AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಿದು ದಾದಾ ಸಾಹೇಬ್​​ ಫಾಲ್ಕೆ ಪ್ರಶಸ್ತಿ? ಇದು ಭಾರತೀಯ ಚಿತ್ರರಂಗದಲ್ಲಿ ನೀಡಲಾಗುವ ಅತ್ಯಂತ ಶ್ರೇಷ್ಠ ಅವಾರ್ಡ್​​ ಯಾಕೆ? ಇಲ್ಲಿದೆ ಮಾಹಿತಿ

ಭಾರತದ ಸಿನಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಗೌರವವಕ್ಕೆ ಕನ್ನಡಿಗ, ನಟ ಅನಂತ್​​ ನಾಗ್​​ ಭಾಜನರಾಗಿದ್ದಾರೆ. ಅಷ್ಟಕ್ಕೂ ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಸ್ಮರಣಾರ್ಥ ನೀಡಲಾಗುವ ಅತ್ಯುನ್ನತ ಚಲನಚಿತ್ರ ಗೌರವ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯ ಇತಿಹಾಸ, ಮಹತ್ವ ಏನು? ಎಂಬ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಏನಿದು ದಾದಾ ಸಾಹೇಬ್​​ ಫಾಲ್ಕೆ ಪ್ರಶಸ್ತಿ? ಇದು ಭಾರತೀಯ ಚಿತ್ರರಂಗದಲ್ಲಿ ನೀಡಲಾಗುವ ಅತ್ಯಂತ ಶ್ರೇಷ್ಠ ಅವಾರ್ಡ್​​ ಯಾಕೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರImage Credit source: makemyexam.in
ಪ್ರಸನ್ನ ಹೆಗಡೆ
|

Updated on: Sep 16, 2026 | 7:54 PM

Share

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತದ ಸಿನಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಗೌರವವಾಗಿದ್ದು,  ಸಿನಿಮಾದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಖ್ಯಾತರಾದ ಧುಂಡಿರಾಜ್ ಗೋವಿಂದ್ ಫಾಲ್ಕೆ (ದಾದಾಸಾಹೇಬ್ ಫಾಲ್ಕೆ) ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಭಾರತ ಸರ್ಕಾರವು 1969ರಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ.

ಸ್ವರ್ಣ ಕಮಲ ಪದಕ, 10 ಲಕ್ಷ ರೂ. ನಗದು ಬಹುಮಾನ

ಈ ಪ್ರಶಸ್ತಿಯು ಒಂದು ಸ್ವರ್ಣ ಕಮಲ ಪದಕ, ಒಂದು ಶಾಲು ಮತ್ತು 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ. ಪ್ರತಿವರ್ಷ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ನೀಡುತ್ತಾರೆ. 1969ರಲ್ಲಿ ನಡೆದ 17ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಖ್ಯಾತ ನಟಿ ದೇವಿಕಾ ರಾಣಿ ಅವರು ಈ ಪ್ರಶಸ್ತಿಯನ್ನು ಮೊಟ್ಟ ಮೊದಲ ಬಾರಿಗೆ ಸ್ವೀಕರಿಸಿದ್ದರು. 2024ರ ಹೊತ್ತಿಗೆ ಒಟ್ಟು 54  ಮಂದಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಲ್ಲಿ, ನಟರಾದ ಪೃಥ್ವಿರಾಜ್ ಕಪೂರ್ (1971) ಮತ್ತು ವಿನೋದ್ ಖನ್ನಾ (2017) ಮಾತ್ರ ಮರಣೋತ್ತರ ಪ್ರಶಸ್ತಿ ವಿಜೇತರು.  ಹಿಂದಿ ಭಾಷೆಗೆ ಈ ಪ್ರಶಸ್ತಿ ಅತಿ ಹೆಚ್ಚು ಸಿಕ್ಕಿವೆ.

ಇದನ್ನೂ ಓದಿ: ಐದು ದಶಕದ ಅವಿರತ ಕಲಾಸೇವೆ: ಅನಂತ್ ನಾಗ್ ಅವರ ಸಿನಿ ಪಯಣದ ಪಕ್ಷಿ ನೋಟ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಮಹತ್ವ

1969ರಲ್ಲಿ ಮೊದಲು ಪ್ರದಾನ ಮಾಡಲಾದ ಈ ಪ್ರಶಸ್ತಿಯನ್ನು ಭಾರತ ಸರ್ಕಾರವು ಭಾರತೀಯ ಚಿತ್ರರಂಗಕ್ಕೆ ದಾದಾಸಾಹೇಬ್ ಫಾಲ್ಕೆ ಅವರ ಕೊಡುಗೆಯನ್ನು ಸ್ಮರಿಸಲು ಪರಿಚಯಿಸಿತು.”ಭಾರತೀಯ ಚಿತ್ರರಂಗದ ಪಿತಾಮಹ” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಫಾಲ್ಕೆ (1870–1944) ಭಾರತದ ಮೊದಲ ಫೀಚರ್​​ ಫಿಲ್ಮ್​​ ರಾಜಾ ಹರಿಶ್ಚಂದ್ರ (1912)ದ ನಿರ್ದೇಶಕ ಮತ್ತು ಭಾರತೀಯ ಚಲನಚಿತ್ರ ನಿರ್ಮಾಪಕರಾಗಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ