AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಹಾಗೂ ಕೃತಿ ನಟಿಸಿದ್ದಾರೆ. ಈ ಸಿನಿಮಾದಿಂದ ಇಬ್ಬರೂ ಕ್ಲೋಸ್ ಆದರು ಎನ್ನಲಾಗಿತ್ತು. ಆದರೆ, ಇದನ್ನು ತಂಡ ಒಪ್ಪಿಲ್ಲ. ಅದೇ ರೀತಿ ಅನುಷ್ಕಾ ಶೆಟ್ಟಿ ಕೂಡ ಓರ್ವ ಹಿರಿಯ ನಟನ ಜೊತೆ ಅಫೇರ್ ಹೊಂದಿದ್ದರು ಎಂಬ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಇಲ್ಲ. 

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 23, 2024 | 7:59 AM

Share

ತೆಲುಗು ನಟ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಲವ್​ಸ್ಟೋರಿ ಆರಂಭ ಆಗಿ ಈಗಾಗಲೇ ಕೊನೆ ಆಗಿದೆ. ಇವರು 2009ರಲ್ಲಿ ‘ಬಿಲ್ಲಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಯಿತು. ಈ ಸಿನಿಮಾ ಹಿಟ್ ಕೂಡ ಆಯಿತು. ‘ಮಿರ್ಚಿ’, ‘ಬಾಹುಬಲಿ’ ಚಿತ್ರಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಇಷ್ಟೊಂದು ಸಿನಿಮಾ ಮಾಡಿದ ಬಳಿಕ ಇವರ ಮಧ್ಯೆ ಸಹಜವಾಗಿಯೇ ಪ್ರೀತಿ ಮೂಡಿತ್ತು. ಆದರೆ, ಈಗ ಇಬ್ಬರ ಮಧ್ಯೆ ಕಾಂಟ್ಯಾಕ್ಟ್ ಇಲ್ಲ. ಮದುವೆ ಆಗುತ್ತಾರೆ ಎಂದಿದ್ದ ಜೋಡಿ ಈಗ ದೂರ ಆಗಿದ್ದಾರೆ. ಇದಕ್ಕೆ ಮೂರನೇ ವ್ಯಕ್ತಿ ಕಾರಣ ಎನ್ನಲಾಗುತ್ತಿದೆ.

ಅನುಷ್ಕಾ ಶೆಟ್ಟಿ ಅವರು ಹಿರಿಯ ನಟನೊಬ್ಬರ ಜೊತೆ ಅಫೇರ್ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಪ್ರಭಾಸ್ ಹಾಗೂ ಅನುಷ್ಕಾ ದೂರ ಆದರು ಎಂಬ ಮಾತಿದೆ. ಹೀಗಾಗಿ, ಅನುಷ್ಕಾ ಅವರಿಂದ ಪ್ರಭಾಸ್ ಅಂತರ ಕಾಯ್ದುಕೊಳ್ಳುತ್ತಾ ಬಂದರು. ಇತ್ತ ಪ್ರಭಾಸ್ ಅವರು ಬಾಲಿವುಡ್ ನಟಿ ಕೃತಿ ಸನೋನ್​ ಜೊತೆ ಎಂಗೇಜ್​ಮೆಂಟ್ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಹರಿದಾಡಿತು. ಆದರೆ, ಇದನ್ನು ಅವರು ಅಲ್ಲಗಳೆದರು.

‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಹಾಗೂ ಕೃತಿ ನಟಿಸಿದ್ದಾರೆ. ಈ ಸಿನಿಮಾದಿಂದ ಇಬ್ಬರೂ ಕ್ಲೋಸ್ ಆದರು ಎನ್ನಲಾಗಿತ್ತು. ಆದರೆ, ಇದನ್ನು ತಂಡ ಒಪ್ಪಿಲ್ಲ. ಅದೇ ರೀತಿ ಅನುಷ್ಕಾ ಶೆಟ್ಟಿ ಕೂಡ ಓರ್ವ ಹಿರಿಯ ನಟನ ಜೊತೆ ಅಫೇರ್ ಹೊಂದಿದ್ದರು ಎಂಬ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಪ್ರಭಾಸ್ ಅವರಿಗೆ 45 ವರ್ಷ ವಯಸ್ಸು. ಅವರು ಇನ್ಮೇಲೆ ಮದುವೆ ಆಗೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಅವರ ಗಮನ ಸಂಪೂರ್ಣವಾಗಿ ಸಿನಿಮಾ ಕೆಲಸದ ಮೇಲೆ ಇದೆ. ಪ್ರಭಾಸ್ ಹೆಸರು ಅನುಷ್ಕಾಗೆ ತಳುಕು ಹಾಕಿಕೊಂಡಷ್ಟು ಇನ್ಯಾರ ಹೆಸರ ಜೊತೆಯಲ್ಲೂ ತಳುಕು ಹಾಕಿಕೊಂಡಿಲ್ಲ.

ಇದನ್ನೂ ಓದಿ: ಮತ್ತೊಮ್ಮೆ ಅನುಷ್ಕಾ ಶೆಟ್ಟಿ ಮದುವೆ ಗಾಸಿಪ್, ಈ ಬಾರಿ ಉದ್ಯಮಿ ಜೊತೆ

ಅನುಷ್ಕಾ ಶೆಟ್ಟಿ ಅವರಿಗೆ 42 ವರ್ಷ. ಅವರು ಶೀಘ್ರವೇ 43ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಅವರು ಕೂಡ ಮದುವೆ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಇಬ್ಬರೂ ವಿವಾಹ ಆಗಬೇಕು ಎಂಬುದು ಈಗಲೂ ಕೆಲವರ ಅಭಿಪ್ರಾಯಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ