AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Where is Pushpa? ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಕೇಳಿಬಂದಿದೆ ಈ ಪ್ರಶ್ನೆ; ಉತ್ತರಕ್ಕಾಗಿ ಫ್ಯಾನ್ಸ್​ ಹುಡುಕಾಟ

Pushpa 2 Movie: ‘ಪುಷ್ಪ 2’ ಕಥೆಯ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗುತ್ತಿದೆ. ಪುಷ್ಪರಾಜ್​ ಜೈಲಿಗೆ ಹೋಗುವಂತಾಗಿದ್ದು ಹೇಗೆ? ಅಲ್ಲಿಂದ ತಪ್ಪಿಸಿಕೊಳ್ಳಲು ಆತ ಮಾಡಿದ ಸಾಹಸ ಎಂಥದ್ದು? ಇತ್ಯಾದಿ ವಿವರಗಳನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

Where is Pushpa? ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಕೇಳಿಬಂದಿದೆ ಈ ಪ್ರಶ್ನೆ; ಉತ್ತರಕ್ಕಾಗಿ ಫ್ಯಾನ್ಸ್​ ಹುಡುಕಾಟ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: May 12, 2023 | 11:42 AM

Share

ಎಸ್​ಎಸ್​ ರಾಜಮೌಳಿ ಅವರು ನಿರ್ದೇಶನ ಮಾಡಿದ ‘ಬಾಹುಬಲಿ’ ಸಿನಿಮಾ ಬಿಡುಗಡೆ ಆದ ಬಳಿಕ ಒಂದು ಟ್ರೆಂಡ್​ ಸೃಷ್ಟಿ ಆಗಿತ್ತು. ‘ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ?’ ಎಂಬ ಪ್ರಶ್ನೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಅದೇ ರೀತಿಯ ಟ್ರೆಂಡ್​ ಈಗ ಮತ್ತೆ ಮರುಕಳಿಸಿದೆ. ‘ಪುಷ್ಪ 2’ (Pushpa 2) ಸಿನಿಮಾದ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆದಾಗಿನಿಂದ ‘Where is Pushpa?’ ಎಂಬ ಪ್ರಶ್ನೆ ಉದ್ಭವ ಆಗಿದೆ. ನಿರ್ದೇಶಕ ಸುಕುಮಾರ್ (Director Sukumar)​ ಅವರು ಅಭಿಮಾನಿಗಳಲ್ಲಿ ಭಾರಿ ಕೌತುಕ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲು ಅರ್ಜುನ್ (Allu Arjun)​ ಅಭಿಮಾನಿಗಳು ಈ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಮತ್ತೆ ಈ ಪ್ರಶ್ನೆ ಕೇಳಿಬರುತ್ತಿದೆ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗಲೇ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಿದೆ.

‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್​ ಬಸ್ಟರ್​ ಆಯಿತು. ಈಗ ‘ಪುಷ್ಪ 2’ ಚಿತ್ರ ಕೂಡ ಅದ್ದೂರಿಯಾಗಿ ತಯಾರಾಗುತ್ತಿದೆ. ಬಹುಭಾಷೆಯಲ್ಲಿ ಫಸ್ಟ್​ ಗ್ಲಿಂಪ್ಸ್​ ಅನಾವರಣ ಮಾಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಜಾಸ್ತಿ ಆಗಿದೆ. ‘ಪುಷ್ಪ 2’ ಸಿನಿಮಾದಿಂದ ದೊಡ್ಡ ಗೆಲುವು ಪಡೆಯಲೇಬೇಕು ಎಂಬ ಗುರಿಯೊಂದಿಗೆ ನಿರ್ದೇಶಕ ಸುಕುಮಾರ್ ಅವರು ಹಲವು ತಂತ್ರಗಳನ್ನು ಬಳಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

ಇದನ್ನೂ ಓದಿ: Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

ಅಲ್ಲು ಅರ್ಜುನ್​ ಅವರ ಜನ್ಮದಿನದ ಪ್ರಯುಕ್ತ ಬಿಡುಗಡೆ ಆದ ಫಸ್ಟ್​ ಗ್ಲಿಂಪ್ಸ್​ನಲ್ಲಿ ‘ಪುಷ್ಪ 2’ ಕಥೆಯ ಬಗ್ಗೆ ಒಂದಷ್ಟು ಸುಳಿವುಗಳನ್ನು ಬಿಟ್ಟುಕೊಡಲಾಗಿತ್ತು. ‘ಗುಂಡಿನಿಂದ ಗಾಯಗೊಂಡಿರುವ ಪುಷ್ಪರಾಜ್​ ತಿರುಪತಿ ಜೈಲಿನಿಂದ ಎಸ್ಕೇಪ್​ ಆಗಿದ್ದಾನೆ. ಈಗ ಎಲ್ಲಿದ್ದಾನೆ ಪುಷ್ಪ?’ ಎಂಬ ಹಿನ್ನೆಲೆ ಧ್ವನಿ ಈ ವಿಡಿಯೋದಲ್ಲಿ ಹೈಲೈಟ್​ ಆಗಿತ್ತು. ಪುಷ್ಪರಾಜ್​ ಜೈಲಿಗೆ ಹೋಗುವಂತಾಗಿದ್ದು ಹೇಗೆ? ಅಲ್ಲಿಂದ ತಪ್ಪಿಸಿಕೊಳ್ಳಲು ಆತ ಮಾಡಿದ ಸಾಹಸ ಎಂಥದ್ದು? ಇತ್ಯಾದಿ ವಿವರಗಳನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಕಥೆಯ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗುತ್ತಿದೆ.

ಅಲ್ಲು ಅರ್ಜುನ್​ ಜೊತೆ ಫಹಾದ್​ ಫಾಸಿಲ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆಯು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ದಕ್ಷಿಣ ಭಾರತದ ಮಂದಿ ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ಈ ಸಿನಿಮಾಗಾಗಿ ಕಾದಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ