AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

Sushant Singh Rajput Death Anniversary: 2014ರ ಬ್ಲಾಕ್​ಬಸ್ಟರ್​ ಸಿನಿಮಾ ‘ಪಿಕೆ’ಯಲ್ಲಿ ಸುಶಾಂತ್​ ಒಂದು ಮುಖ್ಯ ಪಾತ್ರವನ್ನು​ ನಿಭಾಯಿಸಿದ್ದರು. ಅಷ್ಟುಹೊತ್ತಿಗಾಗಲೇ ಬಾಲಿವುಡ್​ನಲ್ಲಿ ಸ್ಟಾರ್​ ಆಗಿ ಅವರು ಗುರುತಿಸಿಕೊಂಡಿದ್ದರು. ಅದರ ನಂತರವೂ ಅವರು ಕಿರುತೆರೆಗೆ ಮರಳಬೇಕಾಯಿತು.

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?
ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
| Edited By: |

Updated on: Jun 13, 2021 | 5:26 PM

Share

ಕಿರುತೆರೆಯಲ್ಲಿ ಮಿಂಚಿದ ಬಳಿಕ ಸಿನಿಮಾ ಲೋಕಕ್ಕೆ ಕಾಲಿಟ್ಟು ಸ್ಟಾರ್​ ಆದವರು ಅನೇಕರಿದ್ದಾರೆ. ಯಶ್​, ಶಾರುಖ್​ ಖಾನ್​ ಮುಂತಾದವರೇ ಈ ಮಾತಿಗೆ ಬೆಸ್ಟ್​ ಉದಾಹರಣೆ. ಅದೇ ರೀತಿ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಮೊದಲು ಧಾರಾವಾಹಿಯಲ್ಲಿ ನಟಿಸಿ ನಂತರ ಬಾಲಿವುಡ್​ಗೆ ಕಾಲಿಟ್ಟವರು. ‘ಪವಿತ್ರ ರಿಶ್ತಾ’ ಸೀರಿಯಲ್​ ಮೂಲಕ ಅವರಿಗೆ ಭಾರಿ ಜನಪ್ರಿಯತೆ ಸಿಕ್ಕಿತ್ತು. ಆ ಜನಪ್ರಿಯತೆ ಆಧಾರದ ಮೇಲೆ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ಸು ಕಂಡರು.

ಮೊದಲ ಚಿತ್ರ ‘ಕೈ ಪೋ ಚೆ’ ಗಮನ ಸೆಳೆಯಿತು. ನಂತರ ನಟಿಸಿದ ‘ಶುದ್ಧ್​ ದೇಸಿ ರೊಮ್ಯಾನ್ಸ್​’ ಕೂಡ ಹೆಸರು ತಂದುಕೊಟ್ಟಿತ್ತು. ನಂತರ ರಾಜ್​ಕುಮಾರ್​ ಹಿರಾನಿ ನಿರ್ದೇಶನದ ಬ್ಲಾಕ್​ಬಸ್ಟರ್​ ಸಿನಿಮಾ ‘ಪಿಕೆ’ಯಲ್ಲಿ ಒಂದು ಮುಖ್ಯ ಪಾತ್ರವನ್ನು ಸುಶಾಂತ್​ ನಿಭಾಯಿಸಿದ್ದರು. ಆದರೆ ಬಾಲಿವುಡ್​ನಲ್ಲಿ ಸ್ಟಾರ್​ ಆದ ಬಳಿಕವೂ ಅವರು ಕಿರುತೆರೆಗೆ ಮರಳಬೇಕಾಯಿತು.

ಕಿರುತೆರೆಗೆ ವಾಪಸ್​ ಬಂದರು ಎಂದರೆ ಸುಶಾಂತ್​ ಅವರಿಗೆ ಬಾಲಿವುಡ್​ನಲ್ಲಿ ಅವಕಾಶ ಇರಲಿಲ್ಲ ಎಂದೇನಲ್ಲ. ಅವರು 2015ರಲ್ಲಿ ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಸಿನಿಮಾದಲ್ಲಿ ಪತ್ತೇದಾರಿ ಮಾತ್ರ ಮಾಡಿದ್ದರು. ಆ ಚಿತ್ರದ ಪ್ರಮೋಷನ್​ ಸಲುವಾಗಿ ‘ಸಿಐಡಿ’ ಧಾರಾವಾಹಿಯಲ್ಲೂ ಕೂಡ ಅದೇ ಪಾತ್ರವನ್ನು ಅವರು ಮಾಡಿದರು. ಒಂದು ಎಪಿಸೋಡ್​ನಲ್ಲಿ ಅವರು ಅತಿಥಿ ಮಾತ್ರ ನಿಭಾಯಿಸಿದರು. ಈ ಮೂಲಕ ಧಾರಾವಾಹಿಯಲ್ಲಿ ತಮ್ಮ ಸಿನಿಮಾ ಪಾತ್ರವನ್ನು ಪ್ರಚಾರ ಮಾಡಿದ್ದರು.

2015ರ ಏಪ್ರಿಲ್​ 3ರಂದು ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಸಿನಿಮಾ ಬಿಡುಗಡೆ ಆಯಿತು. 2016ರಲ್ಲಿ ‘ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ರಿಲೀಸ್​ ಆದ ನಂತರವಂತೂ ಸುಶಾಂತ್​ ವಿಶ್ವಾದ್ಯಂತ ಜನಪ್ರಿಯರಾದರು. ‘ಡಿಟೆಕ್ಟೀವ್​ ಬ್ಯೋಮಕೇಶ್​ ಬಕ್ಷಿ’ ಚಿತ್ರದ ಸೀಕ್ವೆಲ್​ ಮಾಡಬೇಕು ಎಂಬ ಪ್ಲ್ಯಾನ್​ ಸಿದ್ಧಗೊಂಡಿತ್ತು. ಆದರೆ ಸುಶಾಂತ್​ ನಿಧನದ ನಂತರ ಆ ಯೋಜನೆಯನ್ನು ಕೈ ಬಿಡಲಾಯಿತು.

ಸೋಮವಾರಕ್ಕೆ (ಜೂ.14) ಸುಶಾಂತ್​ ನಿಧನರಾಗಿ ಒಂದು ವರ್ಷ ಭರ್ತಿ ಆಗುತ್ತದೆ. ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಅವರ ಕುಟುಂಬದವರು ಮತ್ತು ಅಭಿಮಾನಿಗಳು ಇಂದಿಗೂ ಹೋರಾಡುತ್ತಲೇ ಇದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇನ್ನೂ ಅಂತಿಮ ವರದಿ ಸಲ್ಲಿಸಿಲ್ಲ.

ಇದನ್ನೂ ಓದಿ:

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

Sushant Singh Rajput: ಸುಶಾಂತ್​ ಸಾವಿನ ನಂತರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ನೀಡಿದ ಅಚ್ಚರಿಯ​ ಹೇಳಿಕೆಗಳು

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ