AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj B Shetty: ದರ್ಶನ್ ನೋಡಲು ಜೈಲಿಗೆ ಹೋಗುವುದಿಲ್ಲ: ರಾಜ್ ಬಿ ಶೆಟ್ಟಿ

ಕೊಲೆ ಆರೋಪಿ ದರ್ಶನ್ ಅನ್ನು ಕಾಣಲು ಹಲವು ಸೆಲೆಬ್ರಿಟಿಗಳು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಬರುತ್ತಿದ್ದಾರೆ. ಅದೊಂದು ಪ್ರಚಾರ ಕ್ರಿಯೆಯೂ ಆಗಿಬಿಟ್ಟಿದೆ. ಈ ನಡುವೆ ರಾಜ್ ಬಿ ಶೆಟ್ಟಿ ಅವರನ್ನು ದರ್ಶನ್ ಭೇಟಿಗೆ ಜೈಲಿಗೆ ಹೋಗ್ತೀರ ಎಂಬ ಪ್ರಶ್ನೆ ಎದುರಾಗಿದೆ. ಪ್ರಶ್ನೆಗೆ ದಿಟ್ಟ ಮತ್ತು ಪ್ರಾಮಾಣಿಕ ಉತ್ತರ ನೀಡಿದ್ದಾರೆ ಶೆಟ್ಟರು.

Raj B Shetty: ದರ್ಶನ್ ನೋಡಲು ಜೈಲಿಗೆ ಹೋಗುವುದಿಲ್ಲ: ರಾಜ್ ಬಿ ಶೆಟ್ಟಿ
ಮಂಜುನಾಥ ಸಿ.
|

Updated on: Jul 29, 2024 | 7:15 PM

Share

ದರ್ಶನ್ ತೂಗುದೀಪ ಅವರನ್ನು ಕಾಣಲು ಕೆಲವು ನಟರು, ಆತ್ಮೀಯರು, ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಹೋಗುತ್ತಿದ್ದಾರೆ. ಕೆಲವು ಸೆಲೆಬ್ರಿಟಿಗಳಂತೂ ಮಾಧ್ಯಮಗಳಿಗೆ ಮುಂಚಿತವಾಗಿ ಮಾಹಿತಿ ನೀಡಿಯೇ ಪರಪ್ಪನ ಅಗ್ರಹಾರ ಜೈಲಿನ ಬಳಿ ಹೋಗುತ್ತಿದ್ದಾರೆ. ಆ ನಟ ದರ್ಶನ್ ಅನ್ನು ನೋಡಲು ಹೋಗಿದ್ದಾನೆಂದು ಇನ್ನೊಬ್ಬ ನಟ ತಾನೂ ಮಾಧ್ಯಮಗಳಿಗೆ ಹೇಳಿ ದರ್ಶನ್ ಅನ್ನು ನೋಡಲು ಹೋಗುತ್ತಿದ್ದಾರೆ ದರ್ಶನ್ ಅನ್ನು ನೋಡಲು ಹೋಗುವುದು ಒಂದು ಪ್ರಚಾರದ ತಂತ್ರವಾಗಿಯೂ ಮಾರ್ಪಟ್ಟಿದೆ. ಕೆಲ ಮಾಧ್ಯಮಗಳು ಸಹ ನಟ-ನಟಿಯರಿಗೆ ನೀವು ದರ್ಶನ್ ಅನ್ನು ನೋಡಲು ಹೋಗುವುದಿಲ್ಲವಾ? ಎಂದು ಪ್ರಶ್ನಿಸಲು ಆರಂಭಿಸಿವೆ. ಇಂಥಹುದೇ ಪ್ರಶ್ನೆಯೊಂದನ್ನು ಉತ್ತರಿಸಿರುವ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ದಿಟ್ಟ ಉತ್ತರವನ್ನೇ ಕೊಟ್ಟಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ನೀವು ದರ್ಶನ್ ಅನ್ನು ನೋಡಲು ಹೋಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿರುವ ರಾಜ್ ಬಿ ಶೆಟ್ಟಿ, ‘ನಾನು ನನ್ನ ವೃತ್ತಿ ಜೀವನದಲ್ಲಿ ದರ್ಶನ್ ಅವರನ್ನು ವೇದಿಕೆಯೊಂದರಲ್ಲಿ ಕೇವಲ ಒಮ್ಮೆ ಮಾತ್ರ ಭೇಟಿ ಆಗಿದ್ದೇನೆ. ಅವರೊಂದಿಗೆ ಅಂಥಹಾ ಪರಿಚಯವೂ ಇಲ್ಲ. ಕೇವಲ ಒಮ್ಮೆ ಭೇಟಿ ಆಗಿರುವ ವ್ಯಕ್ತಿ ಈಗ ಜೈಲಿಗೆ ಹೋಗಿದ್ದಾರೆಂದರೆ ನಾನು ಏಕೆ ನೋಡಲು ಹೋಗಲಿ. ಕೇವಲ ಒಂದು ಬಾರಿ ಮಾತ್ರ ಭೇಟಿಯಾದ ವ್ಯಕ್ತಿ ಜೈಲಿಗೆ ಹೋದರೆ ನಾನು ಹೋಗಿ ಭೇಟಿ ಆಗಬೇಕ? ನಾನು ಯಾಕೆ ಹೋಗಬೇಕು ಎಂದು ನನಗೆ ಗೊತ್ತಿಲ್ಲ’ ಎಂದು ರಾಜ್ ಬಿ ಶೆಟ್ಟಿ ಮರುಪ್ರಶ್ನೆ ಹಾಕಿದ್ದಾರೆ.

ಇದನ್ನೂ ಓದಿ:ದರ್ಶನ್​ಗೆ ಊಟ, ಹಾಸಿಗೆ, ಅರ್ಜಿ ಹಿಂಪಡೆದ ವಕೀಲರು, ಕಾರಣ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆಯೂ ಮಾತನಾಡಿರುವ ನಟ ರಾಜ್ ಬಿ ಶೆಟ್ಟಿ, ‘ಆ ರೀತಿಯ ಘಟನೆ ಆಗಬಾರದಿತ್ತು ಆಗಿ ಹೋಗಿದೆ. ಅದರ ಬಗ್ಗೆ ಮಾತನಾಡಿ-ಮಾತನಾಡಿ ಹೆಚ್ಚು ಪ್ರಯೋಜನ ಇಲ್ಲ. ಒಂದು ಮುನ್ನೆಚ್ಚರಿಕೆ ಬೇಕು ಬಾಕಿ ನಟರಿಗೆ ಸಹ, ಯಾವುದೇ ರೀತಿ ಕಾನೂನನ್ನು ನಾವು ಕೈಗೆ ತೆಗೆದುಕೊಳ್ಳಲು ಆಗುವುದಿಲ್ಲ, ಹಾಗೆ ತೆಗೆದುಕೊಳ್ಳುವುದು ತಪ್ಪು ಎಂಬುದು ಎಲ್ಲರಿಗೂ ಅರಿವಾಗಬೇಕು. ತಪ್ಪು ಮಾಡಿದ ಯಾರೇ ಆದರೂ ಶಿಕ್ಷೆ ಅನುಭವಿಸಲೇ ಬೇಕು. ಪೊಲೀಸರು ಆ ಪ್ರಕರಣವನ್ನು ಹ್ಯಾಂಡಲ್ ಮಾಡಿರುವ ರೀತಿ ಸಹ ಬಹಳ ಚೆನ್ನಾಗಿದೆ. ಶಕ್ತಿಶಾಲಿ, ಪ್ರಭಾವಶಾಲಿ ವ್ಯಕ್ತಿಗಳಿಗೆ ಶಿಕ್ಷೆ ಆಗಲ್ಲ ಎಂಬ ಅಭಿಪ್ರಾಯ ಜನರಲ್ಲಿ ಇದೆ. ಈಗ ದರ್ಶನ್ ಆರೋಪಿ ಸ್ಥಾನದಲ್ಲಿದ್ದಾರೆ. ಅವರು ಅಪರಾಧಿ ಆಗುತ್ತಾರಾ ಇಲ್ಲವಾ ನೋಡೋಣ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?