AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Where is Pushpa? ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಕೇಳಿಬಂದಿದೆ ಈ ಪ್ರಶ್ನೆ; ಉತ್ತರಕ್ಕಾಗಿ ಫ್ಯಾನ್ಸ್​ ಹುಡುಕಾಟ

Pushpa 2 Movie: ‘ಪುಷ್ಪ 2’ ಕಥೆಯ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗುತ್ತಿದೆ. ಪುಷ್ಪರಾಜ್​ ಜೈಲಿಗೆ ಹೋಗುವಂತಾಗಿದ್ದು ಹೇಗೆ? ಅಲ್ಲಿಂದ ತಪ್ಪಿಸಿಕೊಳ್ಳಲು ಆತ ಮಾಡಿದ ಸಾಹಸ ಎಂಥದ್ದು? ಇತ್ಯಾದಿ ವಿವರಗಳನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

Where is Pushpa? ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಕೇಳಿಬಂದಿದೆ ಈ ಪ್ರಶ್ನೆ; ಉತ್ತರಕ್ಕಾಗಿ ಫ್ಯಾನ್ಸ್​ ಹುಡುಕಾಟ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: May 12, 2023 | 11:42 AM

Share

ಎಸ್​ಎಸ್​ ರಾಜಮೌಳಿ ಅವರು ನಿರ್ದೇಶನ ಮಾಡಿದ ‘ಬಾಹುಬಲಿ’ ಸಿನಿಮಾ ಬಿಡುಗಡೆ ಆದ ಬಳಿಕ ಒಂದು ಟ್ರೆಂಡ್​ ಸೃಷ್ಟಿ ಆಗಿತ್ತು. ‘ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ?’ ಎಂಬ ಪ್ರಶ್ನೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಅದೇ ರೀತಿಯ ಟ್ರೆಂಡ್​ ಈಗ ಮತ್ತೆ ಮರುಕಳಿಸಿದೆ. ‘ಪುಷ್ಪ 2’ (Pushpa 2) ಸಿನಿಮಾದ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆದಾಗಿನಿಂದ ‘Where is Pushpa?’ ಎಂಬ ಪ್ರಶ್ನೆ ಉದ್ಭವ ಆಗಿದೆ. ನಿರ್ದೇಶಕ ಸುಕುಮಾರ್ (Director Sukumar)​ ಅವರು ಅಭಿಮಾನಿಗಳಲ್ಲಿ ಭಾರಿ ಕೌತುಕ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲು ಅರ್ಜುನ್ (Allu Arjun)​ ಅಭಿಮಾನಿಗಳು ಈ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಮತ್ತೆ ಈ ಪ್ರಶ್ನೆ ಕೇಳಿಬರುತ್ತಿದೆ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗಲೇ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಿದೆ.

‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್​ ಬಸ್ಟರ್​ ಆಯಿತು. ಈಗ ‘ಪುಷ್ಪ 2’ ಚಿತ್ರ ಕೂಡ ಅದ್ದೂರಿಯಾಗಿ ತಯಾರಾಗುತ್ತಿದೆ. ಬಹುಭಾಷೆಯಲ್ಲಿ ಫಸ್ಟ್​ ಗ್ಲಿಂಪ್ಸ್​ ಅನಾವರಣ ಮಾಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಜಾಸ್ತಿ ಆಗಿದೆ. ‘ಪುಷ್ಪ 2’ ಸಿನಿಮಾದಿಂದ ದೊಡ್ಡ ಗೆಲುವು ಪಡೆಯಲೇಬೇಕು ಎಂಬ ಗುರಿಯೊಂದಿಗೆ ನಿರ್ದೇಶಕ ಸುಕುಮಾರ್ ಅವರು ಹಲವು ತಂತ್ರಗಳನ್ನು ಬಳಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

ಇದನ್ನೂ ಓದಿ: Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

ಅಲ್ಲು ಅರ್ಜುನ್​ ಅವರ ಜನ್ಮದಿನದ ಪ್ರಯುಕ್ತ ಬಿಡುಗಡೆ ಆದ ಫಸ್ಟ್​ ಗ್ಲಿಂಪ್ಸ್​ನಲ್ಲಿ ‘ಪುಷ್ಪ 2’ ಕಥೆಯ ಬಗ್ಗೆ ಒಂದಷ್ಟು ಸುಳಿವುಗಳನ್ನು ಬಿಟ್ಟುಕೊಡಲಾಗಿತ್ತು. ‘ಗುಂಡಿನಿಂದ ಗಾಯಗೊಂಡಿರುವ ಪುಷ್ಪರಾಜ್​ ತಿರುಪತಿ ಜೈಲಿನಿಂದ ಎಸ್ಕೇಪ್​ ಆಗಿದ್ದಾನೆ. ಈಗ ಎಲ್ಲಿದ್ದಾನೆ ಪುಷ್ಪ?’ ಎಂಬ ಹಿನ್ನೆಲೆ ಧ್ವನಿ ಈ ವಿಡಿಯೋದಲ್ಲಿ ಹೈಲೈಟ್​ ಆಗಿತ್ತು. ಪುಷ್ಪರಾಜ್​ ಜೈಲಿಗೆ ಹೋಗುವಂತಾಗಿದ್ದು ಹೇಗೆ? ಅಲ್ಲಿಂದ ತಪ್ಪಿಸಿಕೊಳ್ಳಲು ಆತ ಮಾಡಿದ ಸಾಹಸ ಎಂಥದ್ದು? ಇತ್ಯಾದಿ ವಿವರಗಳನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಕಥೆಯ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗುತ್ತಿದೆ.

ಅಲ್ಲು ಅರ್ಜುನ್​ ಜೊತೆ ಫಹಾದ್​ ಫಾಸಿಲ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆಯು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ದಕ್ಷಿಣ ಭಾರತದ ಮಂದಿ ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ಈ ಸಿನಿಮಾಗಾಗಿ ಕಾದಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ