AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಧೆ ಶ್ಯಾಮ್​’ ಚಿತ್ರದ ವಿಲನ್​ ಯಾರು? ಹೊರಬಿತ್ತು ಅಸಲಿ ಕಹಾನಿ

ಈಗಾಗಲೇ ‘ರಾಧೆ ಶ್ಯಾಮ್​’ ಸಿನಿಮಾ ಟ್ರೇಲರ್​ ಮೂಲಕ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ತೆರೆಗೆ ಬರೋಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ರಿಲೀಸ್ ಆದ ಟ್ರೇಲರ್​ನಲ್ಲಿ ವಿಲನ್ ಪಾತ್ರದ ಬಗ್ಗೆ ಯಾವುದೇ ಹಿಂಟ್​ ನೀಡಿಲ್ಲ.

‘ರಾಧೆ ಶ್ಯಾಮ್​’ ಚಿತ್ರದ ವಿಲನ್​ ಯಾರು? ಹೊರಬಿತ್ತು ಅಸಲಿ ಕಹಾನಿ
ಪ್ರಭಾಸ್​-ಪೂಜಾ ಹೆಗ್ಡೆ
TV9 Web
| Edited By: |

Updated on: Mar 03, 2022 | 9:38 PM

Share

ಸ್ಟಾರ್​ ನಟರ ಸಿನಿಮಾ ಎಂದರೆ ಅಲ್ಲಿ ವಿಲನ್​ ಪಾತ್ರಕ್ಕೂ ಪ್ರಾಮುಖ್ಯತೆ ಇರುತ್ತದೆ. ಓರ್ವ ಸ್ಟ್ರಾಂಗ್​ ವಿಲನ್ ಇದ್ದರೆ ಚಿತ್ರದ ತೂಕ ಹೆಚ್ಚುತ್ತದೆ. ಕಮರ್ಷಿಯಲ್​ ಚಿತ್ರಗಳಲ್ಲಿ ಕೇವಲ ಹೀರೋನ ಹೈಲೈಟ್​ ಮಾಡೋಕೆ ಹೋದರೆ ಸಿನಿಮಾ ಸಪ್ಪೆ ಎನಿಸಬಹುದು. ಪ್ರಭಾಸ್ (Prabhas)​ ಸಿನಿಮಾಗಳಲ್ಲಿ ವಿಲನ್​ ಆಯ್ಕೆ ಮಾಡಿಕೊಳ್ಳುವಾಗ ನಿರ್ದೇಶಕರು ಸಾಕಷ್ಟು ಆಲೋಚಿಸುತ್ತಾರೆ. ಈ ಮೊದಲು ತೆರೆಕಂಡ ಅವರ ನಟನೆಯ ‘ಬಾಹುಬಲಿ’ ಸಿನಿಮಾದಲ್ಲಿ (Bahubali Movie) ರಾನಾ ವೈರಿ ಪಾತ್ರ ಮಾಡಿದ್ದರು. ಈ ಪಾತ್ರಕ್ಕೆ ಸಾಕಷ್ಟು ತೂಕ ಇತ್ತು. ಈಗ ಅವರ ಮುಂದಿನ ಸಿನಿಮಾ ‘ರಾಧೆ ಶ್ಯಾಮ್​’ ಚಿತ್ರದಲ್ಲಿ (Radhe Shyam Movie) ವಿಲನ್ ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಈಗಾಗಲೇ ‘ರಾಧೆ ಶ್ಯಾಮ್​’ ಸಿನಿಮಾ ಟ್ರೇಲರ್​ ಮೂಲಕ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ತೆರೆಗೆ ಬರೋಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ರಿಲೀಸ್ ಆದ ಟ್ರೇಲರ್​ನಲ್ಲಿ ವಿಲನ್ ಪಾತ್ರದ ಬಗ್ಗೆ ಯಾವುದೇ ಹಿಂಟ್​ ನೀಡಿಲ್ಲ. ಸಿನಿಮಾದ ಕಥೆ ನೋಡಿದರೆ, ಈ ಚಿತ್ರದಲ್ಲಿ ವಿಲನ್​ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ವೈರತ್ವ ಇಲ್ಲದೆ, ‘ರಾಧೆ ಶ್ಯಾಮ್​’ ಸಾಗಲಿದೆ ಎನ್ನಲಾಗುತ್ತಿದೆ.

2011ರಲ್ಲಿ ತೆರೆಗೆ ಬಂದ ‘ಮಿಸ್ಟರ್​ ಪರ್ಫೆಕ್ಟ್​’ ಸಿನಿಮಾದಲ್ಲಿ ಪ್ರಭಾಸ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಯಾವುದೇ ವಿಲನ್​ ಇರಲಿಲ್ಲ. ಈಗ ಈ ಸಿನಿಮಾ ತೆರೆಕಂಡು 11 ವರ್ಷಗಳ ಬಳಿಕ ವಿಲನ್ ಇಲ್ಲದ ಸಿನಿಮಾದಲ್ಲಿ ಪ್ರಭಾಸ್​ ಆ್ಯಕ್ಟ್​ ಮಾಡಿದ್ದಾರೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಪ್ರೀತಿ ಮತ್ತು ಹಣೆಬರಹದ ವಿಚಾರ ಹೈಲೈಟ್​ ಆಗಲಿದೆ. ಟ್ರೇಲರ್​ನಲ್ಲೂ ಈ ವಿಚಾರವನ್ನು ತೋರಿಸಲಾಗಿತ್ತು.

ಮದುವೆ ಬಗ್ಗೆ ಮಾತನಾಡಿದ ಪ್ರಭಾಸ್:

ಎಲ್ಲರೂ ಒಂದು ಹಂತಕ್ಕೆ ಸೆಟಲ್​ ಆದ ನಂತರ ಮದುವೆ ಆಗೋಕೆ ಇಷ್ಟಪಡುತ್ತಾರೆ. ಆದರೆ, ಪ್ರಭಾಸ್​ ವಿಚಾರದಲ್ಲಿ ಹಾಗಿಲ್ಲ. ಅವರ ಬಳಿ ಎಲ್ಲವೂ ಇದೆ. ಆದರೆ, ಮದುವೆ ಮಾತ್ರ ಆಗುವ ಗೋಜಿಗೆ ಹೋಗಿಲ್ಲ. ಈ ವಿಚಾರದಲ್ಲಿ ಅವರ ಅಭಿಮಾನಿಗಳಲ್ಲಿ ಕುತೂಹಲ ಇದೆ. ಈಗ ಏಕೆ ಮದುವೆ ಆಗಿಲ್ಲ ಎನ್ನುವ ಪ್ರಶ್ನೆಗೆ ಪ್ರಭಾಸ್ ಉತ್ತರ ನೀಡಿದ್ದಾರೆ. ‘ರಾಧೆ ಶ್ಯಾಮ್​’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ನಡೆದಿದೆ. ಈ ವೇಳೆ ಪ್ರಭಾಸ್​ ಕೂಡ ಇದ್ದರು. ಮಾಧ್ಯಮಗಳ ಜತೆ ಮಾತನಾಡುವಾಗ, ಸಿನಿಮಾ ವಿಚಾರದ ಜತೆಗೆ ಮದುವೆ ಬಗ್ಗೆಯೂ ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿಯೇ ಉತ್ತರಿಸಿದ್ದಾರೆ. ‘ರಾಧೆ ಶ್ಯಾಮ್​’ ಸಿನಿಮಾದಲ್ಲಿ ಕೈ ನೋಡಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಇದೇ ಮಾದರಿಯಲ್ಲೇ ಅವರು ಈಗ ಉತ್ತರಿಸಿದ್ದಾರೆ. ‘ಪ್ರೀತಿ ವಿಚಾರದಲ್ಲಿ ನನ್ನ ಪ್ರಿಡಿಕ್ಷನ್​ಗಳು ಯಾವಾಗಲೂ ವಿಫಲವಾಗಿದೆ. ಹೀಗಾಗಿ ಈವರೆಗೆ ಮದುವೆ ಆಗಿಲ್ಲ’ ಎಂದಿದ್ದಾರೆ ಪ್ರಭಾಸ್.

ಈ ಮೊದಲು ಅನುಷ್ಕಾ ಶೆಟ್ಟಿ ಜತೆ ಪ್ರಭಾಸ್ ಹೆಸರು ತಳುಕು ಹಾಕಿಕೊಂಡಿತ್ತು. ಅನುಷ್ಕಾ ಕೂಡ ಈವರೆಗೆ ಮದುವೆ ಆಗಿಲ್ಲ. ‘ಬಾಹುಬಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆದರೆ, ಕೆಲ ಸಮಯದ ನಂತರ ಈ ವಿಚಾರದ ಬಗ್ಗೆ ಯಾವುದೇ ಅಪ್​ಡೇಟ್​ ಬರಲಿಲ್ಲ.

ಇದನ್ನೂ ಓದಿ:  ರಾಜಮೌಳಿ ಜತೆ ಪ್ರಭಾಸ್​ ಮತ್ತೊಂದು ಸಿನಿಮಾ; ಗುಡ್​ ನ್ಯೂಸ್​ ತಿಳಿಸಿದ ‘ರಾಧೆ ಶ್ಯಾಮ್​’ ಹೀರೋ

ರಾಜಮೌಳಿ ಜತೆ ಪ್ರಭಾಸ್​ ಮತ್ತೊಂದು ಸಿನಿಮಾ; ಗುಡ್​ ನ್ಯೂಸ್​ ತಿಳಿಸಿದ ‘ರಾಧೆ ಶ್ಯಾಮ್​’ ಹೀರೋ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!