AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌನ್ ಬನೇಗಾ ಕರೋಡ್ಪತಿ’ಗೆ ಅಷ್ಟೊಂದು ಹಣ ಎಲ್ಲಿಂದ ಬರುತ್ತೆ? ಶೋ ಒಡೆತನ ಯಾರ ಬಳಿ ಇದೆ?

KBC : ಕೌನ್ ಬನೇಗಾ ಕರೋಡ್‌ಪತಿ (KBC) ಭಾರತದ ಜನಪ್ರಿಯ ಕಾರ್ಯಕ್ರಮ. ಈ ಕಾರ್ಯಕ್ರಮದ ಮಾಲೀಕತ್ವ ಸೋನಿ ಪಿಕ್ಚರ್ಸ್ ಟೆಲಿವಿಷನ್ ಹೊಂದಿದ್ದು, ಇದು 'ಹೂ ವಾಂಟ್ಸ್ ಟು ಬಿ ಎ ಮಿಲಿಯನೇರ್'ನ ಫ್ರಾಂಚೈಸಿ. ಅಮಿತಾಭ್ ಬಚ್ಚನ್ ನಿರೂಪಣೆಯಲ್ಲಿ ಕಾರ್ಯಕ್ರಮವು ಜನರನ್ನು ಕೋಟ್ಯಾಧಿಪತಿಗಳನ್ನಾಗಿಸುತ್ತೆ.

‘ಕೌನ್ ಬನೇಗಾ ಕರೋಡ್ಪತಿ’ಗೆ ಅಷ್ಟೊಂದು ಹಣ ಎಲ್ಲಿಂದ ಬರುತ್ತೆ? ಶೋ ಒಡೆತನ ಯಾರ ಬಳಿ ಇದೆ?
Kbc
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 27, 2025 | 9:45 AM

Share

‘ಕೌನ್ ಬನೇಗಾ ಕರೋಡ್‌ಪತಿ’ ಟಿವಿ ಕಾರ್ಯಕ್ರಮ ಭಾರತದ ಅತಿ ಯಶಸ್ವಿ ಶೋಗಳಲ್ಲಿ ಒಂದು. ಈ ಕಾರ್ಯಕ್ರಮವನ್ನು ಜ್ಞಾನ ಮತ್ತು ಮನರಂಜನೆಯ ಸಂಗಮವೆಂದು ನೋಡಲಾಗುತ್ತದೆ. ಕೌನ್ ಬನೇಗಾ ಕರೋಡ್‌ಪತಿ ಶೋನ ಪ್ರತಿ ಸೀಸನ್‌ನಲ್ಲಿ ವಿಭಿನ್ನ ಜನರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರನ್ನು ಕೋಟ್ಯಾಧಿಪತಿಗಳನ್ನಾಗಿ ಮಾಡುವುದಲ್ಲದೆ ಅವರ ಜ್ಞಾನವನ್ನು ಹೆಚ್ಚಿಸುತ್ತದೆ. ಈ ಕಾರ್ಯಕ್ರಮವು ಅತ್ಯಂತ ಜನಪ್ರಿಯವಾಗಿದೆ. ಆದರೆ ಅನೇಕ ಜನರ ಮನಸ್ಸಿನಲ್ಲಿ ಈ ಕಾರ್ಯಕ್ರಮದ ಮಾಲೀಕರು ಯಾರು ಎಂಬ ಪ್ರಶ್ನೆ ಇದೆ? ಮತ್ತು ಈ ಕಾರ್ಯಕ್ರಮದ ವಿಜೇತರಿಗೆ ನಿಖರವಾಗಿ ಯಾರು ಹಣ ನೀಡುತ್ತಾರೆ? ಆ ಬಗ್ಗೆ ಇಲ್ಲಿದೆ ವಿವರ.

ಕೆಬಿಸಿಯ ಎಲ್ಲಾ ಹಕ್ಕುಗಳನ್ನು ಸೋನಿ ಪಿಕ್ಚರ್ಸ್ ಟೆಲಿವಿಷನ್ ಹೊಂದಿದೆ. ಈ ಕಾರ್ಯಕ್ರಮವು ಬ್ರಿಟಿಷ್ ಟಿವಿ ಕಾರ್ಯಕ್ರಮ ‘ಹೂ ವಾಂಟ್ಸ್ ಟು ಬಿ ಎ ಮಿಲಿಯನೇರ್’ ನ ಭಾರತೀಯ ಫ್ರಾಂಚೈಸಿ ಆಗಿದೆ. ಸೋನಿ ಪಿಕ್ಚರ್ಸ್ ಸಹ ಮೂಲ ಕಾರ್ಯಕ್ರಮದ ಪರವಾನಗಿ ಪಾಲುದಾರ. ಇದರ ಅಡಿಯಲ್ಲಿ, ‘ಕೌನ್ ಬನೇಗಾ ಕರೋಡ್‌ಪತಿ’ ಕಾರ್ಯಕ್ರಮವನ್ನು ಭಾರತದಲ್ಲಿ ನಿರ್ಮಿಸಲಾಗಿದೆ.

ಈ ಕಾರ್ಯಕ್ರಮವನ್ನು ಭಾರತದಲ್ಲಿ ಮೊದಲು 2000 ರಲ್ಲಿ ಪ್ರಸಾರ ಮಾಡಲಾಯಿತು. ಅಮಿತಾಭ್ ಬಚ್ಚನ್ ಈ ಕಾರ್ಯಕ್ರಮದ ನಿರೂಪಕರಾಗಿದ್ದಾರೆ. ಈ ಕಾರ್ಯಕ್ರಮವನ್ನು ಭಾರತದ ಪ್ರತಿಯೊಂದು ಮನೆಗೂ ತಲುಪಿಸಲು ಮತ್ತು ಜನಪ್ರಿಯತೆಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಅವರು ಕೆಲಸ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಅಮಿತಾಭ್ ಬಚ್ಚನ್ ಪ್ರತಿ ಸಂಚಿಕೆಗೆ ಭಾರಿ ಶುಲ್ಕ ಪಡೆಯುತ್ತಾರೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

ಇದನ್ನೂ ಓದಿ: ಕೆಬಿಸಿ16 ಗೆದ್ದು ಕೋಟ್ಯಧಿಪತಿಯಾದ ಚಂದರ್, ಕೊನೆ ಪ್ರಶ್ನೆ ಏನಾಗಿತ್ತು?

ಈ ಕಾರ್ಯಕ್ರಮದ ಪ್ರಮುಖ ಆದಾಯದ ಮೂಲ ಜಾಹೀರಾತು. ಈ ಕಾರ್ಯಕ್ರಮವು ಭಾರತೀಯ ದೂರದರ್ಶನ ಉದ್ಯಮದಲ್ಲಿ ಭಾರಿ ಟಿಆರ್‌ಪಿ ಹೊಂದಿದೆ. ಆದ್ದರಿಂದ ಅನೇಕ ದೊಡ್ಡ ಮತ್ತು ಪ್ರಸಿದ್ಧ ಬ್ರ್ಯಾಂಡ್‌ಗಳು ಈ ಕಾರ್ಯಕ್ರಮದಲ್ಲಿ ಜಾಹೀರಾತು ನೀಡುತ್ತವೆ. ಇದರಿಂದ ಆದಾಯ ಬರುತ್ತದೆ. ಗೆದ್ದ ವ್ಯಕ್ತಿಗೆ ಚಾನೆಲ್‌ನಿಂದ ಹಣ ಸಿಗುತ್ತದೆ. ಎಲ್ಲಾ ರೀತಿಯ ತೆರಿಗೆಗಳನ್ನು ಕಡಿತಗೊಳಿಸಿದ ನಂತರ, ಈ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಮೊದಲು ಅವಾರ್ಡ್ ಮೊತ್ತ 1 ಕೋಟಿ ರೂಪಾಯಿ ಇತ್ತು. ಈಗ ಅದನ್ನು ಏಳು ಕೋಟಿ ಊಪಾಯಿಗೆ ಏರಿಕೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!