AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Bigg Boss Kannada 8 Elimination: ರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ
ಗೀತಾ ಭಾರತಿ ಭಟ್​
ರಾಜೇಶ್ ದುಗ್ಗುಮನೆ
|

Updated on: Mar 21, 2021 | 10:06 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆಯಲ್ಲಿ ಕಿರುತೆರೆ ನಟಿ ಗೀತಾ ಭಾರತಿ ಭಟ್​ ಅವರು ಎಲಿಮಿನೇಟ್​ ಆಗಿದ್ದಾರೆ. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಫೇಮಸ್​ ಆಗಿದ್ದ ಗೀತಾ ಅವರು ಬಿಗ್​ ಬಾಸ್​ ಇಂದ ಹೊರಬರುತ್ತಿರುವ ಮೂರನೇ ಅಭ್ಯರ್ಥಿ ಆಗಿದ್ದಾರೆ. ಈ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಒಬ್ಬರು ಬಿಗ್​ ಬಾಸ್​ ಮನೆಯಿಂದ ಭಾನುವಾರ ಹೊರ ಹೋಗುವುದು ಖಚಿತ ಆಗಿತ್ತು. ಅರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

ಇನ್ನುಳಿದ ಸ್ಪರ್ಧಿಗಳಾದ ಶಮಂತ್​, ಗೀತಾ, ರಘು ಗೌಡ, ವಿಶ್ವನಾಥ್, ದಿವ್ಯಾ ಉರುಡುಗ ಪೈಕಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಈಗ ಉಳಿದವರು ಸೇಫ್​ ಆಗಿ ಗೀತಾ ಹೊರಹೋಗಿದ್ದಾರೆ. ಸೀರಿಯಲ್ ವೀಕ್ಷಕರಿಗೆ ಗೀತೆ ಭಾರತಿ ಭಟ್​ ಹೆಸರು ಚಿರಪರಿಚಿತ. ಈಗ ಬಿಗ್​ ಬಾಸ್​ ಮೂಲಕವೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಂತಾಗಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಚಿಕ್ಕ ಚಿಕ್ಕ ವಿಚಾರಗಳಿಗೂ ಗೀತಾ ಎಮೋಷನಲ್ ಆಗುತ್ತಾರೆ. ಕ್ಷಣಾರ್ಧದಲ್ಲೇ ಕಣ್ಣೀರು ಸುರಿಸುತ್ತಾರೆ. ಒಂದು ರೀತಿಯಲ್ಲಿ ಭಾವನಾತ್ಮಕವಾಗಿ ಎಲ್ಲರನ್ನೂ ಮೋಸಗೊಳಿಸಲು ಅವರು ಪ್ರಯತ್ನಿಸುತ್ತಾರೆ ಎನ್ನಲಾಗುತ್ತಿತ್ತು. ಮನೆಯೊಳಗಿನ ಯಾರಿಗೂ ಅವರ ಈ ಬುದ್ಧಿ ಹಿಡಿಸಲಿಲ್ಲ. ಅಲ್ಲದೆ, ಟಾಸ್ಕ್​ ವಿಚಾರದಲ್ಲಿಯೂ ಅವರು ಹಿಂದೆ ಬೀಳುತ್ತಿದ್ದರು. ಜನರನ್ನು ಎಂಟರ್​ಟೇನ್​ ಮಾಡುವುದರಲ್ಲಿ ಗೀತಾ ಹಿನ್ನಡೆ ಸಾಧಿಸಿದರು. ಹೀಗಾಗಿ, ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: ದಿವ್ಯಾ ಉರುಡುಗ ಮತ್ತು ಅರವಿಂದ್ ಪ್ರೀತಿ-ಪ್ರಣಯದ ವಿಚಾರಕ್ಕೆ ಸುದೀಪ್​ ಕೊಟ್ರು ಮಸ್ತ್​ ಪಂಚ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ