AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ
ಅಲ್ಲು ಅರ್ಜುನ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 14, 2024 | 12:43 PM

Share

ಅಲ್ಲು ಅರ್ಜುನ್ (Allu Arjun) ಅವರು ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆ ಆಗಲಿದ್ದು ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದಾದ ಬಳಿಕ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಅಲ್ಲು ಅರ್ಜುನ್ ಅವರ ಬರ್ತ್​ಡೇ ದಿನ ಉತ್ತರ ಸಿಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ. ಅಟ್ಲಿ ಅವರ ಜೊತೆ ಅಲ್ಲು ಅರ್ಜುನ್ ಕೈ ಜೋಡಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಹಿಟ್ ಆದ ಬಳಿಕ ಅಟ್ಲಿ ಖ್ಯಾತಿ ಹೆಚ್ಚಿದೆ. ಅವರನ್ನು ಅಲ್ಲು ಅರ್ಜುನ್ ಮುಂಬೈನಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಟ್ಲಿ ಹೇಳಿದ ಕಥೆ ಅಲ್ಲು ಅರ್ಜುನ್​ಗೆ ಸಖತ್ ಇಷ್ಟವಾಗಿದೆ. ಅವರು ಅಟ್ಲಿ ಜೊತೆ ಸಿನಿಮಾ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ‘ಪುಷ್ಪ 2’ ಸಿನಿಮಾ ಬಳಿಕ ಅಲ್ಲು ಅರ್ಜುನ್ ಅವರು ಇದೇ ಸಿನಿಮಾನ ಕೈಗೆತ್ತಿಕೊಂಡರೂ ಅಚ್ಚರಿ ಏನಿಲ್ಲ.

ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರ ನಿರ್ದೇಶನದ ‘ಗುಂಟೂರು ಖಾರಂ’ ಸಖತ್ ಫ್ಲಾಪ್ ಎನಿಸಿಕೊಂಡಿದೆ. ಫ್ಯಾಮಿಲಿ ಡ್ರಾಮಾನ ವಿರೋಧಿಸಿದವರೇ ಹೆಚ್ಚು. ಈಗ ಅಲ್ಲು ಅರ್ಜುನ್ ಅವರು ತ್ರಿವಿಕ್ರಂ ಶ್ರೀನಿವಾಸ್ ಬಳಿ ಕಥೆ ಬದಲಿಸುವಂತೆ ಹೇಳಿದ್ದಾರೆ. ಇದಕ್ಕೆ ನಿರ್ದೇಶಕರು ಒಪ್ಪಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?

ಏಪ್ರಿಲ್ 8 ಅಲ್ಲು ಅರ್ಜುನ್ ಜನ್ಮದಿನ. ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಅಂದು ಪಕ್ಕಾ ಮಾಹಿತಿ ಸಿಗೋ ಸಾಧ್ಯತೆ ಇದೆ. ಅಂದು ‘ಪುಷ್ಪ 2’ ಚಿತ್ರದಿಂದ ಹೊಸ ಪೋಸ್ಟರ್ ಅಥವಾ ಟೀಸರ್​ನ ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ