AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ
ಆಶು ರೆಡ್ಡಿ-ಆರ್​ಜಿವಿ
ರಾಜೇಶ್ ದುಗ್ಗುಮನೆ
|

Updated on: Jun 24, 2023 | 7:53 AM

Share

ನಟಿ ಆಶು ರೆಡ್ಡಿ (Ashu Reddy) ಈಗ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ಗ್ಲಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್​ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌದರಿ ಅವರು ಡ್ರಗ್ ಕೇಸ್​ನಲ್ಲಿ (Drug Case) ಅರೆಸ್ಟ್​ ಆಗಿದ್ದಾರೆ. ಆಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ಆಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಬಿಗ್ ಬಾಸ್ ತೆಲುಗು’ ಒಂದನೇ ಸೀಸನ್​ಗೆ ಅವರು ಕಾಲಿಟ್ಟಿದ್ದರು. ಈ ಮೂಲಕ ಜನಪ್ರಿಯತೆ ಪಡೆದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು ಬೋಲ್ಡ್ ಹಾಗೂ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಆಶು ವಿವಿಧ ರೀತಿಯ ಫೋಟೋ ಪೋಸ್ಟ್ ಮಾಡುತ್ತಾರೆ. ಈಗ ಅವರ ಹೆಸರು ಡ್ರಗ್ ಕೇಸ್​ನಲ್ಲಿ ಕೇಳಿ ಬಂದಿದೆ.

ಕೆಪಿ ಚೌದರಿ ಅವರು ನೇರವಾಗಿ ಆಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಡ್ರಗ್ ವಿಚಾರದಲ್ಲಿ ನನಗೆ ಅವರಿಗೆ ಸಂಬಂಧ ಇದೆ ಎಂದು ಹೇಳಿಕೊಂಡಿಲ್ಲ. ಇವರ ಮಧ್ಯೆ ಲಿಂಕ್ ಇರುವ ವಿಚಾರ ಗೊತ್ತಾಗಿದ್ದು ಕೆಪಿ ಚೌದರಿ ವಿಚಾರಣೆ ವೇಳೆ. ಅವರ ಬಳಿ ಇದ್ದ ಮೂರು ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚೌದರಿ ಅವರ ಒಂದು ಮೊಬೈಲ್​ನಿಂದ ಆಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ