AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ ನಿರ್ಧಾರಕ್ಕೆ ಕಾರಣವೇನು?

Toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರೀ ರಿಲೀಸ್ ಸೇಲ್ಸ್​ ಸಹ ಆಗಿಬಿಟ್ಟಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದು ಯಶ್ ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ಸಿನಿಮಾ ಪ್ರೇಮಿಗಳಿಗೂ ಸಹ ಸಾಕಷ್ಟು ಬೇಸರ ಮೂಡಿಸಿದೆ. ಆದರೆ ಯಶ್ ಹಾಗೂ ಚಿತ್ರತಂಡದ ಈ ನಿರ್ಧಾರದ ಹಿಂದೆ ಮುಖ್ಯವಾದ ಕಾರಣವೂ ಇದೆ.

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ ನಿರ್ಧಾರಕ್ಕೆ ಕಾರಣವೇನು?
Toxic Movie
ಮಂಜುನಾಥ ಸಿ.
|

Updated on: Mar 04, 2026 | 10:50 AM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿತ್ತು. ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಬಿಡುಗಡೆ ಆಗಿ ಸಿನಿಮಾಕ್ಕೆ ಹೈಪ್ ನೀಡಿದ್ದವು. ಸಿನಿಮಾ ನೋಡಲು ಪ್ರೇಕ್ಷಕರು ಸಹ ತುದಿಗಾಲಲ್ಲಿ ಎದುರು ನೋಡುತ್ತಿದ್ದರು. ಮಾರ್ಚ್ 19ರಂದು ‘ಟಾಕ್ಸಿಕ್’ ಬಿಡುಗಡೆ ಆಗಲಿತ್ತು, ಸಿನಿಮಾದ ವಿತರಣೆ ಹಕ್ಕುಗಳ ಮಾರಾಟ ಸಹ ಆಗಿಬಿಟ್ಟಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದು ಯಶ್ ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ಸಿನಿಮಾ ಪ್ರೇಮಿಗಳಿಗೂ ಸಹ ಸಾಕಷ್ಟು ಬೇಸರ ಮೂಡಿಸಿದೆ. ಆದರೆ ಯಶ್ ಹಾಗೂ ಚಿತ್ರತಂಡದ ಈ ನಿರ್ಧಾರದ ಹಿಂದೆ ಮುಖ್ಯವಾದ ಕಾರಣವೂ ಇದೆ.

ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಅಮೆರಿಕ ಮತ್ತು ಇರಾನ್ ದೇಶಗಳ ನಡುವಿನ ಸಂಘರ್ಷದ ಕಾರಣದಿಂದ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. ಅಲ್ಲೆಲ್ಲೋ ಆಗುತ್ತಿರುವ ಯುದ್ಧಕ್ಕೆ ಭಾರತದಲ್ಲಿ ಸಿನಿಮಾ ಬಿಡುಗಡೆ ಮಾಡದಿರುವುದೇಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಆದರೆ ಬ್ಯುಸಿನೆಸ್ ದೃಷ್ಟಿಯಿಂದ ನೋಡಿದಲ್ಲಿ ಯಶ್ ಮತ್ತು ತಂಡ ಭಾವನೆಗಳನ್ನು ಪಕ್ಕಕ್ಕಿಟ್ಟು ಸೂಕ್ತ ಮತ್ತು ಉದ್ಯಮಸಹಜ ನಿರ್ಣಯವನ್ನೇ ಕೈಗೊಂಡಿದೆ.

ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಭಾರತೀಯ ಸಿನಿಮಾಗಳಿಗೆ ಉತ್ತಮ ಮಾರುಕಟ್ಟೆ ಆಗಿರುವ ಅರಬ್ ದೇಶಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ದುಬೈ, ಅಬುದಾಭಿ, ಶಾರ್ಜಾ, ಅಲ್ ಐನ್,ಯುಎಕ್ಯು ಇನ್ನೂ ಕೆಲವು ನಗರಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಯುಎಇಯಲ್ಲಿ ವಿಷಮ ಪರಿಸ್ಥಿತಿ ಇದ್ದು, ಈ ಸಮಯದಲ್ಲಿ ಅಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಅಸಾಧ್ಯ ಮಾತ್ರವಲ್ಲ ಅಮಾನವೀಯವೂ ಎನಿಸಿಕೊಳ್ಳಲಿದೆ.

ಇದನ್ನೂ ಓದಿ:ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

ಯುಎಇ ಮಾತ್ರವೇ ಅಲ್ಲದೆ ಭಾರತೀಯ ಸಿನಿಮಾಗಳಿಗೆ ಒಳ್ಳೆಯ ಮಾರುಕಟ್ಟೆ ಆಗಿರುವ ಕುವೈತ್, ಒಮಾನ್ ದೇಶಗಳು ಸಹ ಈ ಯುದ್ಧ ಪರಿಸ್ಥಿತಿಯಿಂದ ವಿಷಮ ಸ್ಥಿತಿಯಲ್ಲಿದ್ದು, ಅಲ್ಲಿಯೂ ಸಹ ಸಿನಿಮಾ ಬಿಡುಗಡೆ ಅಸಾಧ್ಯವೇ ಆಗಿದೆ. ಕತಾರ್​​ನಲ್ಲಿಯೂ ಇದೇ ಪರಿಸ್ಥಿತಿ ಇದೆ. ಅರಬ್ ರಾಷ್ಟ್ರಗಳು ಮಾತ್ರವೇ ಅಲ್ಲದೆ ಈ ಅಮೆರಿಕದಲ್ಲಿಯೂ ಸಹ ಪರಿಸ್ಥಿತಿ ಶಾಂತವಾಗಿಲ್ಲ. ಅಮೆರಿಕದಲ್ಲಿ ಪರ-ವಿರೋಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇಂಥಹಾ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸಿನಿಮಾದ ಕಲೆಕ್ಷನ್ ದೃಷ್ಟಿಯಿಂದ ಒಳಿತಲ್ಲ.

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವಾದರೂ ಸಹ ಇದರಿಂದ ನೇರವಾಗಿ, ಪರೋಕ್ಷವಾಗಿ ಹಲವಾರು ದೇಶಗಳು ಪರಿಣಾಮ ಎದುರಿಸುತ್ತಿವೆ. ಭಾರತವೂ ಸೇರಿದಂತೆ ಬಹ್ರೇನ್, ಕತಾರ್, ಸೌದಿ ಅರೆಬಿಯಾ, ಯುಎಇ, ಲೆಬನಾನ್, ಪೂರ್ವ ಮತ್ತು ಆಗ್ನೇಯ ಏಷ್ಯಾದ ದೇಶಗಳಾದ ಚೀನಾ, ಜಪಾನ್ ದಕ್ಷಿಣ ಕೊರಿಯಾ, ಕೊರಿಯಾ, ಇಂಡೊನೇಷಿಯಾ, ಥೈಲಾಂಡ್, ಸಿಂಗಪುರ, ವಿಯೇತ್ನಾಮ್ ಹಾಗೂ ಯುರೋಪಿಯನ್ ಯೂನಿಯನ್​​ನಲ್ಲಿರು ಹಲವಾರು ದೇಶಗಳು ಸಹ ಪರೋಕ್ಷ ಪರಿಣಾಮ ಎದುರಿಸುತ್ತಿವೆ. ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಅಲ್ಲ ಬದಲಿಗೆ ಪ್ಯಾನ್ ವರ್ಲ್ಡ್​ ಎಂಬುದು ಯಶ್ ಅವರ ಕನಸಾಗಿದ್ದು, ವಿಶ್ವದ ಹಲವು ದೇಶಗಳು ಯುದ್ಧದ ಆತಂಕದಲ್ಲಿರುವಾಗ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಚಿತ್ರತಂಡಕ್ಕೆ ಸಹಜವಾಗಿಯೇ ಅನಿಸಿದಂತಿದೆ.

ಅಲ್ಲದೆ ಸಿನಿಮಾದ ಪ್ರಚಾರಕ್ಕಾಗಿ ಯಶ್ ಹಾಗೂ ಚಿತ್ರತಂಡ ಭಾರತ ಮಾತ್ರವಲ್ಲದೆ ಅಮೆರಿಕ, ದುಬೈ, ಮಲೇಷ್ಯಾ, ಜಪಾನ್ ಇನ್ನೂ ಹಲವು ಕಡೆಗಳಿಗೆ ಸುತ್ತು ಹಾಕಲಿತ್ತು. ಆದರೆ ಯುದ್ಧ ಪರಿಸ್ಥಿತಿ ಇರುವ ಕಾರಣ ವೈಮಾನಿಕ ಸಂಚಾರ ವ್ಯವಸ್ಥೆಯೇ ಅಸ್ಥವ್ಯಸ್ಥವಾಗಿದ್ದು, ಇದು ಸಿನಿಮಾದ ಪ್ರಚಾರದ ಮೇಲೆ ಪರಿಣಾಮ ಬೀರುವುದು ಮಾತ್ರವೇ ಅಲ್ಲದೆ ಯಶ್ ಸೇರಿದಂತೆ ಚಿತ್ರತಂಡದ ಜೀವಕ್ಕೂ ಅಪಾಯವಾಗುವ ಸಾಧ್ಯತೆ ಇದೆ. ಇದೆಲ್ಲ ವಿಷಯಗಳನ್ನು ಪರಿಗಣಿಸಿ ಚಿತ್ರತಂಡ ಸಿನಿಮಾದ ಬಿಡುಗಡೆಯನ್ನು ಚಿತ್ರತಂಡ ಮುಂದಕ್ಕೆ ಹಾಕಿಕೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು