Sitara Ghattamaneni: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

Mahesh Babu Daughter: ಸ್ಟಾರ್​ ನಟನ ಪುತ್ರಿ ಎಂಬ ಕಾರಣಕ್ಕೆ ಸಿತಾರಾ ಘಟ್ಟಮನೇನಿ ಅವರಿಗೆ ಭರ್ಜರಿ ಅವಕಾಶಗಳು ದೊರೆಯುತ್ತಿವೆ. ಮಗಳಿಗೆ ಮಹೇಶ್​ ಬಾಬು ಅವರು ತುಂಬ ಪ್ರೋತ್ಸಾಹ ನೀಡುತ್ತಿದ್ದಾರೆ.

Sitara Ghattamaneni: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ
ಸಿತಾರಾ ಘಟ್ಟಮನೇನಿ
Follow us
|

Updated on:Jul 16, 2023 | 8:33 AM

ಟಾಲಿವುಡ್​ನ ಸ್ಟಾರ್​ ನಟ ಮಹೇಶ್​ ಬಾಬು (Mahesh Babu) ಅವರು ಈಗ ‘ಗುಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಅವರಿಗಿಂತಲೂ ಅವರ ಮಗಳೇ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಹೌದು, ಮಹೇಶ್​ ಬಾಬು ಪುತ್ರಿ (Mahesh Babu Daughter) ಸಿತಾರಾ ಘಟ್ಟಮನೇನಿ ಅವರು ಜಾಹೀರಾತುಗಳಲ್ಲಿ ನಟಿಸುವ ಮೂಲಕ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲದೇ, ತಾವು ಪಡೆದ ಸಂಬಳವನ್ನು ಚಾರಿಟಿಗೆ ನೀಡಿದ್ದು ಕೂಡ ದೊಡ್ಡ ಸುದ್ದಿ ಆಯಿತು. ಹಾಗಾದರೆ ಅವರು ಸಿನಿಮಾದಲ್ಲಿ ನಟಿಸುವುದು ಯಾವಾಗ? ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಪ್ರಶ್ನೆ ಎದುರಾಗಿದೆ. ಅದಕ್ಕೆ ಸಿತಾರಾ ಘಟ್ಟಮನೇನಿ (Sitara Ghattamaneni) ಪರವಾಗಿ ಅವರ ತಾಯಿ ನಮ್ರತಾ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಪ್ರತಿಷ್ಠಿತ ಆಭರಣ ಕಂಪನಿಗೆ ಸಿತಾರಾ ಘಟ್ಟಮನೇನಿ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅವರ ಫೋಟೋಗಳು ವಿದೇಶದಲ್ಲಿ ರಾರಾಜಿಸುತ್ತಿವೆ. ಸ್ಟಾರ್​ ನಟನ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ಭರ್ಜರಿ ಅವಕಾಶಗಳು ದೊರೆಯುತ್ತಿವೆ. ಮಗಳಿಗೆ ಮಹೇಶ್​ ಬಾಬು ಅವರು ತುಂಬ ಪ್ರೋತ್ಸಾಹ ನೀಡುತ್ತಿದ್ದಾರೆ. ಸಿತಾರಾ ಘಟ್ಟಮನೇನಿ ಅವರು ಆದಷ್ಟು ಬೇಗ ಸಿನಿಮಾಗಳಲ್ಲಿ ನಟಿಸಲಿ ಎಂಬುದು ಅಭಿಮಾನಿಗಳ ಆಸೆ. ಸಿನಿಮಾದಲ್ಲಿ ಅಭಿನಯಿಸಬೇಕು ಎಂಬ ಉತ್ಸಾಹ ಸಿತಾರಾಗೂ ಇದೆ.

ಇದನ್ನೂ ಓದಿ: ಟ್ರೆಡಿಷನಲ್ ಲುಕ್​ನಲ್ಲಿ ಮಿಂಚುತ್ತಿರುವ ಮಹೇಶ್​ ಬಾಬು ಮಗಳು ಸಿತಾರಾ

ಯಾವಾಗ ಚಿತ್ರರಂಗಕ್ಕೆ ಕಾಲಿಡಬೇಕು ಎಂಬುದು ಸಿತಾರಾಳ ಆಯ್ಕೆಗೆ ಬಿಟ್ಟಿದ್ದು ಎಂದು ಈಗಾಗಲೇ ಮಹೇಶ್​ ಬಾಬು ಮತ್ತು ನಮ್ರತಾ ಅವರು ಹೇಳಿದ್ದರು. ‘ಸಿತಾರಾಳ ಸಿನಿಮಾ ಎಂಟ್ರಿ ಬಗ್ಗೆ ಮಾತನಾಡಲು ಇನ್ನೂ ಸೂಕ್ತ ಕಾಲ ಬಂದಿಲ್ಲ. ಆಕೆ ಯಾವ ರೀತಿಯ ಸಿನಿಮಾಗಳಲ್ಲಿ ನಟಿಸಲು ಬಯಸುತ್ತಾಳೆ ಎಂದು ಈಗಲೇ ಹೇಳಲಾಗದು’ ಎಂದಿದ್ದಾರೆ ನಮ್ರತಾ. ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿರುವ ಸಿತಾರಾ ಅವರು ಹಲವು ಸೆಲೆಬ್ರಿಟಿಗಳ ಸಂದರ್ಶನ ಮಾಡಿಯೂ ಫೇಮಸ್​ ಆಗಿದ್ದಾರೆ. ಅಪ್ಪನ ಸಿನಿಮಾದ ಪ್ರಮೋಷನಲ್​ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಈ ಎಲ್ಲ ಕಾರಣಗಳಿಂದ ಸಿತಾರಾ ಖ್ಯಾತಿ ಹೆಚ್ಚಿದೆ.

ಇದನ್ನೂ ಓದಿ: ಅಗಲಿದ ತಾತನ ನೆನೆದು ಭಾವುಕ ಪತ್ರ ಬರೆದ ಮಹೇಶ್​ ಬಾಬು ಪುತ್ರಿ ಸಿತಾರ

ಇನ್ನು, ಮಹೇಶ್​ ಬಾಬು-ನಮ್ರತಾ ದಂಪತಿಯ ಪುತ್ರ ಗೌತಮ್​ ಕೂಡ ಸಿನಿಮಾಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಅವರಿಗೆ ಈಗ 16 ವರ್ಷ ವಯಸ್ಸು. ಇನ್ನು 7 ವರ್ಷಗಳು ಕಳೆದ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎಂದು ನಮ್ರತಾ ತಿಳಿಸಿದ್ದಾರೆ. ಮಹೇಶ್​ ಬಾಬು ಅವರ ‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಪಾತ್ರವರ್ಗದಲ್ಲಿ ಒಂದಷ್ಟು ಬದಲಾವಣೆ ಆಗಿರುವುದರಿಂದ ಆ ಚಿತ್ರದ ಬಗ್ಗೆ ಪದೇ ಪದೇ ಸುದ್ದಿ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:32 am, Sun, 16 July 23

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!