AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ

Thalapathy Vijay | Trisha Krishnan: ‘ಲಿಯೋ’ ಚಿತ್ರತಂಡದ ಜೊತೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ತ್ರಿಷಾ ಅವರು ಕಾಶ್ಮೀರದಿಂದ ವಾಪಸ್​ ಬಂದರು ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅದರ ಹಿಂದಿನ ಕಾರಣ ಬೇರೆಯೇ ಇದೆ.

Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ
ದಳಪತಿ ವಿಜಯ್, ತ್ರಿಷಾ ಕೃಷ್ಣನ್
ಮದನ್​ ಕುಮಾರ್​
|

Updated on: Feb 09, 2023 | 4:49 PM

Share

ಕಾಲಿವುಡ್​ನಲ್ಲಿ ತ್ರಿಷಾ ಕೃಷ್ಣನ್​ ಮತ್ತು ದಳಪತಿ ವಿಜಯ್​ (Thalapathy Vijay) ಅವರದ್ದು ಹಿಟ್​ ಜೋಡಿ. ಹಲವು ವರ್ಷಗಳ ಬಳಿಕ ಅವರಿಬ್ಬರು ಜೊತೆಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಫ್ಯಾನ್ಸ್​ ಸಂಭ್ರಮಿಸಿದ್ದರು. ದಳಪತಿ ವಿಜಯ್​ ನಟನೆಯ 67ನೇ ಚಿತ್ರವಾದ ‘ಲಿಯೋ’ (Leo Movie) ಸಿನಿಮಾಗೆ ತ್ರಿಷಾ ನಾಯಕಿ. ಆ ಸಿನಿಮಾದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿದೆ. ಆದರೆ ತ್ರಿಷಾ (Trisha Krishnan) ಅವರು ಈಗ ಕಾಶ್ಮೀರವನ್ನು ಬಿಟ್ಟು ವಾಪಸ್​ ಬಂದಿದ್ದಾರೆ. ಅವರು ಈ ಸಿನಿಮಾ ತಂಡದಿಂದ ಹೊರಗೆ ಬಂದಿದ್ದಾರೆ ಎಂಬ ಗಾಸಿಪ್​ ಕೂಡ ಹಬ್ಬಿದೆ. ಆದರೆ ಇದರ ಅಸಲಿ ಕಹಾನಿಯೇ ಬೇರೆ ಇದೆ.

ಹಲವು ಕಾರಣಗಳಿಂದಾಗಿ ‘ಲಿಯೋ’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮುಹೂರ್ತ ನೆರವೇರಿತು. ಆಗ ತ್ರಿಷಾ ಮತ್ತು ದಳಪತಿ ವಿಜಯ್​ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಶೂಟಿಂಗ್ ಸಲುವಾಗಿ ಕಾಶ್ಮೀರಕ್ಕೆ ತೆರಳಿದಾಗಲೂ ಅವರಿಬ್ಬರು ಜೊತೆಯಲ್ಲೇ ಇದ್ದರು. ಆದರೆ ಈಗ ತ್ರಿಷಾ ಅವರು ಏಕಾಏಕಿ ವಾಪಸ್​ ಬಂದಿರುವುದೇಕೆ ಎಂದು ಫ್ಯಾನ್ಸ್​ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: 18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ಚಿತ್ರತಂಡದ ಜೊತೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ತ್ರಿಷಾ ಅವರು ಕಾಶ್ಮೀರದಿಂದ ವಾಪಸ್​ ಬಂದರು ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅದರ ಹಿಂದಿನ ಕಾರಣ ಬೇರೆಯೇ ಇದೆ. ಕಾಶ್ಮೀರದಲ್ಲಿ ಈಗ ಸಿಕ್ಕಾಪಟ್ಟೆ ಚಳಿ ಇದೆ. ಅದು ತ್ರಿಷಾ ಅವರ ಆರೋಗ್ಯಕ್ಕೆ ಹೊಂದಿಕೆ ಆಗುತ್ತಿಲ್ಲ. ಅವರ ಪಾಲಿನ ದೃಶ್ಯಗಳ ಶೂಟಿಂಗ್​ನಲ್ಲಿ ಭಾಗವಹಿಸಿದ ನಂತರ ಕಾಶ್ಮೀರದಲ್ಲಿಯೇ ಉಳಿದುಕೊಳ್ಳುವ ಬದಲು, ಅವರು ದೆಹಲಿಗೆ ಬಂದು ತಂಗಿದ್ದಾರೆ. ಮತ್ತೆ ಅಗತ್ಯವಿದ್ದಾಗ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಇದನ್ನೂ ಓದಿ: ರಾಜಕೀಯದ ಕಡೆ ತ್ರಿಷಾ ಒಲವು; ಕಾಂಗ್ರೆಸ್ ಸೇರಲಿದ್ದಾರೆ ‘ಪವರ್​’ ನಟಿ?

ಲೋಕೇಶ್​ ಕನಗರಾಜ್​ ಅವರು ‘ಕೈದಿ’, ‘ವಿಕ್ರಮ್​’ ಮುಂತಾದ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಆ ಚಿತ್ರಗಳಿಗೆ ‘ಲಿಯೋ’ ಸಿನಿಮಾದ ಕಥೆಯಲ್ಲಿ ಲಿಂಕ್​ ನೀಡಲಾಗುವುದು ಎಂದು ಕೂಡ ಹೇಳಲಾಗುತ್ತಿದೆ. ಅದರಲ್ಲಿ ತ್ರಿಷಾ ಪಾತ್ರ ಹೇಗೆ ಕನೆಕ್ಟ್​ ಆಗಲಿದೆ ಎಂದು ತಿಳಿಯಲು ಫ್ಯಾನ್ಸ್​ ಕಾದಿ​ದ್ದಾರೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ನಟನೆಯ 67ನೇ ಚಿತ್ರಕ್ಕೆ ‘ಲಿಯೋ’ ಎಂದು ಹೆಸರಿಟ್ಟ ನಿರ್ದೇಶಕ ಲೋಕೇಶ್​ ಕನಗರಾಜ್​​

ಈ ವರ್ಷದ ಆರಂಭದಲ್ಲೇ ದಳಪತಿ ವಿಜಯ್​ ಅವರಿಗೆ ‘ವಾರಿಸು’ ಸಿನಿಮಾದಿಂದ ಗೆಲುವು ಸಿಕ್ಕಿದೆ. ಹಾಗಾಗಿ ಅವರು ಹೊಸ ಹುಮ್ಮಸ್ಸಿನೊಂದಿಗೆ ‘ಲಿಯೋ’ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಶೀರ್ಷಿಕೆ ತಿಳಿಸಲು ಸಲುವಾಗಿ ಬಿಡುಗಡೆ ಆಗಿರುವ ಟೀಸರ್​ ಸಖತ್​ ವೈರಲ್​ ಆಗಿದೆ. ಈಗಾಗಲೇ ಈ ಸಿನಿಮಾದ ಒಟಿಟಿ ಮತ್ತು ಕಿರುತೆರೆ ಪ್ರಸಾರ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್