AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ರಾಮ್ ಚರಣ್ ಹುಟ್ಟುಹಬ್ಬಕ್ಕೆ ಅಲ್ಲು ಅರ್ಜುನ್ ಗೈರಾಗಿದ್ದೇಕೆ?

ರಾಮ್ ಚರಣ್ ಹುಟ್ಟುಹಬ್ಬಕ್ಕೆ ನಟ ಅಲ್ಲು ಅರ್ಜುನ್ ಗೈರಾಗಿದ್ದರು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು, ಆದರೆ ರಾಮ್ ಚರಣ್ ಹುಟ್ಟುಹಬ್ಬಕ್ಕೆ ಅಲ್ಲು ಅರ್ಜುನ್ ಗೈರಾಗಿದ್ದಕ್ಕೆ ಕಾರಣವೇನೆಂದು ಅವರ ತಂಡ ತಿಳಿಸಿದೆ.

Allu Arjun: ರಾಮ್ ಚರಣ್ ಹುಟ್ಟುಹಬ್ಬಕ್ಕೆ ಅಲ್ಲು ಅರ್ಜುನ್ ಗೈರಾಗಿದ್ದೇಕೆ?
ಅಲ್ಲು ಅರ್ಜುನ್-ರಾಮ್ ಚರಣ್
Follow us
ಮಂಜುನಾಥ ಸಿ.
|

Updated on: Mar 31, 2023 | 9:51 PM

ಅಲ್ಲು ಕುಟುಂಬ ಹಾಗೂ ಮೆಗಾ ಕುಟುಂಬದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಕೆಲವು ತಿಂಗಳ ಹಿಂದೆ ವರದಿಗಳು ಹರಿದಾಡಿದ್ದವು. ಅಲ್ಲು ಅರ್ಜುನ್ (Allu Arjun) ಅವರ ತಂದೆ ಅಲ್ಲು ಅರವಿಂದ್ ಒಂದು ಸಂದರ್ಶನದಲ್ಲಿ ಇದನ್ನು ಒಪ್ಪಿಕೊಂಡಿದ್ದರಾದರೂ ಅದು ದೊಡ್ಡ ಮಟ್ಟದ ಭಿನ್ನಾಭಿಪ್ರಾಯವೇನಲ್ಲ ಎಂದು ಸಹ ಹೇಳಿದ್ದರು. ಆದರೆ ಕೆಲವು ದಿನಗಳ ಹಿಂದೆ ಅದ್ಧೂರಿಯಾಗಿ ನಡೆದಿದ್ದ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಪುತ್ರ, ನಟ ರಾಮ್ ಚರಣ್ (Ram Charan) ಹುಟ್ಟುಹಬ್ಬಕ್ಕೆ ಅಲ್ಲು ಅರ್ಜುನ್ ಗೈರಾಗುವ ಮೂಲಕ ಈ ಎರಡು ಕುಟುಂಬಗಳ ನಡುವಿನ ಮನಸ್ತಾಪದ ಸುದ್ದಿಗೆ ಪುಷ್ಠಿ ನೀಡಿದ್ದರು.

ಆದರೆ ಈಗ ಅಲ್ಲು ಅರ್ಜುನ್ ತಂಡದವರು, ಅಲ್ಲು ಅರ್ಜುನ್, ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಭಾಗವಹಿಸದೇ ಇರಲು ಕಾರಣವೇನೆಂದು ತಿಳಿಸಿದ್ದಾರೆ. ಅಲ್ಲು ಅರ್ಜುನ್ ಮೊದಲೇ ನಿಶ್ಚಯವಾಗಿದ್ದ ವಿದೇಶಿ ಪ್ರವಾಸಕ್ಕೆ ತೆರಳಲೇ ಬೇಕಾಗಿದ್ದರಿಂದ ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲಿಲ್ಲ ಎಂದಿದ್ದಾರೆ. ರಾಮ್ ಚರಣ್ ಹುಟ್ಟುಹಬ್ಬದ ದಿನ ಅಲ್ಲು ಅರ್ಜುನ್ ವಿಯೆಟ್ನಾಂನಲ್ಲಿದ್ದರಂತೆ. ಆ ಪ್ರವಾಸ ಮೊದಲೇ ನಿಗದಿಯಾಗಿದ್ದರಿಂದ ಹೋಗಲೇ ಬೇಕಿತ್ತಂತೆ. ಆದರೆ ರಾಮ್ ಚರಣ್​ಗೆ ಅಲ್ಲು ಅರ್ಜುನ್ ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ ಮಾತ್ರವಲ್ಲದೆ, ರಾಮ್ ಚರಣ್​ಗೆ ತಮ್ಮ ವಿದೇಶ ಪ್ರವಾಸದ ಮಾಹಿತಿಯನ್ನು ನೀಡಿ, ಬರಲಾರೆನೆಂದು ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ ಎಂದು ಅಲ್ಲು ಅರ್ಜುನ್ ತಂಡದವರು ತಿಳಿಸಿರುವುದಾಗಿ ಕೆಲ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಪವನ್ ಕಲ್ಯಾಣ್ ಹಾಗೂ ಚಿರಂಜೀವಿ ನಡುವೆ ಮನಸ್ತಾಪ ಉಂಟಾದಾಗ ಅಲ್ಲು ಅರ್ಜುನ್ ಚಿರಂಜೀವಿ ಪರ ನಿಂತಿದ್ದರು, ಕಾರ್ಯಕ್ರಮವೊಂದರಲ್ಲಿ ಪವನ್ ಕಲ್ಯಾಣ್ ಪರವಾಗಿ ಮಾತನಾಡಿರೆಂದು ಅಭಿಮಾನಿಯೊಬ್ಬ ಕೇಳಿದಾಗ, ಮಾತನಾಡುವುದಿಲ್ಲ ಎಂದು ಹೇಳಿದ್ದರು. ಆ ವಿಡಿಯೋ ಭಾರಿ ವೈರಲ್ ಆಗಿತ್ತು. ಆದರೆ ಈಗ ಪವನ್ ಕಲ್ಯಾಣ್ ಹಾಗೂ ಚಿರಂಜೀವಿ ನಡುವಿನ ಮನಸ್ತಾಪ ಬಗೆಹರಿದು ಎಲ್ಲರೂ ಒಟ್ಟಾಗಿದ್ದಾರೆ ಆದರೆ ಅಲ್ಲು ಅರ್ಜುನ್ ಮಾತ್ರ ತುಸು ದೂರವಾದಂತಿದ್ದಾರೆ. ಸಿನಿಮಾ ಒಂದರಲ್ಲಿ ಅತಿಥಿ ಪಾತ್ರ ಮಾಡುವ ವಿಷಯವೇ ಈ ಎರಡು ಕುಟುಂಬಗಳ ನಡುವೆ ಮನಸ್ತಾಪಕ್ಕೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿಶ್ ಮಾಡಲಿಲ್ಲ, ಬರ್ತ್​ಡೇ ಪಾರ್ಟಿಗೂ ಬರಲಿಲ್ಲ; ರಾಮ್​ ಚರಣ್ ಬಗ್ಗೆ ಮುನಿಸಿಕೊಂಡ್ರಾ ಅಲ್ಲು ಅರ್ಜುನ್?

ಇನ್ನು ಕೆಲವು ದಿನಗಳ ಹಿಂದಷ್ಟೆ ನಡೆದ ರಾಮ್ ಚರಣ್ ಹುಟ್ಟುಹಬ್ಬಕ್ಕೆ ತೆಲುಗು ಚಿತ್ರರಂಗದ ಹಲವು ಗಣ್ಯಾತಿಗಣ್ಯರು ಆಗಮಿಸಿದ್ದರು. ಅಲ್ಲು ಅರ್ಜುನ್ ಹಾಗೂ ರಾಮ್​ ಚರಣ್ ಅವರು ಆತ್ಮೀಯ ಗೆಳೆಯ ಜೂ ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಜೂ ಎನ್​ಟಿಆರ್, ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಭಾಗಿಯಾಗದ ಬಗ್ಗೆಯೂ ಸ್ಪಷ್ಟನೆ ನೀಡಲಾಗಿದ್ದು, ರಾಮ್ ಚರಣ್ ಹುಟ್ಟುಹಬ್ಬದ ಹಿಂದಿನ ದಿನವೇ ಜೂ ಎನ್​ಟಿಆರ್ ಪತ್ನಿಯ ಹುಟ್ಟುಹಬ್ಬವಿದ್ದು, ಈ ಬಾರಿ ವಿಶೇಷ ಪಾರ್ಟಿಯೊಂದನ್ನು ಕುಟುಂಬದವರಿಗಾಗಿ ಜೂ ಎನ್​ಟಿಆರ್ ಏರ್ಪಾಟು ಮಾಡಿದ್ದರಂತೆ ಅದೇ ಕಾರಣದಿಂದ ಜೂ ಎನ್​ಟಿಆರ್, ರಾಮ್ ಚರಣ್ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎನ್ನಲಾಗಿದೆ.

ಇನ್ನು ನಟ ರಾಮ್ ಚರಣ್, ಆರ್​ಆರ್​ಆರ್ ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದು, ಪ್ರಸ್ತುತ ತಮಿಳಿನ ಸ್ಟಾರ್ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ಹಾಲಿವುಡ್​ನಿಂದಲೂ ರಾಮ್​ ಚರಣ್​ಗೆ ದೊಡ್ಡ ಆಫರ್ ಒಂದು ಬಂದಿದ್ದು, ಸ್ವತಃ ರಾಮ್ ಚರಣ್ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸಿನಿಮಾದ ಘೋಷಣೆ ಕೆಲವೇ ದಿನಗಳಲ್ಲಿ ಆಗಲಿದೆ. ಇನ್ನು ಅಲ್ಲು ಅರ್ಜುನ್ ಪ್ರಸ್ತುತ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಅದರ ಬಳಿಕ ಸಂದೀಪ್ ವಂಗ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ