AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ
ಆಶು ರೆಡ್ಡಿ-ಆರ್​ಜಿವಿ
ರಾಜೇಶ್ ದುಗ್ಗುಮನೆ
|

Updated on: Jun 24, 2023 | 7:53 AM

Share

ನಟಿ ಆಶು ರೆಡ್ಡಿ (Ashu Reddy) ಈಗ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ಗ್ಲಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್​ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌದರಿ ಅವರು ಡ್ರಗ್ ಕೇಸ್​ನಲ್ಲಿ (Drug Case) ಅರೆಸ್ಟ್​ ಆಗಿದ್ದಾರೆ. ಆಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ಆಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಬಿಗ್ ಬಾಸ್ ತೆಲುಗು’ ಒಂದನೇ ಸೀಸನ್​ಗೆ ಅವರು ಕಾಲಿಟ್ಟಿದ್ದರು. ಈ ಮೂಲಕ ಜನಪ್ರಿಯತೆ ಪಡೆದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು ಬೋಲ್ಡ್ ಹಾಗೂ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಆಶು ವಿವಿಧ ರೀತಿಯ ಫೋಟೋ ಪೋಸ್ಟ್ ಮಾಡುತ್ತಾರೆ. ಈಗ ಅವರ ಹೆಸರು ಡ್ರಗ್ ಕೇಸ್​ನಲ್ಲಿ ಕೇಳಿ ಬಂದಿದೆ.

ಕೆಪಿ ಚೌದರಿ ಅವರು ನೇರವಾಗಿ ಆಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಡ್ರಗ್ ವಿಚಾರದಲ್ಲಿ ನನಗೆ ಅವರಿಗೆ ಸಂಬಂಧ ಇದೆ ಎಂದು ಹೇಳಿಕೊಂಡಿಲ್ಲ. ಇವರ ಮಧ್ಯೆ ಲಿಂಕ್ ಇರುವ ವಿಚಾರ ಗೊತ್ತಾಗಿದ್ದು ಕೆಪಿ ಚೌದರಿ ವಿಚಾರಣೆ ವೇಳೆ. ಅವರ ಬಳಿ ಇದ್ದ ಮೂರು ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚೌದರಿ ಅವರ ಒಂದು ಮೊಬೈಲ್​ನಿಂದ ಆಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ