AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ

Thalapathy Vijay | Trisha Krishnan: ‘ಲಿಯೋ’ ಚಿತ್ರತಂಡದ ಜೊತೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ತ್ರಿಷಾ ಅವರು ಕಾಶ್ಮೀರದಿಂದ ವಾಪಸ್​ ಬಂದರು ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅದರ ಹಿಂದಿನ ಕಾರಣ ಬೇರೆಯೇ ಇದೆ.

Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ
ದಳಪತಿ ವಿಜಯ್, ತ್ರಿಷಾ ಕೃಷ್ಣನ್
ಮದನ್​ ಕುಮಾರ್​
|

Updated on: Feb 09, 2023 | 4:49 PM

Share

ಕಾಲಿವುಡ್​ನಲ್ಲಿ ತ್ರಿಷಾ ಕೃಷ್ಣನ್​ ಮತ್ತು ದಳಪತಿ ವಿಜಯ್​ (Thalapathy Vijay) ಅವರದ್ದು ಹಿಟ್​ ಜೋಡಿ. ಹಲವು ವರ್ಷಗಳ ಬಳಿಕ ಅವರಿಬ್ಬರು ಜೊತೆಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಫ್ಯಾನ್ಸ್​ ಸಂಭ್ರಮಿಸಿದ್ದರು. ದಳಪತಿ ವಿಜಯ್​ ನಟನೆಯ 67ನೇ ಚಿತ್ರವಾದ ‘ಲಿಯೋ’ (Leo Movie) ಸಿನಿಮಾಗೆ ತ್ರಿಷಾ ನಾಯಕಿ. ಆ ಸಿನಿಮಾದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿದೆ. ಆದರೆ ತ್ರಿಷಾ (Trisha Krishnan) ಅವರು ಈಗ ಕಾಶ್ಮೀರವನ್ನು ಬಿಟ್ಟು ವಾಪಸ್​ ಬಂದಿದ್ದಾರೆ. ಅವರು ಈ ಸಿನಿಮಾ ತಂಡದಿಂದ ಹೊರಗೆ ಬಂದಿದ್ದಾರೆ ಎಂಬ ಗಾಸಿಪ್​ ಕೂಡ ಹಬ್ಬಿದೆ. ಆದರೆ ಇದರ ಅಸಲಿ ಕಹಾನಿಯೇ ಬೇರೆ ಇದೆ.

ಹಲವು ಕಾರಣಗಳಿಂದಾಗಿ ‘ಲಿಯೋ’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಮುಹೂರ್ತ ನೆರವೇರಿತು. ಆಗ ತ್ರಿಷಾ ಮತ್ತು ದಳಪತಿ ವಿಜಯ್​ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಶೂಟಿಂಗ್ ಸಲುವಾಗಿ ಕಾಶ್ಮೀರಕ್ಕೆ ತೆರಳಿದಾಗಲೂ ಅವರಿಬ್ಬರು ಜೊತೆಯಲ್ಲೇ ಇದ್ದರು. ಆದರೆ ಈಗ ತ್ರಿಷಾ ಅವರು ಏಕಾಏಕಿ ವಾಪಸ್​ ಬಂದಿರುವುದೇಕೆ ಎಂದು ಫ್ಯಾನ್ಸ್​ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: 18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ಚಿತ್ರತಂಡದ ಜೊತೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ತ್ರಿಷಾ ಅವರು ಕಾಶ್ಮೀರದಿಂದ ವಾಪಸ್​ ಬಂದರು ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅದರ ಹಿಂದಿನ ಕಾರಣ ಬೇರೆಯೇ ಇದೆ. ಕಾಶ್ಮೀರದಲ್ಲಿ ಈಗ ಸಿಕ್ಕಾಪಟ್ಟೆ ಚಳಿ ಇದೆ. ಅದು ತ್ರಿಷಾ ಅವರ ಆರೋಗ್ಯಕ್ಕೆ ಹೊಂದಿಕೆ ಆಗುತ್ತಿಲ್ಲ. ಅವರ ಪಾಲಿನ ದೃಶ್ಯಗಳ ಶೂಟಿಂಗ್​ನಲ್ಲಿ ಭಾಗವಹಿಸಿದ ನಂತರ ಕಾಶ್ಮೀರದಲ್ಲಿಯೇ ಉಳಿದುಕೊಳ್ಳುವ ಬದಲು, ಅವರು ದೆಹಲಿಗೆ ಬಂದು ತಂಗಿದ್ದಾರೆ. ಮತ್ತೆ ಅಗತ್ಯವಿದ್ದಾಗ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಇದನ್ನೂ ಓದಿ: ರಾಜಕೀಯದ ಕಡೆ ತ್ರಿಷಾ ಒಲವು; ಕಾಂಗ್ರೆಸ್ ಸೇರಲಿದ್ದಾರೆ ‘ಪವರ್​’ ನಟಿ?

ಲೋಕೇಶ್​ ಕನಗರಾಜ್​ ಅವರು ‘ಕೈದಿ’, ‘ವಿಕ್ರಮ್​’ ಮುಂತಾದ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಆ ಚಿತ್ರಗಳಿಗೆ ‘ಲಿಯೋ’ ಸಿನಿಮಾದ ಕಥೆಯಲ್ಲಿ ಲಿಂಕ್​ ನೀಡಲಾಗುವುದು ಎಂದು ಕೂಡ ಹೇಳಲಾಗುತ್ತಿದೆ. ಅದರಲ್ಲಿ ತ್ರಿಷಾ ಪಾತ್ರ ಹೇಗೆ ಕನೆಕ್ಟ್​ ಆಗಲಿದೆ ಎಂದು ತಿಳಿಯಲು ಫ್ಯಾನ್ಸ್​ ಕಾದಿ​ದ್ದಾರೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ನಟನೆಯ 67ನೇ ಚಿತ್ರಕ್ಕೆ ‘ಲಿಯೋ’ ಎಂದು ಹೆಸರಿಟ್ಟ ನಿರ್ದೇಶಕ ಲೋಕೇಶ್​ ಕನಗರಾಜ್​​

ಈ ವರ್ಷದ ಆರಂಭದಲ್ಲೇ ದಳಪತಿ ವಿಜಯ್​ ಅವರಿಗೆ ‘ವಾರಿಸು’ ಸಿನಿಮಾದಿಂದ ಗೆಲುವು ಸಿಕ್ಕಿದೆ. ಹಾಗಾಗಿ ಅವರು ಹೊಸ ಹುಮ್ಮಸ್ಸಿನೊಂದಿಗೆ ‘ಲಿಯೋ’ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಶೀರ್ಷಿಕೆ ತಿಳಿಸಲು ಸಲುವಾಗಿ ಬಿಡುಗಡೆ ಆಗಿರುವ ಟೀಸರ್​ ಸಖತ್​ ವೈರಲ್​ ಆಗಿದೆ. ಈಗಾಗಲೇ ಈ ಸಿನಿಮಾದ ಒಟಿಟಿ ಮತ್ತು ಕಿರುತೆರೆ ಪ್ರಸಾರ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ