ರಹಸ್ಯವಾಗಿ ಮೊಬೈಲ್​ ಬಳಸ್ತಿದ್ದಾರಾ ಬಿಗ್​ ಬಾಸ್​ ಸ್ಪರ್ಧಿಗಳು? ಜನರ ಅನುಮಾನಕ್ಕೆ ಇಲ್ಲಿದೆ ಉತ್ತರ!

ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡುವ ಸ್ಪರ್ಧಿಗಳು ಕೆಲವೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೊರಜಗತ್ತಿನ ಜೊತೆ ಯಾವುದೇ ಸಂಪರ್ಕ ಇಟ್ಟುಕೊಳ್ಳುವಂತಿಲ್ಲ. ಆದರೆ ಸ್ಪರ್ಧಿಗಳ ಮೊಬೈಲ್​ ಬಳಕೆ ಬಗ್ಗೆ ಜನರಿಗೆ ಅನುಮಾನ ಇದೆ!

ರಹಸ್ಯವಾಗಿ ಮೊಬೈಲ್​ ಬಳಸ್ತಿದ್ದಾರಾ ಬಿಗ್​ ಬಾಸ್​ ಸ್ಪರ್ಧಿಗಳು? ಜನರ ಅನುಮಾನಕ್ಕೆ ಇಲ್ಲಿದೆ ಉತ್ತರ!
ಕನ್ನಡ ಬಿಗ್​ ಬಾಸ್​ ಸೀಸನ್​ 8
Edited By: ಆಯೇಷಾ ಬಾನು

Updated on: Mar 16, 2021 | 6:53 AM

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಆರಂಭವಾಗಿ ಎರಡು ವಾರ ಕಳೆದಿದೆ. ಅಷ್ಟರಲ್ಲಾಗಲೇ ಜನರಿಗೆ ಒಂದು ಅನುಮಾನ ಮೂಡಿದೆ. ಈ ಬಾರಿಯ ಸ್ಪರ್ಧಿಗಳು ಸರಿಯಾಗಿ ಬಿಗ್​ ಬಾಸ್​ ನಿಯಮ ಪಾಲಿಸುತ್ತಾ ಇದಾರಾ? ಈ ಪ್ರಶ್ನೆ ಉದ್ಭವ ಆಗಲು ಕಾರಣ ಆಗಿರುವುದು ಸ್ಪರ್ಧಿಗಳ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳು! ಮನೆಯೊಳಗೆ ಇರುವ ಸ್ಪರ್ಧಿಗಳ ಫೇಸ್​ಬುಕ್​, ಇನ್​ಸ್ಟಾಗ್ರಾಮ್​ ಮುಂತಾದ ಖಾತೆಗಳಲ್ಲಿ ಪ್ರತಿದಿನ ಹೊಸ ಹೊಸ ಪೋಸ್ಟ್​ಗಳು ಕಾಣಿಸುತ್ತಿವೆ. ಇದು ಹೇಗೆ ಸಾಧ್ಯ?

ಎರಡನೇ ವಾರದ ಎಲಿಮಿನೇಷನ್​ನಲ್ಲಿ ನಟಿ ಗೀತಾ ಭಾರತಿ ಭಟ್​ ಅವರು ಸೇಫ್​ ಆದರು. ಹಾಗಾಗಿ ಅವರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಒಂದು ವಿಡಿಯೋ ಪೋಸ್ಟ್​ ಮಾಡಲಾಗಿದೆ. ‘ಇವತ್ತು ನಿಮ್ಮೆಲ್ಲರ ಪ್ರೀತಿ, ಆಶೀರ್ವಾದದಿಂದ ನಾನು ಸೇವ್​ ಆಗಿದ್ದೇನೆ. ನನಗೆ ವೋಟ್​ ಮಾಡಿದ ಎಲ್ಲ ಕನ್ನಡಿಗರಿಗೆ ಥ್ಯಾಂಕ್ಸ್​. ಹೀಗೆ ನನ್ನ ಮೇಲೆ ಪ್ರೀತಿ ತೋರಿಸುತ್ತಿರಿ. ವೋಟ್​ ಮಾಡಿ ಗೆಲ್ಲಿಸುತ್ತಿರಿ’ ಎಂದು ಆ ವಿಡಿಯೋ ಮೂಲಕ ಗೀತಾ ಧನ್ಯವಾದ ತಿಳಿಸಿದ್ದಾರೆ. ಹಾಗಾದರೆ ಅವರು ಬಿಗ್​ ಬಾಸ್​ ಮನೆಯೊಳಗೆ ಮೊಬೈಲ್​ ಬಳಸ್ತಾ ಇದ್ದಾರಾ ಎಂದು ಜನರು ಕಾಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ.

ಗೀತಾ ಮಾತ್ರವಲ್ಲದೆ, ಬಹುತೇಕ ಎಲ್ಲ ಸ್ಪರ್ಧಿಗಳ ಸೋಶಿಯಲ್​ ಮೀಡಿಯಾ ಖಾತೆಗಳು ಈಗಲೂ ಸಕ್ರಿಯವಾಗಿವೆ. ಆ ಕಾರಣದಿಂದಲೇ ಜನರಿಗೆ ಇಂಥ ಅನುಮಾನ ಮೂಡಿದೆ. ಇದರ ಹಿಂದಿನ ಸತ್ಯ ಏನು ಎಂದು ಎಲ್ಲರೂ ಪ್ರಶ್ನಿಸುತ್ತಿದ್ದಾರೆ. ಅಸಲಿ ವಿಷಯ ಏನೆಂದರೆ, ಬಿಗ್​ ಬಾಸ್​ ಸ್ಪರ್ಧಿಗಳು ಯಾರೂ ಮೊಬೈಲ್​ ಬಳಸುತ್ತಿಲ್ಲ. ಬದಲಿಗೆ ಅವರ ಮನೆಯವರು, ಆಪ್ತ ಸ್ನೇಹಿತರು ಅಥವಾ ಮ್ಯಾನೇಜರ್​ಗಳಿಗೆ ಈ ಕೆಲಸವನ್ನು ವಹಿಸಲಾಗಿದೆ. ಸಂದರ್ಭಕ್ಕೆ ಅನುಗುಣವಾಗಿ ಅವರು ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

ತಮಗೆ ವೋಟ್​ ಮಾಡುವವರಿಗೆ ಧನ್ಯವಾದ ತಿಳಿಸುವಂತಹ ವಿಡಿಯೋಗಳನ್ನು ಬಿಗ್​ ಬಾಸ್​ ಮನೆ ಪ್ರವೇಶಿಸುವುದಕ್ಕೂ ಮುನ್ನವೇ ರೆಕಾರ್ಡ್​ ಮಾಡಿಡಲಾಗಿದೆ. ಆಯಾ ವಾರದ ಬೆಳವಣಿಗೆಗಳಿಗೆ ತಕ್ಕಂತೆ ಅಂಥ ವಿಡಿಯೋಗಳನ್ನು ಸ್ಪರ್ಧಿಗಳ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿಸಲಾಗುತ್ತಿದೆ. ಅದನ್ನು ಕಂಡ ಜನರು ಅಚ್ಚರಿ ಪಟ್ಟಿದ್ದಾರೆ. ಸ್ವತಃ ಸ್ಪರ್ಧಿಗಳೇ ದೊಡ್ಮನೆಯೊಳಗೆ ರಹಸ್ಯವಾಗಿ ಮೊಬೈಲ್​ ಬಳಸುತ್ತಿದ್ದಾರಾ ಎಂಬ ಅನುಮಾನ ಕೆಲವರಲ್ಲಿ ಮೂಡಿತು. ಆದರೆ ಅಂಥದ್ದಕ್ಕೆಲ್ಲ ಬಿಗ್​ ಬಾಸ್​ನಲ್ಲಿ ಅವಕಾಶ ಇಲ್ಲ ಎಂಬುದು ಸ್ಪಷ್ಟ.

ಇದನ್ನೂ ಓದಿ: ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

Published On - 6:52 am, Tue, 16 March 21

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us