AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ

Pooja Hegde: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಕನ್' ಇಂದು ಅದ್ಧೂರಿಯಾಗಿ ತೆರೆಕಂಡಿದೆ. ಈ ಚಿತ್ರದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಅವರಿಗೆ ಅತ್ಯಂತ ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ಅವರು ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಬಯಲಾಗಿದೆ. ವಿಜಯ್ ಮೇಲಿನ ಗೌರವ ಹಾಗೂ ಈ ಕೊನೆಯ ಚಿತ್ರವನ್ನು ನೆನಪಿನಲ್ಲಿ ಉಳಿಸುವ ಪೂಜಾ ಹೆಗ್ಡೆ ಅವರ ಆಪ್ತ ನಿರ್ಧಾರದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ
ಪೂಜಾ-ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 23, 2026 | 8:42 AM

Share

ಮುಖ್ಯಾಂಶಗಳು

  • ವಿಜಯ್ ಮೇಲಿನ ಅಪಾರ ಗೌರವಕ್ಕಾಗಿ ಒಪ್ಪಿದ ಬುಟ್ಟಬೊಮ್ಮ
  • ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ಕೀ ರೋಲ್
  • ಜನ ನಾಯಗನ್' ಚಿತ್ರದಲ್ಲಿ ಪೂಜಾ ಹೆಗ್ಡೆ ಅವರ ಪಾತ್ರದ ಪ್ರಾಮುಖ್ಯತೆ

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ.

ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ

‘ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಅವರಿಗೆ ಕೆಲವು ಪ್ರಮುಖ ದೃಶ್ಯಗಳಿವೆ. ಇದು ದಳಪತಿ ವಿಜಯ್ ಅವರ ಕೊನೆಯ ಸಿನಿಮಾವಾಗಿದೆ. ಇದರ ನಂತರ ಅವರು ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲೇ ಬ್ಯುಸಿ ಆಗಲಿದ್ದಾರೆ. ಹೀಗಾಗಿ ಈ ಸಿನಿಮಾವನ್ನು ನೆನಪಿನಲ್ಲಿ ಉಳಿಯುವಂತೆ ಮಾಡಲು ಪೂಜಾ ಹೆಗ್ಡೆ ತಕ್ಷಣ ಒಪ್ಪಿಕೊಂಡರು’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ‘ಬೀಸ್ಟ್’ ಸಿನಿಮಾದಲ್ಲಿ ವಿಜಯ್ ಮತ್ತು ಪೂಜಾ ಜೋಡಿಯನ್ನು ಜನ ಇಷ್ಟಪಟ್ಟಿದ್ದರು. ವಿಜಯ್ ಮೇಲಿನ ಗೌರವ ಮತ್ತು ಸ್ನೇಹಕ್ಕಾಗಿ ಅವರು ಈ ಸಿನಿಮಾಗೆ ಹಸಿರು ನಿಶಾನೆ ತೋರಿಸಿದ್ದಾರೆ.

ಸಿನಿಮಾದಲ್ಲಿ ಬೇರೆ ಯಾರೆಲ್ಲಾ ಇದ್ದಾರೆ?

ಈ ಚಿತ್ರದಲ್ಲಿ ವಿಜಯ್ ಮತ್ತು ಪೂಜಾ ಹೆಗ್ಡೆ ಮಾತ್ರವಲ್ಲದೆ ಬಾಲಿವುಡ್ ನಟ ಬಾಬಿ ಡಿಯೋಲ್ ಮತ್ತು ಮಮಿತಾ ಬೈಜು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಜನ ನಾಯಕನ್’ ಕಥೆ ಏನು?

ಇದೊಂದು ಪಕ್ಕಾ ಪೊಲಿಟಿಕಲ್ ಕಥೆಯಾಗಿದೆ. ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಸಾಮಾನ್ಯ ಮನುಷ್ಯನೊಬ್ಬ ಹೇಗೆ ತಿರುಗಿ ಬೀಳುತ್ತಾನೆ ಎಂಬುದೇ ಸಿನಿಮಾದ ಒನ್ ಲೈನ್ ಸ್ಟೋರಿ. ಜನರ ಪರವಾಗಿ ಹೋರಾಡುವ ಅವನು ಹೇಗೆ ಒಬ್ಬ ನಾಯಕನಾಗಿ ಬೆಳೆಯುತ್ತಾನೆ ಮತ್ತು ಎದುರಾಗುವ ಸವಾಲುಗಳನ್ನು ಹೇಗೆ ಎದುರಿಸುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಭಾರಿ ಸಂಭಾವನೆ ಡಿಮ್ಯಾಂಡ್: ಬ್ಯಾಕ್ ಟು ಬ್ಯಾಕ್ ಆಫರ್ ಕಳೆದುಕೊಳ್ಳುತ್ತಿದ್ದಾರಾ ಪೂಜಾ ಹೆಗ್ಡೆ?

ಕೊನೆಗೂ ಬಿಡುಗಡೆಯಾದ ಸಿನಿಮಾ

ಈ ಸಿನಿಮಾ ಮೊದಲು 2026ರ ಜನವರಿ 9 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯ ಸಮಸ್ಯೆಯಿಂದಾಗಿ ತಡವಾಗಿತ್ತು. ಚಿತ್ರದ ಕೆಲವು ದೃಶ್ಯಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂಬ ದೂರು ಕೇಳಿಬಂದಿತ್ತು. ಆ ನಂತರ ಪರಿಶೀಲನಾ ಸಮಿತಿಯು ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಎಲ್ಲಾ ಅಡೆತಡೆಗಳನ್ನು ಮುಗಿಸಿ ಕೊನೆಗೂ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:12 am, Thu, 23 July 26

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ