Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಮದುವೆ ಆಗದೆ ಇರಲು ಕಾರಣವೇನು? ತಾಯಿ ಶಿವ ಕುಮಾರಿ ಉತ್ತರ ಕೇಳಿ

ಪ್ರಭಾಸ್ ಅವರು 'ಕಲ್ಕಿ 2898 ಎಡಿ' ಚಿತ್ರದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ. ಆದರೆ ಅವರ ಅವಿವಾಹಿತ ಜೀವನ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಅವರ ತಾಯಿ ಶಿವಕುಮಾರಿ ಅವರು, ಪ್ರಭಾಸ್ ಅವರ ಆಪ್ತ ಗೆಳೆಯನ ಬ್ರೇಕಪ್‌ನಿಂದಾಗಿ ಅವರು ಸಂಬಂಧಗಳ ಬಗ್ಗೆ ಭಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಪ್ರಭಾಸ್ ಮದುವೆ ಆಗದೆ ಇರಲು ಕಾರಣವೇನು? ತಾಯಿ ಶಿವ ಕುಮಾರಿ ಉತ್ತರ ಕೇಳಿ
ಪ್ರಭಾಸ್ ಹಾಗೂ ತಾಯಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 15, 2025 | 6:30 AM

ನಟ ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಕಳೆದ ವರ್ಷ ರಿಲೀಸ್ ಆದ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಕಲೆಕ್ಷನ್ ಮಾಡಿದೆ. ಈ ಮಧ್ಯೆ ಪ್ರಭಾಸ್ ಅವರ ಬ್ಯಾಚುಲರ್ ಜೀವನದ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಪ್ರಭಾಸ್ ಅವರು ವಿವಾಹ ಆಗದೆ ಇರಲು ಕಾರಣ ಏನು ಎಂಬುದನ್ನು ಈ ಮೊದಲು ಅವರ ತಾಯಿ ಶಿವ ಕುಮಾರಿ ಅವರು ರಿವೀಲ್ ಮಾಡಿದ್ದರು.

ಪ್ರಭಾಸ್ ಅವರು ಟಾಲಿವುಡ್​ನ ಶ್ರೀಮಂತ ನಟರಲ್ಲಿ ಒಬ್ಬರು. ಅನೇಕ ಹೀರೋಗಳು ಈಗಾಗಲೇ ಮದುವೆ ಆಗಿ ಸುಖವಾಗಿ ಜೀವನ ನಡೆಸುತ್ತಾ ಇದ್ದಾರೆ. ಆದರೆ, ಪ್ರಭಾಸ್​ಗೆ ಸದ್ಯಕ್ಕಂತೂ ಮದುವೆ ಆಗುವ ಯಾವುದೇ ಆಲೋಚನೆ ಇದ್ದಂತೆ ಕಾಣುತ್ತಿಲ್ಲ. ಇದಕ್ಕೆ ಕಾರಣ ಆಗಿದ್ದು, ಅವರ ಗೆಳೆಯ ರವಿ ಅವರ ಬ್ರೇಕಪ್ ಎನ್ನಲಾಗಿದೆ. ಈ ಬಗ್ಗೆ ಅವರ ತಾಯಿ ಶಿವ ಕುಮಾರಿ ಮಾತನಾಡಿದ್ದರು.

ಪ್ರಭಾಸ್​ಗೆ ರವಿ ಎಂಬ ಆಪ್ತ ಗೆಳೆಯ ಇದ್ದಾರೆ. ಅವರು ಒಮ್ಮೆ ಬ್ರೇಕಪ್​ಗೆ ಒಳಗಾದರು. ಆ ಬಳಿಕ ಸಾಕಷ್ಟು ಕುಗ್ಗಿ ಹೋಗಿದ್ದರು. ಇವುಗಳನ್ನು ಪ್ರಭಾಸ್ ಹತ್ತಿರದಿಂದ ಕಂಡಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಪ್ರಭಾಸ್ ಅವರು ವಿವಾಹದ ಬಗ್ಗೆ ಹಾಗೂ ಹೊಸ ಸಂಬಂಧಗಳ ಬಗ್ಗೆ ಭಯ ಬಿದ್ದಿದ್ದರು ಎಂದು ಪ್ರಭಾಸ್ ತಾಯಿ ಶಿವ ಕುಮಾರಿ ಹೇಳಿದ್ದರ ಬಗ್ಗೆ ವರದಿ ಆಗಿತ್ತು.

ಹಾಗಾದರೆ ಪ್ರಭಾಸ್ ಮದುವೆ ಯಾವಾಗ? ಈ ಪ್ರಶ್ನೆಗೆ ಸದ್ಯಕ್ಕಂತೂ ಉತ್ತರ ಸಿಗುವ ಯಾವುದೇ ಸೂಚನೆ ಇಲ್ಲ. ಪ್ರಭಾಸ್ ಅವರು ಸದ್ಯಕ್ಕಂತೂ ಮದುವೆ ಬಗ್ಗೆ ಯಾವುದೇ ಆಸಕ್ತಿ ತೋರಿಸುತ್ತಿಲ್ಲ. ಅವರು ಸದ್ಯ ಸಿನಿಮಾ ಕೆಲಸಗಳ ಮೇಲೆ ತಮ್ಮ ಗಮನ ಹರಿಸುತ್ತಾ ಇದ್ದಾರೆ.

ಇದನ್ನೂ ಓದಿ: ಪ್ರಭಾಸ್ ಜೊತೆ ನಟಿಸೋ ಆಸೆ ಇದೆಯಾ? ಇಲ್ಲಿದೆ ‘ಸ್ಪಿರಿಟ್’ ತಂಡದ ಅವಕಾಶ

ಈ ಮೊದಲು ಪ್ರಭಾಸ್ ಮದುವೆ ವಿಚಾರವಾಗಿ ಮಾತನಾಡಿದ್ದರು. ‘ನಾನು ಮದುವೆ ಆದರೆ ನನ್ನ ಮಹಿಳಾ ಅಭಿಮಾನಿಗಳು ಬೇಸರಗೊಳ್ಳುತ್ತಾರೆ’ ಎಂದು ಹೇಳಿಕೊಂಡಿದ್ದರು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಪ್ರೀತಿ-ಪ್ರೇಮ ವಿಚಾರವೂ ಚರ್ಚೆ ಆಗುತ್ತಲೇ ಇರುತ್ತದೆ. ಪ್ರಭಾಸ್ ಅವರ ನಟನೆಯ ‘ರಾಜಾ ಸಾಬ್’ ರಿಲೀಸ್​ಗೆ ರೆಡಿ ಇದೆ. ಆ ಬಳಿಕ ‘ಸ್ಪಿರಿಟ್’ ಸಿನಿಮಾದಲ್ಲಿ ಅವರು ತೊಡಗಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್