AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ

ರಣಬೀರ್ ಕಪೂರ್ ಹಾಗೂ ಯಶ್ ಕಾಂಬಿನೇಷನ್‌ನ 'ರಾಮಾಯಣ' ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗವು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸುವ ಕ್ಲಿಫ್‌ಹ್ಯಾಂಗರ್ ತಿರುವಿನೊಂದಿಗೆ ಕೊನೆಗೊಳ್ಳಲಿದೆ ಎಂದು ನಿರ್ದೇಶಕ ನಿತೇಶ್ ತಿವಾರಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈ ವಿಷಯ ಕುತೂಹಲ ಹೆಚ್ಚಿಸಿದೆ.

'ರಾಮಾಯಣ' ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ
ರಣಬೀರ್​-ಯಶ್
ರಾಜೇಶ್ ದುಗ್ಗುಮನೆ
|

Updated on: Jul 27, 2026 | 9:30 AM

Share

ಮುಖ್ಯಾಂಶಗಳು

  • ಪ್ರೇಕ್ಷಕರಿಗೆ ಶಾಕ್ ಕೊಡುತ್ತೆ 'ರಾಮಾಯಣ' ಪಾರ್ಟ್ 1
  • ರಾಮಾಯಣ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ?
  • ವಿವರಿಸಿದ ನಿರ್ದೇಶಕ ನಿತೇಶ್​ ತಿವಾರಿ

ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ ಚಿತ್ರ (Ramayana Movie) ಹಲವು ಕಾರಣಗಳಿಂದ ಚರ್ಚೆಯಲ್ಲಿದೆ. ಈ ಮಹಾಕಾವ್ಯವನ್ನು ಎರಡು ಭಾಗದಲ್ಲಿ ಹೇಳುತ್ತಿರುವುದು ಏಕೆ ಎಂಬುದನ್ನು ನಿರ್ದೇಶಕ ನಿತೇಶ್ ತಿವಾರಿ ರಿವೀಲ್ ಮಾಡಿದ್ದಾರೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ 2026 ಕಾರ್ಯಕ್ರಮದಲ್ಲಿ ಚಿತ್ರತಂಡ ಈ ಬಗ್ಗೆ ಮಾತನಾಡಿದೆ. ಕುತೂಹಲದ ತಿರುವಿನೊಂದಿಗೆ ಮೊದಲ ಭಾಗ ಕೊನೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಇಡೀ ಭಾರತೀಯ ಚಿತ್ರರಂಗದಲ್ಲೇ ‘ರಾಮಾಯಣ’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದ ಟೀಸರ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ರಾಮಾಯಣದ ಕಥೆ ಅತ್ಯಂತ ವಿಶಾಲವಾಗಿದೆ. ಹಾಗಾಗಿ ಇದನ್ನು ಎರಡು ಭಾಗಗಳಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಮೊದಲ ಭಾಗ ಮುಗಿದ ತಕ್ಷಣ ಪ್ರೇಕ್ಷಕರಿಗೆ ಎರಡನೇ ಭಾಗವನ್ನು ನೋಡಲೇಬೇಕು ಎಂಬ ಹಪಾಹಪಿ ಶುರುವಾಗುತ್ತದೆ. ನಿರ್ದೇಶಕರು ಕಥೆಯನ್ನು ಅಷ್ಟು ಅದ್ಭುತವಾಗಿ ಹೆಣೆದಿದ್ದಾರಂತೆ.

‘ರಾಮಾಯಣ’ ಸಿನಿಮಾದ ಟ್ರೇಲರ್ ತುಣುಕುಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿವೆ. ದೆಹಲಿಯ ಭಾರತ್ ಮಂಟಪಂ ಸ್ಕ್ರೀನಿಂಗ್ ವೇಳೆ ವಿಡಿಯೋ ಸೋರಿಕೆಯಾಗಿದೆ. ಈಗ ಕಾಮಿಕ್-ಕಾನ್ ಪ್ರದರ್ಶನದ ಬಳಿಕವೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಅಲರ್ಟ್ ಆಗಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ಕಾನೂನು ತಂಡವು ಪೈರಸಿ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಟ್ರೇಲರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡ್ತಿದ್ರು ಸಖತ್ ಕ್ವಾಟ್ಲೆ

ಈ ಬಿಗ್ ಬಜೆಟ್ ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಚಿತ್ರಕ್ಕೆ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಜಂಟಿಯಾಗಿ ಸಂಗೀತ ನೀಡುತ್ತಿದ್ದಾರೆ. ನಟ ಯಶ್ ಕೂಡ ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಬಹುನಿರೀಕ್ಷಿತ ಈ ಸಿನಿಮಾ 2026ರ ನವೆಂಬರ್ ತಿಂಗಳಿನಲ್ಲಿ ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ