AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಸಿನಿಮಾ ಅವಕಾಶ ನಿರಾಕರಿಸಿದ ರಾಘವ್ ಲಾರೆನ್ಸ್, ಆದರೆ ಒಳ್ಳೆಯ ಕಾರಣಕ್ಕೆ

Raghava Lawrence: ರಾಘವ್ ಲಾರೆನ್ಸ್ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ತಮಿಳಿನಲ್ಲಿ ಬ್ಲಾಕ್ ಬಸ್ಟರ್ ಆದ ಕಮಲ್ ಹಾಸನ್ ನಟನೆಯ ‘ವಿಕ್ರಂ’ ಸಿನಿಮಾನಲ್ಲಿ ನಟಿಸುವ ಅವಕಾಶವನ್ನು ರಾಘವ್ ಲಾರೆನ್ಸ್​ಗೆ ನೀಡಲಾಗಿತ್ತು. ಆದರೆ ಅವರು ನಟಿಸಲು ನಿರಾಕರಿಸಿದರು. ಅದಕ್ಕೆ ಮಹತ್ವದ ಕಾರಣವೂ ಇದೆ.

ದೊಡ್ಡ ಸಿನಿಮಾ ಅವಕಾಶ ನಿರಾಕರಿಸಿದ ರಾಘವ್ ಲಾರೆನ್ಸ್, ಆದರೆ ಒಳ್ಳೆಯ ಕಾರಣಕ್ಕೆ
Raghav Lawrence
ಮಂಜುನಾಥ ಸಿ.
|

Updated on: Jun 19, 2025 | 10:44 AM

Share

ಶ್ರಮ ಪಟ್ಟರೆ ಸಾಮಾನ್ಯ ವ್ಯಕ್ತಿಯೂ ಸೆಲೆಬ್ರಿಟಿ ಆಗಬಹುದು ಎಂಬುದಕ್ಕೆ ರಾಘವ್ ಲಾರೆನ್ಸ್ (Raghav Lawrence) ಒಳ್ಳೆಯ ಉದಾಹರಣೆ. ಕಾರು ತೊಳೆಯುವವನಾಗಿ ಕೆಲಸಕ್ಕೆ ಸೇರಿ ಅಲ್ಲಿಂದ ಒಂದೊಂದೇ ಮೆಟ್ಟಿಲು ಹತ್ತುತ್ತಾ ಬಂದು ಈಗ ಸ್ಟಾರ್ ನಾಯಕ ನಟ ಆಗಿದ್ದಾರೆ. ರಾಘವ್ ಲಾರೆನ್ಸ್​​ಗೆ ತೆಲುಗು, ತಮಿಳು, ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಹಾರರ್, ಕಾಮಿಡಿ, ಆಕ್ಷನ್ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ರಾಘವ್ ಲಾರೆನ್ಸ್​ಗೆ ಭಾರಿ ಬಜೆಟ್​ನ, ಹಲವು ಅತ್ಯುತ್ತಮ ಕಲಾವಿದರನ್ನು ಒಳಗೊಂಡ ಸಿನಿಮಾದ ಆಫರ್ ನೀಡಲಾಗಿತ್ತು. ಆದರೆ ಒಳ್ಳೆಯ ಕಾರಣಕ್ಕೆ ಆ ಸಿನಿಮಾದ ಅವಕಾಶವನ್ನು ನಿರಾಕರಿಸಿದ್ದರು. ಆ ಬಗ್ಗೆ ಇದೀಗ ಮಾತನಾಡಿದ್ದಾರೆ.

ಕಮಲ್ ಹಾಸನ್, ಫಹಾದ್ ಫಾಸಿಲ್, ವಿಜಯ್ ಸೇತುಪತಿ, ಸ್ಟಾರ್ ನಟ ಸೂರ್ಯ ಇನ್ನೂ ಕೆಲವು ಪ್ರತಿಭಾವಂತ ಕಲಾವಿದರು ನಟಿಸಿದ್ದ ಸೂಪರ್ ಹಿಟ್ ಸಿನಿಮಾ ‘ವಿಕ್ರಂ’ನಲ್ಲಿ ನಟಿಸುವ ಅವಕಾಶ ರಾಘವ್ ಲಾರೆನ್ಸ್​ಗೆ ಸಿಕ್ಕಿತ್ತಂತೆ. ವಿಜಯ್ ಸೇತುಪತಿ ನಟಿಸಿದ್ದ ಪಾತ್ರದಲ್ಲಿ ರಾಘವ್ ಲಾರೆನ್ಸ್ ನಟಿಸಬೇಕಿತ್ತಂತೆ. ನಿರ್ದೇಶಕ ಲೋಕೇಶ್ ಕನಗರಾಜ್, ಮೊದಲಿಗೆ ರಾಘವ್​ಗೆ ಕತೆ ಹೇಳಿದ್ದು ಮಾತ್ರವೇ ಅಲ್ಲದೆ, ನೀವೇ ನಟಿಸಬೇಕು ಎಂದು ಒತ್ತಾಯ ಸಹ ಮಾಡಿದರಂತೆ. ಆದರೆ ರಾಘವ್ ನಟಿಸಲಿಲ್ಲ.

ರಾಘವ್ ನಟಿಸದೇ ಇರಲು ಪ್ರಮುಖ ಕಾರಣವೆಂದರೆ. ಅದು ಪಕ್ಕಾ ವಿಲನ್ ಪಾತ್ರ. ಡ್ರಗ್ಸ್ ವ್ಯವಹಾರ ಮಾಡುವ ವ್ಯಕ್ತಿಯ ಪಾತ್ರ. ಹಾಗಾಗಿ ಆ ಪಾತ್ರದಲ್ಲಿ ನಟಿಸುವುದಿಲ್ಲ ಎಂದರಂತೆ ರಾಘವ್. ‘ನನ್ನ ಸಿನಿಮಾಗಳನ್ನು ಮಕ್ಕಳು, ಕುಟುಂಬ ಸಮೇತರಾಗಿ ನೋಡುತ್ತಾರೆ. ನಾನು ಅಂಥಹಾ ಪಾತ್ರಗಳಲ್ಲಿ ನಟಿಸಲಾರೆ. ಅಂಥಹಾ ಪಾತ್ರಗಳಲ್ಲಿ ನಟಿಸುವುದು ಕುಟುಂಬವನ್ನು ಒಡೆಯುವುದಕ್ಕೆ ಸಮ ಎಂದು ನಾನು ಭಾವಿಸಿದ್ದೇನೆ. ಆ ಪಾತ್ರ ಮಾಡಿದ ನಟನನ್ನು ನಾನು ಟೀಕಿಸುತ್ತಿಲ್ಲ. ಆದರೆ ಆ ರೀತಿಯ ಪಾತ್ರ ನಾನು ಮಾಡಲಾರೆ’ ಎಂದಿದ್ದಾರೆ ರಾಘವ್ ಲಾರೆನ್ಸ್.

ಇದನ್ನೂ ಓದಿ:ಸಿನಿಮಾ ಇಲ್ಲದೆ ಕಷ್ಟದಲ್ಲಿರೋ ತ್ರಿವಿಕ್ರಂಗೆ ದೊಡ್ಡ ಸಲಹೆ ಕೊಟ್ಟ ಪವನ್ ಕಲ್ಯಾಣ್

‘ವಿಕ್ರಂ’ ಸಿನಿಮಾನಲ್ಲಿ ವಿಜಯ್ ಸೇತುಪತಿ, ಸಂತಾನಂ ಹೆಸರಿನ ಪವರ್​ಫುಲ್ ಪಾತ್ರದಲ್ಲಿ ನಟಿಸಿದ್ದರು. ಡ್ರಗ್ಸ್ ಲೋಕಲ್ ಡೀಲರ್ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಿದ್ದಾರೆ. ಸಿನಿಮಾನಲ್ಲಿ ವಿಜಯ್ ಸೇತುಪತಿ ಅವರ ಪಾತ್ರ ಸಖತ್ ಹೈಲೆಟ್ ಆಗಿತ್ತು. ಅವರ ಪಾತ್ರದ ಎಂಟ್ರಿ, ಡೈಲಾಗ್​​ಗಳು, ಆಕ್ಷನ್ ಎಲ್ಲವನ್ನೂ ಜನ ಮೆಚ್ಚಿಕೊಂಡಿದ್ದರು. ವಿಜಯ್ ಸೇತುಪತಿ ಅವರ ವೃತ್ತಿ ಜೀವನಕ್ಕೆ ಇದು ಹೆಚ್ಚಿನ ಬೂಸ್ಟ್ ನೀಡಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!