AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು
ಬಿಗ್ ​ಬಾಸ್​ ಮನೆ
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 7:18 AM

Share

ಬಿಗ್​ ಬಾಸ್​ ಸ್ಪರ್ಧಿಗಳು ಕ್ಯಾಮೆರಾ ಮುಂದೆ ತಮ್ಮ ಬೇಡಿಕೆ ಏನು ಎಂಬುದನ್ನು ಹೇಳಿಕೊಳ್ಳುತ್ತಾರೆ. ಕೆಲವೊಂದನ್ನು ಬಿಗ್​ ಬಾಸ್​ ನೀಡಿದರೆ, ಇನ್ನೂ ಕೆಲವೊಂದನ್ನು ಬಿಗ್​ ಬಾಸ್​ ನೀಡಿಲ್ಲ. ಈಗ ಬಿಗ್​ ಬಾಸ್​ ಮನೆ ಮಂದಿ ಹೊಸ ಬೇಡಿಕೆ ಒಂದನ್ನು ಇಟ್ಟಿದ್ದಾರೆ. ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡ ಎಂದು ಹೇಳಿದ್ದಾರೆ. 

ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆಗೆ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿದೆ. ಆದರೆ, ಈ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮನೆಯ ಅನೇಕರು ಬೇಸರ ಹೊರ ಹಾಕಿದ್ದಾರೆ.

ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಅನೇಕರಿಗೆ ಇಷ್ಟವಾಗಿಲ್ಲ.

ಇನ್ನು, ಬಿಗ್​ ಬಾಸ್​ ಮನೆಗೆ ಬಂದಾಗ ಎಲ್ಲರ ತಪ್ಪನ್ನು ಹೇಳುವ ಪ್ರಯತ್ನವನ್ನು ಮಾಡಿದ್ದು ಸ್ಪರ್ಧಿಗಳಿಗೆ ತುಂಬಾನೇ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆದಿದೆ.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದಾರೆ. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದಾರೆ. ಅಲ್ಲದೆ, ರಾಜೀವ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಇದೇ ರೀತಿಯ ಅಭಿಪ್ರಾಯ ಹೊರ ಹಾಕಿದ್ದಾರೆ.

ಈ ವೇಳೆ ಶುಭಾ ಮಂಜು ಹಾಗೂ ವಿಶ್ವನಾಥ್​ಗೆ ಬುದ್ಧಿವಾದ ಹೇಳಿದ್ದಾರೆ. ಬಿಗ್​ ಬಾಸ್​ ಮನೆಗೆ ಯಾರೇ ಬರಲಿ. ನೀವು ಆಡಿದ ರೀತಿಯಲ್ಲೇ ಆಡಿ. ನಿಮ್ಮ ತನವನ್ನು ನೀವು ಉಳಿಸಿಕೊಳ್ಳಿ. ಆಗ ಏನು ತೊಂದರೆ ಆಗುವುದಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..

(Wild card entry should not take Place in Bigg Boss Kannada says Raghu Gowda)

Follow Us
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ