ್ವನ್-ಆರ್​. ಅಶ್ವಿನ್
ರಾಜೇಶ್ ದುಗ್ಗುಮನೆ
|

Updated on:Dec 18, 2024 | 2:27 PM

Share

ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ  ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ ಅವರು, ಸರಣಿಯಲ್ಲಿ ಎರಡು ಪಂದ್ಯ ಬಾಕಿ ಇರುವಾಗಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಮಧ್ಯೆ ಅವರ ಬಯೋಪಿಕ್ ವಿಚಾರ ಚರ್ಚೆಗೆ ಬಂದಿದೆ. ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ? ಹೀಗೊಂದು ಚರ್ಚೆ 2021ರಲ್ಲಿ ನಡೆದಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಕ್ರಿಕೆಟರ್​ಗಳು, ರಾಜಕಾರಣಿಗಳು, ಸ್ವಾಂತಂತ್ರ್ಯ ಹೋರಾಟಗಾರರು ಸೇರಿದಂತೆ ಅನೇಕ ಗಣ್ಯರ ಮೇಲೆ ಬಯೋಪಿಕ್ ಮಾಡುವ ಟ್ರೆಂಡ್ ಜೋರಾಗಿದೆ. ಕ್ರಿಕೆಟರ್​ಗಳಾದ ಎಂಎಸ್ ಧೋನಿ, ಮುತ್ತಯ್ಯ ಮುರಳೀಧರನ್ ಸೇರಿದಂತೆ ಅನೇಕ ಕ್ರಿಕೆಟರ್​ಗಳ ಮೇಲೆ ಬಯೋಪಿಕ್ ಮಾಡಲಾಗಿದೆ. 2021ರಲ್ಲೂ ಆರ್. ಅಶ್ವಿನ್ ಮೇಲೆ ಬಯೋಪಿಕ್ ಮಾಡಲಾಗುತ್ತದೆ ಎಂದು ವರದಿ ಆಗಿತ್ತು. ಅಶ್ವಿನ್ ಜೊತೆ ಧೋನಿ ಪಾತ್ರವೂ ಇದರಲ್ಲಿ ಹೈಲೈಟ್ ಆಗಲಿದೆ ಎಂದು ಹೇಳಲಾಗಿತ್ತು.

ಇದು ವದಂತಿ ಮಾತ್ರ..

ನಟ ಅಶೋಕ್ ಸೆಲ್ವನ್ ಅವರು ತಮಿಳು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇವರು ಆರ್​.ಅಶ್ವಿನ್ ಬಯೋಪಿಕ್​ನಲ್ಲಿ ನಟಿಸುತ್ತಾರೆ ಎಂದು ವರದಿ ಆಗಿತ್ತು. ಇಷ್ಟೇ ಅಲ್ಲ ಕೆಲವರು ಅಶೋಕ್ ಸೆಲ್ವನ್ ಫೋಟೋಗೆ ಇಂಡಿಯನ್ ಜೆರ್ಸಿ ಹಾಕಿರುವ ಫೋಟೋನ ಹರಿಬಿಟ್ಟಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ವದಂತತಿ ಬಗ್ಗೆ ಅಶೋಕ್ ಸೆಲ್ವನ್ ಸ್ಪಷ್ಟನೆ ಕೊಟ್ಟಿದ್ದರು. ‘ನಾನು ಇದಕ್ಕೆ ಜವಾಬ್ದಾರನಲ್ಲ’ ಎಂದಿದ್ದರು. ಈ ಮೂಲಕ ಅಶೋಕ್ ಈ ವದಂತಿಗೆ ಸ್ಪಷ್ಟನೆ ನೀಡಿದ್ದರು. ಈ ಟ್ವೀಟ್​ಗೆ ಅಶ್ವಿನ್ ಕೂಡ ಉತ್ತರಿಸಿ ನಕ್ಕಿದ್ದರು. ಈ ವಿಚಾರ ಕೇಳಿ ಅಶ್ವಿನ್ ಫ್ಯಾನ್ಸ್ ಬೇಸರಗೊಂಡಿದ್ದರು.

ಇದನ್ನೂ ಓದಿ: ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್

ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಜರ್ನಿಯಲ್ಲಿ 14 ವರ್ಷ ಕಳೆದಿದ್ದಾರೆ. ಎರಡು ಟೆಸ್ಟ್​ಗಳು ಬಾಕಿ ಇರುವಾಗಲೇ ರೋಹಿತ್ ಶರ್ಮಾ ಜೊತೆ ಸುದ್ದಿಗೋಷ್ಠಿಗೆ ಆಗಮಿಸಿದ ಅಶ್ವಿನ್ ಅವರು ನಿವೃತ್ತಿ ಘೋಷಣೆ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:24 pm, Wed, 18 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?