‘ತೆಲುಗು ಬಿಗ್ ಬಾಸ್’ ಗೆದ್ದ ಪಲ್ಲವಿ ಪ್ರಶಾಂತ್ ಯಾರು? ಇಲ್ಲಿದೆ ರೈತನ ಮಗನ ಕಥೆ

Pallavi Prashanth: ಪಲ್ಲವಿ ಪ್ರಶಾಂತ್ ಬಿಗ್ ಬಾಸ್ ನೀಡಿದ ಗೇಮ್ಸ್ ಮತ್ತು ಟಾಸ್ಕ್ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹಲವು ಸ್ಪರ್ಧಿಗಳು ಅವರನ್ನು ಕೀಳಾಗಿ ಕಾಣುತ್ತಿದ್ದರೂ, ಕಟುವಾದ ಮಾತುಗಳಿಂದ ಮನ ನೋಯಿಸಿದರೂ ಗುರಿಯತ್ತ ಅವರು ಗಮನ ಹರಿಸಿದರು.

‘ತೆಲುಗು ಬಿಗ್ ಬಾಸ್’ ಗೆದ್ದ ಪಲ್ಲವಿ ಪ್ರಶಾಂತ್ ಯಾರು? ಇಲ್ಲಿದೆ ರೈತನ ಮಗನ ಕಥೆ
ಬಿಗ್ ಬಾಸ್ ವಿನ್ನರ್
Follow us
|

Updated on: Dec 18, 2023 | 11:25 AM

ಪಲ್ಲವಿ ಪ್ರಶಾಂತ್ (Pallavi Prashanth) ಅವರು ‘ತೆಲುಗು ಬಿಗ್ ಬಾಸ್‌ ಸೀಸನ್ 7’ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಕಾಮನ್ ಮ್ಯಾನ್ ಆಗಿ ಮನೆ ಪ್ರವೇಶಿಸಿದ ರೈತನ ಮಗ ಈಗ ಟೈಟಲ್ ವಿನ್ನರ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ಸಾಮಾನ್ಯ ವಿಭಾಗದಲ್ಲಿ ಆಗಮಿಸಿ ಗೆದ್ದ ಮೊದಲ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸರಿಯಾಗಿ ಮೂರು ತಿಂಗಳ ಹಿಂದೆ ಪಲ್ಲವಿ ಪ್ರಶಾಂತ್ ಯಾರು ಎಂಬುದು ಎಷ್ಟೋ ಜನರಿಗೆ ಗೊತ್ತಿರಲಿಲ್ಲ. ಈಗ ಅವರು ತೆಲುಗು ರಾಜ್ಯದಲ್ಲಿ ಫೇಮಸ್ ಆಗಿದ್ದಾರೆ.

‘ಬಿಗ್ ಬಾಸ್ ಏಳನೇ ಸೀಸನ್’ ಆರಂಭದಲ್ಲಿ ಅಕ್ಕಿ ಮೂಟೆ ಹೊತ್ತು ಪಲ್ಲವಿ ಪ್ರಶಾಂತ್ ಮನೆ ಪ್ರವೇಶಿಸಿದರು. ‘ಇಂತಹ ಅನೇಕರನ್ನು ನೋಡಿದ್ದೇವೆ. ಎಷ್ಟು ದಿನ ಇರುತ್ತಾರೋ ನೋಡೋಣ’ ಎಂದು ಅನೇಕರು ಮಾತನಾಡಿದ್ದರು. ಆದರೆ ಅವರ ಎಲ್ಲಾ ಊಹೆಗಳು ಮತ್ತು ಅಭಿಪ್ರಾಯಗಳು ತಪ್ಪು ಎಂದು ಸಾಬೀತುಪಡಿಸಲು ಅವರು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ. ಪಲ್ಲವಿ ಪ್ರಶಾಂತ್ ಮನೆಯಲ್ಲಿ ತಮ್ಮ ಆಟದ ಶೈಲಿ ಮತ್ತು ಮಾತಿನ ಶೈಲಿಯಿಂದ ಎಲ್ಲರ ಮನ ಗೆದ್ದರು.

ಪಲ್ಲವಿ ಪ್ರಶಾಂತ್ ಬಿಗ್ ಬಾಸ್ ನೀಡಿದ ಗೇಮ್ಸ್ ಮತ್ತು ಟಾಸ್ಕ್ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹಲವು ಸ್ಪರ್ಧಿಗಳು ಅವರನ್ನು ಕೀಳಾಗಿ ಕಾಣುತ್ತಿದ್ದರೂ, ಕಟುವಾದ ಮಾತುಗಳಿಂದ ಮನ ನೋಯಿಸಿದರೂ ಗುರಿಯತ್ತ ಅವರು ಗಮನ ಹರಿಸಿದರು. ಈಗ ಅವರು ಬಯಸಿದ್ದನ್ನು ಸಾಧಿಸಿದ್ದಾರೆ. ಬಿಗ್ ಬಾಸ್ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಪಲ್ಲವಿ ಪ್ರಶಾಂತ್ ಮನೆಯೊಳಗೆ ಮಾತ್ರವಲ್ಲದೆ ಹೊರಗೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಪಲ್ಲವಿ ಪ್ರಶಾಂತ್ ಈಗಾಗಲೇ ಮದುವೆಯಾಗಿದ್ದಾರೆ ಮತ್ತು ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ ಎಂದು ಕೆಲವರು ನೆಗೆಟಿವ್ ಪ್ರಚಾರ ಮಾಡಿದರು. ಆದರೆ, ಇದು ಅವರ ಯಶಸ್ಸಿನ ಮೇಲೆ ಪರಿಣಾಮ ಬೀರಲಿಲ್ಲ. ಅವರಿಗೆ ರೈತರ ಬೆಂಬಲ ಸಿಕ್ಕಿತ್ತು. ಕಿರುತೆರೆ ನಟ ಅಮರದೀಪ್ ರನ್ನರ್​ ಅಪ್ ಆಗಿದ್ದಾರೆ. ಶಿವಾಜಿ ಎರಡನೇ ರನ್ನರ್​ ಅಪ್ ಆದರು.

ಇದನ್ನೂ ಓದಿ: ತೆಲುಗು ಬಿಗ್​ಬಾಸ್ ಫೈನಲಿಸ್ಟ್​ಗಳಿವರು: ರೈತನ ಮಗ ಚಾಂಪಿಯನ್

ವಿಜೇತರಾದ ನಂತರ ಪಲ್ಲವಿ ಪ್ರಶಾಂತ್ ಅವರು ತಮಗೆ ಸಿಕ್ಕ ಬಹುಮಾನದ ಹಣವನ್ನು ರೈತರಿಗಾಗಿ ವಿನಿಯೋಗಿಸುವುದಾಗಿ ಹೇಳಿದ್ದಾರೆ. ತಂದೆಗೆ ಕಾರನ್ನು ಮತ್ತು ತಾಯಿಗೆ ಹಾರವನ್ನು ಉಡುಗೊರೆಯಾಗಿ ನೀಡುವುದಾಗಿ ಬಿಗ್ ಬಾಸ್ ವೇದಿಕೆಯಲ್ಲಿ ಘೋಷಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಶುಭಾಶಯ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ