AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗು ಬಿಗ್ ಬಾಸ್’ ಗೆದ್ದ ಪಲ್ಲವಿ ಪ್ರಶಾಂತ್ ಯಾರು? ಇಲ್ಲಿದೆ ರೈತನ ಮಗನ ಕಥೆ

Pallavi Prashanth: ಪಲ್ಲವಿ ಪ್ರಶಾಂತ್ ಬಿಗ್ ಬಾಸ್ ನೀಡಿದ ಗೇಮ್ಸ್ ಮತ್ತು ಟಾಸ್ಕ್ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹಲವು ಸ್ಪರ್ಧಿಗಳು ಅವರನ್ನು ಕೀಳಾಗಿ ಕಾಣುತ್ತಿದ್ದರೂ, ಕಟುವಾದ ಮಾತುಗಳಿಂದ ಮನ ನೋಯಿಸಿದರೂ ಗುರಿಯತ್ತ ಅವರು ಗಮನ ಹರಿಸಿದರು.

‘ತೆಲುಗು ಬಿಗ್ ಬಾಸ್’ ಗೆದ್ದ ಪಲ್ಲವಿ ಪ್ರಶಾಂತ್ ಯಾರು? ಇಲ್ಲಿದೆ ರೈತನ ಮಗನ ಕಥೆ
ಬಿಗ್ ಬಾಸ್ ವಿನ್ನರ್
ರಾಜೇಶ್ ದುಗ್ಗುಮನೆ
|

Updated on: Dec 18, 2023 | 11:25 AM

Share

ಪಲ್ಲವಿ ಪ್ರಶಾಂತ್ (Pallavi Prashanth) ಅವರು ‘ತೆಲುಗು ಬಿಗ್ ಬಾಸ್‌ ಸೀಸನ್ 7’ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಕಾಮನ್ ಮ್ಯಾನ್ ಆಗಿ ಮನೆ ಪ್ರವೇಶಿಸಿದ ರೈತನ ಮಗ ಈಗ ಟೈಟಲ್ ವಿನ್ನರ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ಸಾಮಾನ್ಯ ವಿಭಾಗದಲ್ಲಿ ಆಗಮಿಸಿ ಗೆದ್ದ ಮೊದಲ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸರಿಯಾಗಿ ಮೂರು ತಿಂಗಳ ಹಿಂದೆ ಪಲ್ಲವಿ ಪ್ರಶಾಂತ್ ಯಾರು ಎಂಬುದು ಎಷ್ಟೋ ಜನರಿಗೆ ಗೊತ್ತಿರಲಿಲ್ಲ. ಈಗ ಅವರು ತೆಲುಗು ರಾಜ್ಯದಲ್ಲಿ ಫೇಮಸ್ ಆಗಿದ್ದಾರೆ.

‘ಬಿಗ್ ಬಾಸ್ ಏಳನೇ ಸೀಸನ್’ ಆರಂಭದಲ್ಲಿ ಅಕ್ಕಿ ಮೂಟೆ ಹೊತ್ತು ಪಲ್ಲವಿ ಪ್ರಶಾಂತ್ ಮನೆ ಪ್ರವೇಶಿಸಿದರು. ‘ಇಂತಹ ಅನೇಕರನ್ನು ನೋಡಿದ್ದೇವೆ. ಎಷ್ಟು ದಿನ ಇರುತ್ತಾರೋ ನೋಡೋಣ’ ಎಂದು ಅನೇಕರು ಮಾತನಾಡಿದ್ದರು. ಆದರೆ ಅವರ ಎಲ್ಲಾ ಊಹೆಗಳು ಮತ್ತು ಅಭಿಪ್ರಾಯಗಳು ತಪ್ಪು ಎಂದು ಸಾಬೀತುಪಡಿಸಲು ಅವರು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ. ಪಲ್ಲವಿ ಪ್ರಶಾಂತ್ ಮನೆಯಲ್ಲಿ ತಮ್ಮ ಆಟದ ಶೈಲಿ ಮತ್ತು ಮಾತಿನ ಶೈಲಿಯಿಂದ ಎಲ್ಲರ ಮನ ಗೆದ್ದರು.

ಪಲ್ಲವಿ ಪ್ರಶಾಂತ್ ಬಿಗ್ ಬಾಸ್ ನೀಡಿದ ಗೇಮ್ಸ್ ಮತ್ತು ಟಾಸ್ಕ್ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹಲವು ಸ್ಪರ್ಧಿಗಳು ಅವರನ್ನು ಕೀಳಾಗಿ ಕಾಣುತ್ತಿದ್ದರೂ, ಕಟುವಾದ ಮಾತುಗಳಿಂದ ಮನ ನೋಯಿಸಿದರೂ ಗುರಿಯತ್ತ ಅವರು ಗಮನ ಹರಿಸಿದರು. ಈಗ ಅವರು ಬಯಸಿದ್ದನ್ನು ಸಾಧಿಸಿದ್ದಾರೆ. ಬಿಗ್ ಬಾಸ್ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಪಲ್ಲವಿ ಪ್ರಶಾಂತ್ ಮನೆಯೊಳಗೆ ಮಾತ್ರವಲ್ಲದೆ ಹೊರಗೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಪಲ್ಲವಿ ಪ್ರಶಾಂತ್ ಈಗಾಗಲೇ ಮದುವೆಯಾಗಿದ್ದಾರೆ ಮತ್ತು ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ ಎಂದು ಕೆಲವರು ನೆಗೆಟಿವ್ ಪ್ರಚಾರ ಮಾಡಿದರು. ಆದರೆ, ಇದು ಅವರ ಯಶಸ್ಸಿನ ಮೇಲೆ ಪರಿಣಾಮ ಬೀರಲಿಲ್ಲ. ಅವರಿಗೆ ರೈತರ ಬೆಂಬಲ ಸಿಕ್ಕಿತ್ತು. ಕಿರುತೆರೆ ನಟ ಅಮರದೀಪ್ ರನ್ನರ್​ ಅಪ್ ಆಗಿದ್ದಾರೆ. ಶಿವಾಜಿ ಎರಡನೇ ರನ್ನರ್​ ಅಪ್ ಆದರು.

ಇದನ್ನೂ ಓದಿ: ತೆಲುಗು ಬಿಗ್​ಬಾಸ್ ಫೈನಲಿಸ್ಟ್​ಗಳಿವರು: ರೈತನ ಮಗ ಚಾಂಪಿಯನ್

ವಿಜೇತರಾದ ನಂತರ ಪಲ್ಲವಿ ಪ್ರಶಾಂತ್ ಅವರು ತಮಗೆ ಸಿಕ್ಕ ಬಹುಮಾನದ ಹಣವನ್ನು ರೈತರಿಗಾಗಿ ವಿನಿಯೋಗಿಸುವುದಾಗಿ ಹೇಳಿದ್ದಾರೆ. ತಂದೆಗೆ ಕಾರನ್ನು ಮತ್ತು ತಾಯಿಗೆ ಹಾರವನ್ನು ಉಡುಗೊರೆಯಾಗಿ ನೀಡುವುದಾಗಿ ಬಿಗ್ ಬಾಸ್ ವೇದಿಕೆಯಲ್ಲಿ ಘೋಷಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಶುಭಾಶಯ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು