AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT ‘Nakshatra Samman’ Award 2024: ಟಿವಿ9 ನೆಟ್‌ವರ್ಕ್‌ನ ‘ನಕ್ಷತ್ರ ಸಮ್ಮಾನ್’ ಪ್ರಶಸ್ತಿ ಸ್ವೀಕರಿಸಿದ ಸಾಧಕರ ಪಟ್ಟಿ ಇಲ್ಲಿದೆ

ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮದ ಮೊದಲ ದಿನವಾದ ಇಂದು(ಫೆಬ್ರವರಿ 25) ನಡೆದ 'ನಕ್ಷತ್ರ ಸಮ್ಮಾನ್' ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದು  'ನಕ್ಷತ್ರ ಸಮ್ಮಾನ್' ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟ ಸಾಧಕರ ಪಟ್ಟಿ ಇಲ್ಲಿದೆ.

WITT 'Nakshatra Samman' Award 2024: ಟಿವಿ9 ನೆಟ್‌ವರ್ಕ್‌ನ 'ನಕ್ಷತ್ರ ಸಮ್ಮಾನ್' ಪ್ರಶಸ್ತಿ ಸ್ವೀಕರಿಸಿದ ಸಾಧಕರ ಪಟ್ಟಿ ಇಲ್ಲಿದೆ
ಟಿವಿ9 ನಕ್ಷತ್ರ ಅವಾರ್ಡ್ಸ್
Follow us
ಅಕ್ಷತಾ ವರ್ಕಾಡಿ
| Updated By: ಮಂಜುನಾಥ ಸಿ.

Updated on:Feb 25, 2024 | 10:38 PM

ದೇಶದ ಅತಿದೊಡ್ಡ ಸುದ್ದಿ ನೆಟ್‌ವರ್ಕ್ ಟಿವಿ9 ಮತ್ತೊಂದು ವೇದಿಕೆಯನ್ನು ಸಿದ್ಧಗೊಳಿಸಿದೆ. ವಾಟ್ ಇಂಡಿಯಾ ಥಿಂಕ್ಸ್ ಟುಡೇ (What India Thinks Today) ಎಂಬ ಕಾರ್ಯಕ್ರಮ ಇಂದು (ಫೆ,25) ಸಂಜೆ 4ಗಂಟೆಯಿಂದ ಆರಂಭಗೊಂಡಿದ್ದು, ಫೆ,27ಕ್ಕೆ ಕೊನೆಗೊಳ್ಳಲಿದೆ. ಒಟ್ಟು ಮೂರು ದಿನಗಳ ಕಾಲ ನಡೆಯುವ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಮಾತನಾಡಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮವು ಆರ್ಥಿಕ ಸುಧಾರಣೆಗಳು ಮತ್ತು ಹೂಡಿಕೆಯ ಅವಕಾಶಗಳು, ತಾಂತ್ರಿಕ ಆವಿಷ್ಕಾರ ಮತ್ತು ಡಿಜಿಟಲ್ ರೂಪಾಂತರ, ಸಾಂಸ್ಕೃತಿಕ ರಾಜತಾಂತ್ರಿಕತೆ ಮತ್ತು ಮೃದು ಶಕ್ತಿ, ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆಡಳಿತ ಮತ್ತು ಭೌಗೋಳಿಕ ರಾಜಕೀಯದಲ್ಲಿ ಭಾರತದ ವಿಕಸನೀಯ ಪಾತ್ರದಂತಹ ಪ್ರಮುಖ ವಿಷಯಗಳ ಕುರಿತು ಇಲ್ಲಿ ಚರ್ಚೆ ನಡೆಯಲಿದೆ.

ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮದ ಮೊದಲ ದಿನವಾದ ಇಂದು(ಫೆಬ್ರವರಿ 25) ನಡೆದ ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದು  ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟ ಸಾಧಕರ ಪಟ್ಟಿ ಇಲ್ಲಿದೆ.

ರವೀನಾ ಟಂಡನ್:

ಕಳೆದ 30 ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ನಟಿ ರವೀನಾ ಟಂಡನ್ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ರವೀನಾ ಟಂಡನ್ ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮಹಿಳಾ ಸಬಲೀಕರಣದ ಬಗ್ಗೆ ಸದಾ ದನಿಯೆತ್ತುವ ನಟಿ ರವೀನಾ ಟಂಡನ್ ಸಾಮಾಜಿಕ ಜಾಲತಾಣದಲ್ಲೂ ತುಂಬಾ ಸಕ್ರಿಯರಾಗಿದ್ದಾರೆ. ತಮ್ಮ ನಟನೆಯ ಮೂಲಕ ಸಿನಿಪ್ರೀಯರನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರಿಗೆ ಫಿಲ್ಮ್‌ಫೇರ್ ಮತ್ತು ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ.

ಅನ್ಮೋಲ್‌ ಖಾರ್ಬ್‌:

ಬ್ಯಾಡ್ಮಿಂಟನ್‌ ಜಗತ್ತನ್ನು ಬೆರಗಾಗಿಸಿದ ಅನ್ಮೋಲ್‌ ಖಾರ್ಬ್‌ ಅವರಿಗೆ ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. 17 ವರ್ಷದ ಅನ್ಮೋಲ್‌ ಖಾರ್ಬ್‌ ಕಳೆದ ಡಿಸೆಂಬರ್‌ನಲ್ಲಷ್ಟೇ ರಾಷ್ಟ್ರೀಯ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಪ್ರತಿಭೆ. ಇದಲ್ಲದೇ ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ಮಹಿಳಾ ಬ್ಯಾಡ್ಮಿಂಟನ್‌ ತಂಡಕ್ಕೆ ಐತಿಹಾಸಿಕ ಚಿನ್ನವನ್ನು ತಂದುಕೊಟ್ಟಿದ್ದಾರೆ.

ರಾಕೇಶ್ ಚೌರಾಸಿಯಾ:

ಇತ್ತೀಚೆಗಷ್ಟೇ ನಡೆದ 66ನೇ ಸಾಲಿನ ಗ್ರ್ಯಾಮಿ ಅವಾರ್ಡ್ಸ್ನಲ್ಲಿ 2 ಗ್ರ್ಯಾಮಿ ಪ್ರಶಸ್ತಿಗಳನ್ನು ಗೆದ್ದ ಭಾರತದ ಶ್ರೇಷ್ಠ ಸಾಧಕ ರಾಕೇಶ್ ಚೌರಾಸಿಯಾ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೊಳಲು ನಾದನದ ಮೂಲಕ ಭಾರತದ ಹೆಸರನ್ನು ವಿಶ್ವಕ್ಕೆ ಪರಿಚಿಯಿಸಿದ ಕಲಾವಿದ ರಾಕೇಶ್ ಚೌರಾಸಿಯಾ ಅವರು.

ಅಮೀರ್ ಹುಸೇನ್ ಲೋನ್:

ಎಲ್ಲಾ ಇದ್ದರೂ ಏನೂ ಸಾಧಿಸಲಾಗದ ಈ ಕಾಲದಲ್ಲಿ ಕೈಗಳಿಲ್ಲದಿದ್ದರೂ ಕ್ರಿಕೆಟ್​ ಆಡಿ ಇವರು ಇಡೀ ವಿಶ್ವಕ್ಕೆ ಮಾದರಿಯಾಗಿರುವ ಅಮೀರ್ ಹುಸೇನ್ ಲೋನ್ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕಾಶ್ಮೀರದ ವಾಘಮಾ ಗ್ರಾಮದ 34 ವರ್ಷದ ದಿವ್ಯಾಂಗ ಕ್ರಿಕೆಟಿಗ ಅಮೀರ್ ಹುಸೇನ್ ಲೋನ್ ಅವರು ಕ್ರಿಕೆಟ್ ಜಗತ್ತಿನಲ್ಲಿ ಸ್ಪೂರ್ತಿದಾಯಕ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಅಲ್ಲು ಅರ್ಜುನ್​​ :

ತೆಲುಗು ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ನಟ ಅಲ್ಲು ಅರ್ಜುನ್ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. 2021ರ ಡಿಸೆಂಬರ್​​ನಲ್ಲಿ ‘ಪುಷ್ಪ: ದಿ ರೈಸ್’ ಬಿಡುಗಡೆಯಾಗಿ ಜಾಗತಿಕ ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರ 360 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿತ್ತು. ‘ಪುಷ್ಪ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿದ್ದು ಮಾತ್ರವಲ್ಲದೇ ನಟ ಅಲ್ಲು ಅರ್ಜುನ್​ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂದುಕೊಟ್ಟಿತ್ತು.

ಹರ್ಮಿಲನ್ ಬೈನ್ಸ್:

ಕ್ರೀಡಾಕ್ಷೇತ್ರದಲ್ಲಿ ಭಾರತವನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಿದ ಹರ್ಮಿಲನ್ ಬೈನ್ಸ್ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಜನಿಸಿದ ಹರ್ಮಿಲನ್ ಬೈನ್ಸ್,ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2023ರ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 1500 ಮೀಟರ್ ಓಟ ಮತ್ತು ಮಹಿಳೆಯರ 800 ಮೀಟರ್ ಓಟದಲ್ಲಿ ಸತತ ಮೇಲಿಂದ ಮೇಲೆ ಎರಡು ಪದಕ ಗೆದ್ದು ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಸಿಫ್ತ್‌ ಕೌರ್‌ ಸಮ್ರಾ:

2023ರ ಸಾಲಿನ ಏಷ್ಯಾ ಕ್ರೀಡಾಕೂಟದ ಮಹಿಳೆಯರ 50 ಮೀ. ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ವಿಶ್ವ ದಾಖಲೆಯೊಂದಿಗೆ ಭಾರತಕ್ಕೆ ಚಿನ್ನ ತಂದು ಕೊಟ್ಟ ಸಿಫ್ತ್‌ ಕೌರ್‌ ಸಮ್ರಾ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಯುವ ಶೂಟರ್​​​ ಸಿಫ್ತ್‌ ಕೌರ್‌ ಸಮ್ರಾ ಕ್ರೀಡಾ ಕ್ಷೇತ್ರದಲ್ಲಿ ಭಾರತದಲ್ಲಿ ವಿಶ್ವಕ್ಕೆ ಪರಿಚಯಿಸಿದವರಲ್ಲಿ ಒಬ್ಬರು.

ಶೆಫಾಲಿ ಷಾ:

ಕಳೆದ ಎರಡು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ ವಿಜೇತೆ ಶೆಫಾಲಿ ಷಾ ಅವರನ್ನು ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಫಿಲ್ಮ್‌ಫೇರ್ ಪ್ರಶಸ್ತಿ, ಸ್ಟಾರ್‌ಡಸ್ಟ್ ಪ್ರಶಸ್ತಿ, ಟೋಕಿಯೊ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಮತ್ತು ಏಷ್ಯನ್ ಅಕಾಡೆಮಿ ಕ್ರಿಯೇಟಿವ್ ಅವಾರ್ಡ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡುರುವ ಶೆಫಾಲಿ ಷಾ.

ವಿ.ಸೆಲ್ವಗಣೇಶ್​​​:

ಸಂಗೀತಾ ಕ್ಷೇತ್ರದಲ್ಲಿ ಸಾಧನೆಗೈದ ವಿ.ಸೆಲ್ವಗಣೇಶ್​​​ ಅವರನ್ನು ‘ನಕ್ಷತ್ರ ಸಮ್ಮಾನ್’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿ ಎಂದೇ ಕರೆಯಲಾಗುವ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಕೆಲವೇ ಕೆಲವು ಭಾರತೀಯ ಸಂಗೀತ ದಿಗ್ಗಜರಲ್ಲಿ ವಿ.ಸೆಲ್ವಗಣೇಶ್​​​ ಅವರು ಕೂಡ ಒಬ್ಬರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:19 pm, Sun, 25 February 24

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್