AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ
ಅಲ್ಲು ಅರ್ಜುನ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 14, 2024 | 12:43 PM

Share

ಅಲ್ಲು ಅರ್ಜುನ್ (Allu Arjun) ಅವರು ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆ ಆಗಲಿದ್ದು ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದಾದ ಬಳಿಕ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಅಲ್ಲು ಅರ್ಜುನ್ ಅವರ ಬರ್ತ್​ಡೇ ದಿನ ಉತ್ತರ ಸಿಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ. ಅಟ್ಲಿ ಅವರ ಜೊತೆ ಅಲ್ಲು ಅರ್ಜುನ್ ಕೈ ಜೋಡಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಹಿಟ್ ಆದ ಬಳಿಕ ಅಟ್ಲಿ ಖ್ಯಾತಿ ಹೆಚ್ಚಿದೆ. ಅವರನ್ನು ಅಲ್ಲು ಅರ್ಜುನ್ ಮುಂಬೈನಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಟ್ಲಿ ಹೇಳಿದ ಕಥೆ ಅಲ್ಲು ಅರ್ಜುನ್​ಗೆ ಸಖತ್ ಇಷ್ಟವಾಗಿದೆ. ಅವರು ಅಟ್ಲಿ ಜೊತೆ ಸಿನಿಮಾ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ‘ಪುಷ್ಪ 2’ ಸಿನಿಮಾ ಬಳಿಕ ಅಲ್ಲು ಅರ್ಜುನ್ ಅವರು ಇದೇ ಸಿನಿಮಾನ ಕೈಗೆತ್ತಿಕೊಂಡರೂ ಅಚ್ಚರಿ ಏನಿಲ್ಲ.

ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರ ನಿರ್ದೇಶನದ ‘ಗುಂಟೂರು ಖಾರಂ’ ಸಖತ್ ಫ್ಲಾಪ್ ಎನಿಸಿಕೊಂಡಿದೆ. ಫ್ಯಾಮಿಲಿ ಡ್ರಾಮಾನ ವಿರೋಧಿಸಿದವರೇ ಹೆಚ್ಚು. ಈಗ ಅಲ್ಲು ಅರ್ಜುನ್ ಅವರು ತ್ರಿವಿಕ್ರಂ ಶ್ರೀನಿವಾಸ್ ಬಳಿ ಕಥೆ ಬದಲಿಸುವಂತೆ ಹೇಳಿದ್ದಾರೆ. ಇದಕ್ಕೆ ನಿರ್ದೇಶಕರು ಒಪ್ಪಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?

ಏಪ್ರಿಲ್ 8 ಅಲ್ಲು ಅರ್ಜುನ್ ಜನ್ಮದಿನ. ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಅಂದು ಪಕ್ಕಾ ಮಾಹಿತಿ ಸಿಗೋ ಸಾಧ್ಯತೆ ಇದೆ. ಅಂದು ‘ಪುಷ್ಪ 2’ ಚಿತ್ರದಿಂದ ಹೊಸ ಪೋಸ್ಟರ್ ಅಥವಾ ಟೀಸರ್​ನ ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್