AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತಿಕೆ ತೋರಿಸಲು ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರಾ ಕಂಗನಾ?

ಬೆಳ್ಳಿ ಲೋಟದಲ್ಲಿ ಕಂಗನಾ ರಣಾವತ್ ನೀರು ಕುಡಿಯುತ್ತಿರೋ ವಿಡಿಯೋ ಈ ಮೊದಲು ವೈರಲ್ ಆಗಿತ್ತು. ಇದನ್ನು ನೋಡಿದ ಜನರು ಕಂಗನಾ ರಣಾವತ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಡಿಯೋದಲ್ಲಿ ಕಂಗನಾ ರಣಾವತ್ ಸಿಲ್ವರ್ ಗ್ಲಾಸ್‌ನಿಂದ ನೀರು ಕುಡಿಯುತ್ತಿರುವುದನ್ನು ಕಾಣಬಹುದು.

ಶ್ರೀಮಂತಿಕೆ ತೋರಿಸಲು ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರಾ ಕಂಗನಾ?
ಕಂಗನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 21, 2024 | 11:09 AM

Share

ಬಾಲಿವುಡ್ ನಂತರ ನಟಿ ಕಂಗನಾ ರಣಾವತ್ ರಾಜಕೀಯದತ್ತ ಹೆಜ್ಜೆ ಹಾಕಿದ್ದಾರೆ. ಅವರು ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜಕೀಯದ ಜೊತೆಗೆ ಕಂಗನಾ ರಣಾವತ್ ಕೂಡ ತಮ್ಮ ಮುಂಬರುವ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಕಂಗನಾ ರನೌತ್ ಅಪಾರ ಸಂಪತ್ತನ್ನು ಹೊಂದಿದ್ದಾರೆ. ಕಂಗನಾ ರಣಾವತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕಂಗನಾ ರಣಾವತ್ ಸಂಸದೆಯಾದ ನಂತರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ಅವರು ಬೆಳ್ಳಿ ಲೋಟದಲ್ಲಿ ನಿರು ಕುಡಿದಿದ್ದಾರೆ.

ಬೆಳ್ಳಿ ಲೋಟದಲ್ಲಿ ಕಂಗನಾ ನೀರು ಕುಡಿಯುವುದನ್ನು ನೋಡಿದ ಜನರು ಕಂಗನಾ ರಣಾವತ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ಕಂಗನಾ ರಣಾವತ್ ಸಿಲ್ವರ್ ಗ್ಲಾಸ್‌ನಿಂದ ನೀರು ಕುಡಿಯುತ್ತಿರುವುದನ್ನು ಕಾಣಬಹುದು. ಕಂಗನಾ ರಣಾವತ್ ಅವರ ಈ ವರ್ತನೆಯನ್ನು ಜನ ಮೆಚ್ಚಲೇ ಇಲ್ಲ.

‘ಕಂಗನಾ ರಣಾವತ್ ಬಡವರ ಜೊತೆ ಇರೋದಾಗಿ ಹೇಳುತ್ತಾರೆ, ಆದರೆ ಆದರೆ, ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದರು. ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಕಂಗನಾ ರಣಾವತ್ ಈ ಮೊದಲು ಮಾತನಾಡಿದ್ದರು.. ಕಂಗನಾ ರಣಾವತ್ ಕೂಡ ಇಂತಹ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು.

‘ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದರಿಂದ ರೋಗಗಳು ದೂರವಾಗುತ್ತವೆ. ದೇಹ ಸೇರಿದ ವಿಷಕಾರಿ ವಸ್ತುಗಳಿಂದ ನಾವು ಸುರಕ್ಷಿತವಾಗಿರುತ್ತೇವೆ’ ಅದರಲ್ಲೂ ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದು ತುಂಬಾ ಮಂಗಳಕರ’ ಎಂದು ಕಂಗನಾ ರಣಾವತ್ ಹೇಳಿದ್ದರು. ಆ ಬಳಿಕ ಟೀಕಾಕಾರರು ಸುಮ್ಮನಾಗಿದ್ದರು.

ಇದನ್ನೂ ಓದಿ: ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಕಂಗನಾ ರಣಾವತ್ ಬಾಲಿವುಡ್‌ನಲ್ಲಿ ಬಹಳ ಕಾಲ ಇದ್ದರು. ಆದಾಗ್ಯೂ, ಕಂಗನಾ ರಣಾವತ್ ಯಾವಾಗಲೂ ಕೆಲವು ಬಾಲಿವುಡ್ ಜನರನ್ನು ಟೀಕಿಸುತ್ತಲೇ ಇರುತ್ತಾರೆ. ಕೆಲ ದಿನಗಳ ಹಿಂದೆ ನಟ ರಣಬೀರ್ ಕಪೂರ್ ಅವರನ್ನು ಕಂಗನಾ ರಣಾವತ್ ಟೀಕಿಸಿದ್ದರು. ಕಂಗನಾ ರಣಾವತ್ ಮಾತು ಕೇಳಿ ಜನ ಕೂಡ ಶಾಕ್ ಆಗಿದ್ದಾರೆ. ಈಗ ಅವರು ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್