AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

Sushant Singh Rajput Death Anniversary: 2014ರ ಬ್ಲಾಕ್​ಬಸ್ಟರ್​ ಸಿನಿಮಾ ‘ಪಿಕೆ’ಯಲ್ಲಿ ಸುಶಾಂತ್​ ಒಂದು ಮುಖ್ಯ ಪಾತ್ರವನ್ನು​ ನಿಭಾಯಿಸಿದ್ದರು. ಅಷ್ಟುಹೊತ್ತಿಗಾಗಲೇ ಬಾಲಿವುಡ್​ನಲ್ಲಿ ಸ್ಟಾರ್​ ಆಗಿ ಅವರು ಗುರುತಿಸಿಕೊಂಡಿದ್ದರು. ಅದರ ನಂತರವೂ ಅವರು ಕಿರುತೆರೆಗೆ ಮರಳಬೇಕಾಯಿತು.

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?
ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
| Edited By: |

Updated on: Jun 13, 2021 | 5:26 PM

Share

ಕಿರುತೆರೆಯಲ್ಲಿ ಮಿಂಚಿದ ಬಳಿಕ ಸಿನಿಮಾ ಲೋಕಕ್ಕೆ ಕಾಲಿಟ್ಟು ಸ್ಟಾರ್​ ಆದವರು ಅನೇಕರಿದ್ದಾರೆ. ಯಶ್​, ಶಾರುಖ್​ ಖಾನ್​ ಮುಂತಾದವರೇ ಈ ಮಾತಿಗೆ ಬೆಸ್ಟ್​ ಉದಾಹರಣೆ. ಅದೇ ರೀತಿ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಮೊದಲು ಧಾರಾವಾಹಿಯಲ್ಲಿ ನಟಿಸಿ ನಂತರ ಬಾಲಿವುಡ್​ಗೆ ಕಾಲಿಟ್ಟವರು. ‘ಪವಿತ್ರ ರಿಶ್ತಾ’ ಸೀರಿಯಲ್​ ಮೂಲಕ ಅವರಿಗೆ ಭಾರಿ ಜನಪ್ರಿಯತೆ ಸಿಕ್ಕಿತ್ತು. ಆ ಜನಪ್ರಿಯತೆ ಆಧಾರದ ಮೇಲೆ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ಸು ಕಂಡರು.

ಮೊದಲ ಚಿತ್ರ ‘ಕೈ ಪೋ ಚೆ’ ಗಮನ ಸೆಳೆಯಿತು. ನಂತರ ನಟಿಸಿದ ‘ಶುದ್ಧ್​ ದೇಸಿ ರೊಮ್ಯಾನ್ಸ್​’ ಕೂಡ ಹೆಸರು ತಂದುಕೊಟ್ಟಿತ್ತು. ನಂತರ ರಾಜ್​ಕುಮಾರ್​ ಹಿರಾನಿ ನಿರ್ದೇಶನದ ಬ್ಲಾಕ್​ಬಸ್ಟರ್​ ಸಿನಿಮಾ ‘ಪಿಕೆ’ಯಲ್ಲಿ ಒಂದು ಮುಖ್ಯ ಪಾತ್ರವನ್ನು ಸುಶಾಂತ್​ ನಿಭಾಯಿಸಿದ್ದರು. ಆದರೆ ಬಾಲಿವುಡ್​ನಲ್ಲಿ ಸ್ಟಾರ್​ ಆದ ಬಳಿಕವೂ ಅವರು ಕಿರುತೆರೆಗೆ ಮರಳಬೇಕಾಯಿತು.

ಕಿರುತೆರೆಗೆ ವಾಪಸ್​ ಬಂದರು ಎಂದರೆ ಸುಶಾಂತ್​ ಅವರಿಗೆ ಬಾಲಿವುಡ್​ನಲ್ಲಿ ಅವಕಾಶ ಇರಲಿಲ್ಲ ಎಂದೇನಲ್ಲ. ಅವರು 2015ರಲ್ಲಿ ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಸಿನಿಮಾದಲ್ಲಿ ಪತ್ತೇದಾರಿ ಮಾತ್ರ ಮಾಡಿದ್ದರು. ಆ ಚಿತ್ರದ ಪ್ರಮೋಷನ್​ ಸಲುವಾಗಿ ‘ಸಿಐಡಿ’ ಧಾರಾವಾಹಿಯಲ್ಲೂ ಕೂಡ ಅದೇ ಪಾತ್ರವನ್ನು ಅವರು ಮಾಡಿದರು. ಒಂದು ಎಪಿಸೋಡ್​ನಲ್ಲಿ ಅವರು ಅತಿಥಿ ಮಾತ್ರ ನಿಭಾಯಿಸಿದರು. ಈ ಮೂಲಕ ಧಾರಾವಾಹಿಯಲ್ಲಿ ತಮ್ಮ ಸಿನಿಮಾ ಪಾತ್ರವನ್ನು ಪ್ರಚಾರ ಮಾಡಿದ್ದರು.

2015ರ ಏಪ್ರಿಲ್​ 3ರಂದು ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಸಿನಿಮಾ ಬಿಡುಗಡೆ ಆಯಿತು. 2016ರಲ್ಲಿ ‘ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ರಿಲೀಸ್​ ಆದ ನಂತರವಂತೂ ಸುಶಾಂತ್​ ವಿಶ್ವಾದ್ಯಂತ ಜನಪ್ರಿಯರಾದರು. ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಚಿತ್ರದ ಸೀಕ್ವೆಲ್​ ಮಾಡಬೇಕು ಎಂಬ ಪ್ಲ್ಯಾನ್​ ಸಿದ್ಧಗೊಂಡಿತ್ತು. ಆದರೆ ಸುಶಾಂತ್​ ನಿಧನದ ನಂತರ ಆ ಯೋಜನೆಯನ್ನು ಕೈ ಬಿಡಲಾಯಿತು.

ಸೋಮವಾರಕ್ಕೆ (ಜೂ.14) ಸುಶಾಂತ್​ ನಿಧನರಾಗಿ ಒಂದು ವರ್ಷ ಭರ್ತಿ ಆಗುತ್ತದೆ. ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಅವರ ಕುಟುಂಬದವರು ಮತ್ತು ಅಭಿಮಾನಿಗಳು ಇಂದಿಗೂ ಹೋರಾಡುತ್ತಲೇ ಇದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇನ್ನೂ ಅಂತಿಮ ವರದಿ ಸಲ್ಲಿಸಿಲ್ಲ.

ಇದನ್ನೂ ಓದಿ:

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

Sushant Singh Rajput: ಸುಶಾಂತ್​ ಸಾವಿನ ನಂತರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ನೀಡಿದ ಅಚ್ಚರಿಯ​ ಹೇಳಿಕೆಗಳು

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್